ಸಾಂದರ್ಭಿಕ ಚಿತ್ರ 
ರಾಜ್ಯ

1 ಕೆಜಿ ಚಿನ್ನವನ್ನು ಗುದದ್ವಾರದಲ್ಲಿಟ್ಟುಕೊಂಡು ಸಾಗಿಸುತ್ತಿದ್ದ ಮಹಿಳೆ ಬಂಧನ

1 ಕೆ.ಜಿ. ಬಂಗಾರವನ್ನು ಗುದದ್ವಾರದಲ್ಲಿಟ್ಟುಕೊಂಡು ಅಕ್ರಮ ಸಾಗಾಣಿಕೆಗೆ ಯತ್ನಿಸಿದ್ದ ಹೈದರಾಬಾದ್ ಮೂಲದ ಚಾಲಾಕಿ ಮಹಿಳೆಯನ್ನು ಕೆಂಪೇಗೌಡ ..

ಬೆಂಗಳೂರು:  1 ಕೆ.ಜಿ. ಬಂಗಾರವನ್ನು ಗುದದ್ವಾರದಲ್ಲಿಟ್ಟುಕೊಂಡು ಅಕ್ರಮ ಸಾಗಾಣಿಕೆಗೆ ಯತ್ನಿಸಿದ್ದ ಹೈದರಾಬಾದ್ ಮೂಲದ ಚಾಲಾಕಿ ಮಹಿಳೆಯನ್ನು  ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸೀಮಾಸುಂಕ ಅಧಿಕಾರಿಗಳು ಬಂಧಿಸಿದ್ದಾರೆ.

ಹೈದರಾಬಾದ್‌ ಮೂಲದ ರಹೀಂ ಮುನ್ನಿಸಾ ಬಂಧಿತ ಮಹಿಳೆ. ದುಬೈನಿಂದ ಎಮಿರೇಟ್ಸ್ ಇಕೆ-506 ಮುಂಜಾನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ ಆಕೆಯನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ಆರೋಪಿ ಮಹಿಳೆಯಿಂದ 35 ಲಕ್ಷ ರೂ. ಮೌಲ್ಯದ 1.17 ಕೆ.ಜಿ. ತೂಕದ 10 ಚಿನ್ನದ ಬಿಸ್ಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. 6 ತಿಂಗಳ ಹಿಂದೆ ಮನೆಗೆಲಸದ ಸಲುವಾಗಿ ದುಬೈಗೆ ಹೋಗಿದ್ದ ರಹೀಂ ಮುನ್ನಿಸಾ, ಮಂಗಳವಾರ ಬೆಂಗಳೂರು ಮಾರ್ಗವಾಗಿ ಹೈದರಾಬಾದ್‌ಗೆ ತೆರಳಲು ಆಕೆ ಮುಂದಾಗಿದ್ದಳು.

ಅಕ್ರಮ ಚಿನ್ನ ಸಾಗಾಣಿಕೆ ಬಗ್ಗೆ ಖಚಿತ ಮಾಹಿತಿ ಪಡೆದ ಅಧಿಕಾರಿಗಳು, ದುಬೈನಿಂದ ಮುಂಜಾನೆ 4 ಗಂಟೆಗೆ ಬಂದಿಳಿದ ರಹೀಂಳನ್ನು ತೀವ್ರ ತಪಾಸಣೆಗೊಳಪಡಿಸಿದಾಗ ಸತ್ಯ ಬಯಲಾಗಿದೆ ಎಂದು ಮೂಲಗಳು ಹೇಳಿವೆ.

ದುಬೈ ವಿಮಾನದಲ್ಲಿ ಸ್ಮಗ್ಲಿಂಗ್‌ ನಡೆದಿರುವ ಕುರಿತು ಸುಳಿವು ಸಿಕ್ಕಿತು. ಆಗ 4 ಗಂಟೆಗೆ ವಿಮಾನಕ್ಕೆ ಬಂದಿಳಿದ ಪ್ರಯಾಣಿಕರನ್ನು ಮೇಲೆ ನಿಗಾವಹಿಸಲಾಗಿತ್ತು. ಆ ವೇಳೆ ರಹೀಂ ಮುನ್ನಿಸಾ ನಡವಳಿಕೆಯೂ ಶಂಕೆ ಮೂಡಿಸಿತು. ಲೋಹ ಪರಿಶೋಧಕದಲ್ಲಿ ತಪಾಸಣೆಗೊಳಪಡದೆ ತಪ್ಪಿಸಿಕೊಳ್ಳಲು ಆಕೆ ಪ್ರಯತ್ನಿಸುತ್ತಿದ್ದಳು. ಇದರಿಂದ ಅನುಮಾನಗೊಂಡು ಆಕೆಯನ್ನು ವಶಕ್ಕೆ ಪಡೆದು ತಪಾಸಣೆಗೊಳಪಡಿಸಿದಾಗ ಗುದದ್ವಾರದಲ್ಲಿ ಬಂಗಾರ ಪತ್ತೆಯಾಯಿತು.

ಕಳೆದ ಫೆಬ್ರವರಿಯಲ್ಲಿ ಕೊಂಡೂರು ತುಳಸಮ್ಮ ಎಂಬ ಮಹಿಳೆ ವ್ಹೀಲ್ ಚೇರ್ ನಲ್ಲಿ 38 ಗೋಲ್ಡ್ ಬಿಸ್ಕಟ್ಸ್ ಗಳನ್ನು ಸಾಗಿಸುತ್ತಿದ್ದ ವೇಳೆ ಅನುಮಾನ ಬಂದ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಸಿಕ್ಕಿಬಿದ್ದಿದ್ದಳು.  4 ಲಕ್ಷ ರು. ಕಮಿಷನ್ ಹಣಕ್ಕಾಗಿ ಮಹಿಳೆ ಈ ರೀತಿಯ ಕೆಲಸ ಮಾಡಿದ್ದಳು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT