ಸಾಂದರ್ಭಿಕ ಚಿತ್ರ 
ರಾಜ್ಯ

1 ಕೆಜಿ ಚಿನ್ನವನ್ನು ಗುದದ್ವಾರದಲ್ಲಿಟ್ಟುಕೊಂಡು ಸಾಗಿಸುತ್ತಿದ್ದ ಮಹಿಳೆ ಬಂಧನ

1 ಕೆ.ಜಿ. ಬಂಗಾರವನ್ನು ಗುದದ್ವಾರದಲ್ಲಿಟ್ಟುಕೊಂಡು ಅಕ್ರಮ ಸಾಗಾಣಿಕೆಗೆ ಯತ್ನಿಸಿದ್ದ ಹೈದರಾಬಾದ್ ಮೂಲದ ಚಾಲಾಕಿ ಮಹಿಳೆಯನ್ನು ಕೆಂಪೇಗೌಡ ..

ಬೆಂಗಳೂರು:  1 ಕೆ.ಜಿ. ಬಂಗಾರವನ್ನು ಗುದದ್ವಾರದಲ್ಲಿಟ್ಟುಕೊಂಡು ಅಕ್ರಮ ಸಾಗಾಣಿಕೆಗೆ ಯತ್ನಿಸಿದ್ದ ಹೈದರಾಬಾದ್ ಮೂಲದ ಚಾಲಾಕಿ ಮಹಿಳೆಯನ್ನು  ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸೀಮಾಸುಂಕ ಅಧಿಕಾರಿಗಳು ಬಂಧಿಸಿದ್ದಾರೆ.

ಹೈದರಾಬಾದ್‌ ಮೂಲದ ರಹೀಂ ಮುನ್ನಿಸಾ ಬಂಧಿತ ಮಹಿಳೆ. ದುಬೈನಿಂದ ಎಮಿರೇಟ್ಸ್ ಇಕೆ-506 ಮುಂಜಾನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ ಆಕೆಯನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ಆರೋಪಿ ಮಹಿಳೆಯಿಂದ 35 ಲಕ್ಷ ರೂ. ಮೌಲ್ಯದ 1.17 ಕೆ.ಜಿ. ತೂಕದ 10 ಚಿನ್ನದ ಬಿಸ್ಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. 6 ತಿಂಗಳ ಹಿಂದೆ ಮನೆಗೆಲಸದ ಸಲುವಾಗಿ ದುಬೈಗೆ ಹೋಗಿದ್ದ ರಹೀಂ ಮುನ್ನಿಸಾ, ಮಂಗಳವಾರ ಬೆಂಗಳೂರು ಮಾರ್ಗವಾಗಿ ಹೈದರಾಬಾದ್‌ಗೆ ತೆರಳಲು ಆಕೆ ಮುಂದಾಗಿದ್ದಳು.

ಅಕ್ರಮ ಚಿನ್ನ ಸಾಗಾಣಿಕೆ ಬಗ್ಗೆ ಖಚಿತ ಮಾಹಿತಿ ಪಡೆದ ಅಧಿಕಾರಿಗಳು, ದುಬೈನಿಂದ ಮುಂಜಾನೆ 4 ಗಂಟೆಗೆ ಬಂದಿಳಿದ ರಹೀಂಳನ್ನು ತೀವ್ರ ತಪಾಸಣೆಗೊಳಪಡಿಸಿದಾಗ ಸತ್ಯ ಬಯಲಾಗಿದೆ ಎಂದು ಮೂಲಗಳು ಹೇಳಿವೆ.

ದುಬೈ ವಿಮಾನದಲ್ಲಿ ಸ್ಮಗ್ಲಿಂಗ್‌ ನಡೆದಿರುವ ಕುರಿತು ಸುಳಿವು ಸಿಕ್ಕಿತು. ಆಗ 4 ಗಂಟೆಗೆ ವಿಮಾನಕ್ಕೆ ಬಂದಿಳಿದ ಪ್ರಯಾಣಿಕರನ್ನು ಮೇಲೆ ನಿಗಾವಹಿಸಲಾಗಿತ್ತು. ಆ ವೇಳೆ ರಹೀಂ ಮುನ್ನಿಸಾ ನಡವಳಿಕೆಯೂ ಶಂಕೆ ಮೂಡಿಸಿತು. ಲೋಹ ಪರಿಶೋಧಕದಲ್ಲಿ ತಪಾಸಣೆಗೊಳಪಡದೆ ತಪ್ಪಿಸಿಕೊಳ್ಳಲು ಆಕೆ ಪ್ರಯತ್ನಿಸುತ್ತಿದ್ದಳು. ಇದರಿಂದ ಅನುಮಾನಗೊಂಡು ಆಕೆಯನ್ನು ವಶಕ್ಕೆ ಪಡೆದು ತಪಾಸಣೆಗೊಳಪಡಿಸಿದಾಗ ಗುದದ್ವಾರದಲ್ಲಿ ಬಂಗಾರ ಪತ್ತೆಯಾಯಿತು.

ಕಳೆದ ಫೆಬ್ರವರಿಯಲ್ಲಿ ಕೊಂಡೂರು ತುಳಸಮ್ಮ ಎಂಬ ಮಹಿಳೆ ವ್ಹೀಲ್ ಚೇರ್ ನಲ್ಲಿ 38 ಗೋಲ್ಡ್ ಬಿಸ್ಕಟ್ಸ್ ಗಳನ್ನು ಸಾಗಿಸುತ್ತಿದ್ದ ವೇಳೆ ಅನುಮಾನ ಬಂದ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಸಿಕ್ಕಿಬಿದ್ದಿದ್ದಳು.  4 ಲಕ್ಷ ರು. ಕಮಿಷನ್ ಹಣಕ್ಕಾಗಿ ಮಹಿಳೆ ಈ ರೀತಿಯ ಕೆಲಸ ಮಾಡಿದ್ದಳು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT