ಬಿಬಿಎಂಪಿ ಕೌನ್ಸಿಲ್ ಸಭೆ 
ರಾಜ್ಯ

ಆಸ್ತಿ ತೆರಿಗೆ ಹೆಚ್ಚಳ: ಬಿಬಿಎಂಪಿಯಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಜಟಾಪಟಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೌನ್ಸಿಲ್ ಸಭೆಯಲ್ಲಿ ಆಸ್ತಿ ತೆರಿಗೆ ಏರಿಕೆ ವಿರೋಧಿಸಿ ಬಿಜೆಪಿ ಸದಸ್ಯರು ಗುರುವಾರ ಪ್ರತಿಭಟನೆ ನಡೆಸಿದ್ದರ...

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೌನ್ಸಿಲ್ ಸಭೆಯಲ್ಲಿ ಆಸ್ತಿ ತೆರಿಗೆ ಏರಿಕೆ ವಿರೋಧಿಸಿ ಬಿಜೆಪಿ ಸದಸ್ಯರು ಗುರುವಾರ ಪ್ರತಿಭಟನೆ ನಡೆಸಿದ್ದರ ಪರಿಣಾಮ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು.
ಆಸ್ತಿ ತೆರಿಗೆ ಹೆಚ್ಚಳ ನಿರ್ಧಾರ ವಾಪಸು ಪಡೆಯುವ ಸಂಬಂಧ ನಿರ್ಣಯ ಕೈಗೊಂಡು ಸರ್ಕಾರಕ್ಕೆ ಕಳುಹಿಸುವಂತೆ ಆಗ್ರಹಿಸಿ ಬಿಜೆಪಿ ಸದಸ್ಯರು ಧರಣಿ ನಡೆಸಿದರು. ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆಯಿತು. 
ಕೆಳ ಮತ್ತು ಮಧ್ಯಮ ವರ್ಗದ ಜನತೆಗೆ ತೆರಿಗೆ ಹೆಚ್ಚಳ ಮಾರಕವಾಗಿದ್ದು, ಕೂಡಲೇ ಆಸ್ತಿ ತೆರಿಗೆಯನ್ನು ರದ್ದುಪಡಿಸಬೇಕೆಂದು ಪ್ರತಿಪಕ್ಷದ ಬಿಜೆಪಿ ಸದಸ್ಯರು ಆಗ್ರಹಪಡಿಸುತ್ತಿದ್ದಂತೆ ಕಾಂಗ್ರೆಸ್ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಇದರಿಂದ ಇಡೀ ಸಭೆ ಕೆಲ ಕಾಲ ಗೊಂದಲ, ಕೋಲಾಹಲದಲ್ಲಿ ಮುಳುಗಿತ್ತು.
ತೆರಿಗೆ ಹೆಚ್ಚಳವನ್ನು ವಾಪಸ್ ಪಡೆಯುವವರೆಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಪದ್ಮನಾಭ ರಡ್ಡಿ ಎಚ್ಚರಿಸಿದರು. ಆದರೆ ಇದಕ್ಕೆ ಜಗ್ಗದ ಮೇಯರ್ ಮಂಜುನಾಥ್ ರೆಡ್ಡಿ ಅವರು, ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ತೆಗೆದುಕೊಂಡ ನಿರ್ಧಾರ ಇದು, ನಿಮ್ಮ ಕಾಲದ ಕೂಸು ಇದು ಎಂದು ತಿರುಗೇಟು ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT