ಎಚ್.ಕೆ ಪಾಟೀಲ್ 
ರಾಜ್ಯ

ಗ್ರಾಮೀಣಾಭಿವೃದ್ಧಿ ಇಲಾಖೆಯ ಪ್ರಮುಖ ಕಡತಗಳೇ ನಾಪತ್ತೆ!

ಆದರೆ ಈಗ ಮತ್ತೊಂದು ಆಘಾತಕಾರಿ ವಿಷಯವೆಂದರೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕೆಲ ನಿರ್ಣಾಯಕ ಕಡತಗಳೇ ನಾಪತ್ತೆಯಾಗಿವೆ. ...

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಶೀಘ್ರವೇ ಮತ್ತೊಂದು ಹಗರಣದಲ್ಲಿ ಸಿಲುಕುವ ಸಾಧ್ಯತೆಯಿದೆ. ನೀರಿನ ಶುದ್ದತೆ ಪರೀಕ್ಷೆ ಮಾಡುವ ಪ್ರಯೋಗಾಲಯ ಸ್ಥಾಪನೆ ಸಂಬಂಧ ನೂರಾರು ಕೋಟಿ ವಂಚನೆ ನಡೆದಿತ್ತು. 

ಆದರೆ ಈಗ ಮತ್ತೊಂದು ಆಘಾತಕಾರಿ ವಿಷಯವೆಂದರೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕೆಲ ನಿರ್ಣಾಯಕ ಕಡತಗಳೇ ನಾಪತ್ತೆಯಾಗಿವೆ.

ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕಾಗಿದ್ದ ಕಡತದ ಜೊತೆಗೆ ಸುಮಾರು 40 ಫೈಲ್ ಗಳು ನಾಪತ್ತೆಯಾಗಿವೆ. ಇನ್ನೂ ಪಂಚಾಯತ್ ರಾಜ್ ಇಲಾಖೆ ಸಚಿವ ಎಚ್ .ಕೆ ಪಾಟೀಲ್ ಇಲಾಖಾ ಕಾರ್ಯದರ್ಶಿಗೆ ತನಿಖೆ ಮಾಡಿ ವರದಿ ಸಲ್ಲಿಸುವಂತೆ ಆದೇಶಿಸಿದ್ದಾರೆ.

ಒಂದು ವೇಳೆ ಇಲಾಖಾ ಕಾರ್ಯದರ್ಶಿ ತನಿಖೆ ನಡೆಸಿ ಕಡತಗಳನ್ನು ಕಳ್ಳತನ ಮಾಡಿರುವ ಕಳ್ಳನನ್ನು ಪತ್ತೆ ಹಚ್ಚುವಲ್ಲಿ ವಿಫಲವಾದರೇ ಪೊಲೀಸರಿಗೆ ದೂರು ನೀಡುವುದಾಗಿ ಹೇಳಿದ್ದಾರೆ.
ಸಚಿವರ ಆದೇಶದ ಮೇರೆಗೆ ಇಲಾಖಾ ವತಿಯಿಂದ ತನಿಖೆ ನಡೆಸುವುದಾಗಿ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT