ಸಾಂದರ್ಭಿಕ ಚಿತ್ರ 
ರಾಜ್ಯ

ಡ್ರೈವರ್ ನ ಕಾರ್ ವೀಲಿಂಗ್ ಕ್ರೇಜ್ ಗೆ ಬಲಿಯಾದಳು ಯುವತಿ

ಡ್ರೈವರ್ ನ ವೀಲಿಂಗ್ ಕ್ರೇಜ್​ನಿಂದಾಗಿ ಕಾರು ಹಾಗೂ ಬಸ್ಸು ಪರಸ್ಪರ ಡಿಕ್ಕಿಯಾಗಿ ಕಾರಿನಲ್ಲಿದ್ದ 25ರ ಹರೆಯದ ಯುವತಿ ಸ್ಥಳದಲ್ಲಿಯೇ ಮೃತಪಟ್ಟಿರುವ ...

ಮಡಿಕೇರಿ: ಡ್ರೈವರ್ ನ ವೀಲಿಂಗ್ ಕ್ರೇಜ್​ನಿಂದಾಗಿ ಕಾರು ಹಾಗೂ ಬಸ್ಸು ಪರಸ್ಪರ ಡಿಕ್ಕಿಯಾಗಿ ಕಾರಿನಲ್ಲಿದ್ದ 25ರ ಹರೆಯದ ಯುವತಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.

ಮೈಸೂರು- ಮಡಿಕೇರಿ ರಾಜ್ಯ ಹೆದ್ದಾರಿಯ ಕೆದಕಲ್ ತಿರುವಿನಲ್ಲಿ ಸೋಮವಾರ ಕೆಎಸ್​ಆರ್​ಟಿಸಿ ಬಸ್ಸಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೈಸೂರಿನ ರಾಜೇಂದ್ರನಗರದ ಕೇಸರಿ ನಿವಾಸಿ ಚೈತ್ರಾ (25) ಸಾವನ್ನಪ್ಪಿದ್ದಾಳೆ.

ಗಂಭೀರವಾಗಿ ಗಾಯ ಗೊಂಡ ಮೈಸೂರಿನ ಸದನ್ ಎಂಬಾತನನ್ನು ಜಿಲ್ಲಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ಒಯ್ಯಲಾಯಿತು. ಮೈಸೂರಿನ ನಂದಿನಿ, ರೇಣುಕಾ, ವಿನಯ್ ಹಾಗೂ ಮಿಥುನ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಗೆ ಕಾರು ಚಾಲಕನ ಬೇಜವಾಬ್ದಾರಿಯೇ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ. ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

SCROLL FOR NEXT