ಸಾಂದರ್ಭಿಕ ಚಿತ್ರ 
ರಾಜ್ಯ

ಮೃತಪಟ್ಟ ಕಾರ್ಮಿಕ ಸಂತ್ರಸ್ತ ಕುಟುಂಬಕ್ಕೆ ಪರಿಹಾರ ರು.5 ಲಕ್ಷಕ್ಕೆ ಏರಿಕೆ

ಕೆಲಸದ ವೇಳೆ ಮೃತಪಡುವ ಕಟ್ಟಡ ಕಾರ್ಮಿಕರು ಹಾಗೂ ಕ್ವಾರಿ ಕಾರ್ಮಿಕರ ಸಂತ್ರಸ್ತ ಕುಟುಂಬಕ್ಕೆ ನೀಡುತ್ತಿದ್ದ ಪರಿಹಾರ ಧನವನ್ನು...

ಬೆಂಗಳೂರು: ಕೆಲಸದ ವೇಳೆ ಮೃತಪಡುವ ಕಟ್ಟಡ ಕಾರ್ಮಿಕರು ಹಾಗೂ ಕ್ವಾರಿ ಕಾರ್ಮಿಕರ ಸಂತ್ರಸ್ತ ಕುಟುಂಬಕ್ಕೆ ನೀಡುತ್ತಿದ್ದ ಪರಿಹಾರ ಧನವನ್ನು ರು.3ಲಕ್ಷದಿಂದ ರು.5ಲಕ್ಷದವರೆಗೆ ಏರಿಕೆ ಮಾಡಲಾಗಿದೆ. 
ನಿನ್ನೆ ಕಾರ್ಮಿಕ ಸಚಿವ ಪಿ ಟಿ ಪರಮೇಶ್ವರ ನಾಯ್ಕ ಅವರು ಕಟ್ಟಡ ಕಾರ್ಮಿಕರು ಹಾಗೂ ಕ್ವಾರಿ ಕಾರ್ಮಿಕರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಮೃತಪಟ್ಟ ಕಾರ್ಮಿಕ ಕುಟುಂಬದವರಿಗೆ ರು.5ಲಕ್ಷದವರೆಗೆ ಪರಿಹಾರ ನೀಡಲು ನಿರ್ಧರಿಸಲಾಗಿದೆ. 
ಆದರೆ, ಈ ಪರಿಹಾರ ಪಡೆಯಲು ಷರತ್ತು ಅನ್ವಯವಾಗಲಿದೆ. ಕಟ್ಟಡ ಕಾರ್ಮಿಕರು ಹಾಗೂ ಕ್ವಾರಿ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಹೆಸರು ನೋಂದಾಯಿಸಿದ ಕಾರ್ಮಿಕರಿಗೆ ಮಾತ್ರ ಈ ಸೌಲಭ್ಯ ಸಿಗಲಿದೆ ಎಂದು ಸಚಿವರು ಹೇಳಿದ್ದಾರೆ. 
ಕಾರ್ಮಿಕರ ಕುಟುಂಬಕ್ಕೆ ನೀಡುವ ವೈದ್ಯಕೀಯ ಸಹಾಯದ ಮೊತ್ತವನ್ನು ರು.2 ಲಕ್ಷಕ್ಕೆ ಹೆಚ್ಚಿಸಬೇಕೆಂಬ ಬೇಡಿಕೆ ಇದೆ ಈ ಬಗ್ಗೆ ಮಂಡಳಿಯ ಸಬೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದ ಅವರು, ಈವರೆಗೆ ಮಂಡಳಿಯಲ್ಲಿ 10.10 ಲಕ್ಷ ಕಾರ್ಮಿಕರು ನೋಂದಾಯಿಸಿಕೊಂಡಿದ್ದು, ಅವರು ಈ ಸೌಲಭ್ಯ ಪಡೆಯಲಿದ್ದಾರೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT