ಬರದಿಂದ ಬತ್ತಿರುವ ಕೆರೆ 
ರಾಜ್ಯ

ಕೆರೆಗಳ ಪುನಶ್ಚೇತನಕ್ಕೆ ಕೆರೆ ಸಂಜೀವಿನಿ ಯೋಜನೆ

ರಾಜ್ಯದಲ್ಲಿ ನೀರಿಗಾಗಿ ಬರ ಎದುರಾಗಿದ್ದು, ಮುಂದಿನ ದಿನಗಳಲ್ಲಿ ನೀರಿನ ಕೊರತೆಯನ್ನು ಎದುರಿಸಲು ಸರ್ಕಾರ ಕೆರೆ ಸಂಜೀವಿನಿ ಎಂಬ ಹೊಸ ಯೋಜನೆಯನ್ನು ರೂಪಿಸಿದೆ.

ಕಾರವಾರ: ರಾಜ್ಯದಲ್ಲಿ ನೀರಿಗಾಗಿ ಬರ ಎದುರಾಗಿದ್ದು, ಮುಂದಿನ ದಿನಗಳಲ್ಲಿ ನೀರಿನ ಕೊರತೆಯನ್ನು ಎದುರಿಸಲು ಸರ್ಕಾರ ಕೆರೆ ಸಂಜೀವಿನಿ ಎಂಬ ಹೊಸ ಯೋಜನೆಯನ್ನು ರೂಪಿಸಿದೆ.
ಕೆರೆಗಳನ್ನು ಪುನರುಜ್ಜೀವನಗೊಳಿಸಲಿರುವುದು ಕೆರೆ ಸಂಜೀವಿನಿಯ ಉದ್ದೆಶವಾಗಿದ್ದು, ಜೀವನಾಡಿಯಾಗಿರುವ ನೀರಿನ ಮೂಲವನ್ನು ಪುನರುಜ್ಜೀವನಗೊಳಿಸಲು ಸರ್ಕಾರ ಮುಂದಾಗಿದೆ. ಕೆರೆಗಳು ಸಂಪೂರ್ಣ ಬತ್ತಿಹೋಗಿದ್ದು ಈ ವರ್ಷ ನೀರಿಗೆ ಹಾಹಾಕಾರ ಉಂಟಾಗಿದೆ. ಇದರ ಪರಿಣಾಮವಾಗಿ ಎಚ್ಚೆತ್ತಿರುವ ರಾಜ್ಯ ಸರ್ಕಾರ ಜೂ.15 ರೊಳಗೆ ಬರ ಪೀಡಿತ ಪ್ರದೇಶದ ಕೆರೆಗಳಲ್ಲಿ ಹೂಳೆತ್ತುವ ಕಾಮಗಾರಿಯನ್ನು ಪೂರ್ಣಗೊಳಿಸಲು ಸೂಚನೆ ನೀಡಿದೆ.
ಪಂಚಾಯತ್ ರಾಜ್ ಅಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಅಡಿಯಲ್ಲಿ ಬರುವ ಸುವರ್ಣ ಗ್ರಾಮೋದ್ಯೋಗ ಯೋಜನೆಯ ನಿರ್ದೇಶಕ ನಾಗರಾಜ್, ಕೆರೆಗಳನ್ನು ಪುನರುಜ್ಜೀವನಗೊಳಿಸಲು ಆದೇಶ ಹೊರಡಿಸಿದ್ದಾರೆ. ರೈತರು ಕೆರೆಗಳ ಹೂಳನ್ನು ಜಮೀನಿಗೆ ಕೊಂಡೊಯ್ಯಲು ಅವಕಾಶ ಇರುವ ಕೆರೆಗಳ ಪುನರುಜ್ಜೀವನಕ್ಕೆ ಮೊದಲ ಆದ್ಯತೆ ನೀಡಲಾಗುತ್ತದೆ. ಕೆರೆಯಿಂದ ಹೊರತೆಗೆಯಲಾಗುವ ಹೂಳು ಕೃಷಿ ಭೂಮಿಗೆ ಉಪಯುತವಾಗಿದ್ದು ಇಳುವರಿಯನ್ನು ಹೆಚ್ಚಿಸುತ್ತದೆ. ಈ ಹಿನ್ನೆಲೆಯಲ್ಲಿ ಹೂಳನ್ನು ಜಮೀನಿಗೆ ಕೊಂಡೊಯ್ಯಲು ಅವಕಾಶ ವಿರುವ ಕೆರೆಗಳನ್ನು ಶೀಘ್ರವೇ ಪುನರುಜ್ಜೀವನಗೊಳಿಸಲಾಗುತ್ತದೆ ಎಂದು ತಿಳಿಸಲಾಗಿದೆ. 
ಇನ್ನು ಪುನರುಜ್ಜೀವನಗೊಳಿಸಬೇಕಾಗಿರುವ ಕೆರೆಗಳನ್ನು ಗುರುತಿಸಲು ಜಿಲ್ಲಾ ಪಂಚಾಯಿತಿ ಸಿಇಒ, ಪಂಚಾಯತ್ ರಾಜ್ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಗಳನ್ನು ನಿಯೋಜಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT