ಸಾಂದರ್ಭಿಕ ಚಿತ್ರ 
ರಾಜ್ಯ

ಮೃತಪಟ್ಟ ಕಾರ್ಮಿಕ ಸಂತ್ರಸ್ತ ಕುಟುಂಬಕ್ಕೆ ಪರಿಹಾರ ರು.5 ಲಕ್ಷಕ್ಕೆ ಏರಿಕೆ

ಕೆಲಸದ ವೇಳೆ ಮೃತಪಡುವ ಕಟ್ಟಡ ಕಾರ್ಮಿಕರು ಹಾಗೂ ಕ್ವಾರಿ ಕಾರ್ಮಿಕರ ಸಂತ್ರಸ್ತ ಕುಟುಂಬಕ್ಕೆ ನೀಡುತ್ತಿದ್ದ ಪರಿಹಾರ ಧನವನ್ನು...

ಬೆಂಗಳೂರು: ಕೆಲಸದ ವೇಳೆ ಮೃತಪಡುವ ಕಟ್ಟಡ ಕಾರ್ಮಿಕರು ಹಾಗೂ ಕ್ವಾರಿ ಕಾರ್ಮಿಕರ ಸಂತ್ರಸ್ತ ಕುಟುಂಬಕ್ಕೆ ನೀಡುತ್ತಿದ್ದ ಪರಿಹಾರ ಧನವನ್ನು ರು.3ಲಕ್ಷದಿಂದ ರು.5ಲಕ್ಷದವರೆಗೆ ಏರಿಕೆ ಮಾಡಲಾಗಿದೆ. 
ನಿನ್ನೆ ಕಾರ್ಮಿಕ ಸಚಿವ ಪಿ ಟಿ ಪರಮೇಶ್ವರ ನಾಯ್ಕ ಅವರು ಕಟ್ಟಡ ಕಾರ್ಮಿಕರು ಹಾಗೂ ಕ್ವಾರಿ ಕಾರ್ಮಿಕರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಮೃತಪಟ್ಟ ಕಾರ್ಮಿಕ ಕುಟುಂಬದವರಿಗೆ ರು.5ಲಕ್ಷದವರೆಗೆ ಪರಿಹಾರ ನೀಡಲು ನಿರ್ಧರಿಸಲಾಗಿದೆ. 
ಆದರೆ, ಈ ಪರಿಹಾರ ಪಡೆಯಲು ಷರತ್ತು ಅನ್ವಯವಾಗಲಿದೆ. ಕಟ್ಟಡ ಕಾರ್ಮಿಕರು ಹಾಗೂ ಕ್ವಾರಿ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಹೆಸರು ನೋಂದಾಯಿಸಿದ ಕಾರ್ಮಿಕರಿಗೆ ಮಾತ್ರ ಈ ಸೌಲಭ್ಯ ಸಿಗಲಿದೆ ಎಂದು ಸಚಿವರು ಹೇಳಿದ್ದಾರೆ. 
ಕಾರ್ಮಿಕರ ಕುಟುಂಬಕ್ಕೆ ನೀಡುವ ವೈದ್ಯಕೀಯ ಸಹಾಯದ ಮೊತ್ತವನ್ನು ರು.2 ಲಕ್ಷಕ್ಕೆ ಹೆಚ್ಚಿಸಬೇಕೆಂಬ ಬೇಡಿಕೆ ಇದೆ ಈ ಬಗ್ಗೆ ಮಂಡಳಿಯ ಸಬೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದ ಅವರು, ಈವರೆಗೆ ಮಂಡಳಿಯಲ್ಲಿ 10.10 ಲಕ್ಷ ಕಾರ್ಮಿಕರು ನೋಂದಾಯಿಸಿಕೊಂಡಿದ್ದು, ಅವರು ಈ ಸೌಲಭ್ಯ ಪಡೆಯಲಿದ್ದಾರೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿಎಂ ಡಿಕೆಶಿ ರಣತಂತ್ರ: ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ, DKS ಆಪ್ತನಿಗೆ ಟಿಕೆಟ್ ಘೋಷಣೆ!

ರಾಮಲಿಂಗಾರೆಡ್ಡಿಗೆ ಮಾತು ಕೊಟ್ಟಿದ್ದು ನಿಜ, ಆದ್ರೆ...: ಖಾತೆ ಕೈತಪ್ಪಲು ಕಾರಣ ಬಿಚ್ಚಿಟ್ಟ ಸಿಎಂ ಡಿ.ಕೆ ಶಿವಕುಮಾರ್; Video

ಭಾರತೀಯರಿಗೆ ಬಂಪರ್: ಕಚ್ಚಾ ತೈಲ ಬಿಕ್ಕಟಿನ ನಡುವೆ ಅಂಡಮಾನ್ ದ್ವೀಪದಲ್ಲಿ ಹೊಸ ನೈಸರ್ಗಿಕ ಅನಿಲ ನಿಕ್ಷೇಪ ಪತ್ತೆ! Video ನೋಡಿ

ಅಧಿಕಾರ ಹೋದ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ: ಎದುರಿಗೆ ಬಂದರೂ DKS-Siddu ನಡುವೆ ಮಾತಿಲ್ಲ, ಕಥೆಯಿಲ್ಲ; Video

Peddi: ಪಾತ್ರಕ್ಕೆ ತಕ್ಕಂತೆ ಜಾನ್ವಿ ಕಪೂರ್ ನಟಿಸಿದ್ರೂ ಎಡಿಟರ್ ಕಣ್ಣು ಮಾತ್ರ ಎದೆ, ಸೊಂಟದ ಮೇಲೆ ಯಾಕೆ? ನೆಟ್ಟಿಗರ ತರಾಟೆ!

SCROLL FOR NEXT