ರೌಡಿ ಶೀಟರ್ ಯಶಸ್ವಿನಿ 
ರಾಜ್ಯ

ಬಡ್ಡಿ ಕಟ್ಟದ್ದಕ್ಕೆ ಮಹಿಳೆ ಮೇಲೆ ಹಲ್ಲೆ ನಡೆಸಿದ ಲೇಡಿ ರೌಡಿ ಬಂಧನ

ಬಡ್ಡಿ ಕಟ್ಟದಕ್ಕೆ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಸಿಲಿಕಾನ್ ಸಿಟಿಯ ರೌಡಿ ಶೀಟರ್ ಮಹಿಳೆಯನ್ನು...

ಬೆಂಗಳೂರು: ಬಡ್ಡಿ ಕಟ್ಟದಕ್ಕೆ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಸಿಲಿಕಾನ್ ಸಿಟಿಯ ರೌಡಿ ಶೀಟರ್ ಮಹಿಳೆಯನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ.
ಸಾಲ ಪಡೆದಿದ್ದ ಹಣಕ್ಕೆ ಸರಿಯಾಗಿ ಬಡ್ಡಿ ಕಟ್ಟದ ಕೊತ್ತನೂರು ದಿಣ್ಣೆಯ ತಾಯಮ್ಮಅವರಿಗೆ ರೌಡಿ ಶೀಟರ್ ಯಶಸ್ವಿನಿ ಬೆದರಿಕೆ ಹಾಕಿ ಹಲ್ಲೆ ನಡೆಸಿದ್ದಾರೆ ಎಂದು ದೂರು ನೀಡಲಾಗಿದ್ದು, ದೂರು ದಾಖಲಿಸಿಕೊಂಡ ಸುಬ್ರಮಣ್ಯಪುರ ಪೊಲೀಸರು ಬಸವನಗುಡಿ ಮಹಿಳಾ ರೌಡಿ ಯಶಸ್ವಿನಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ತಾಯಮ್ಮ ಅವರು ಗರ್ಭಕೋಶದ ಶಸ್ತ್ರ ಚಿಕಿತ್ಸೆಗಾಗಿ ರೌಡಿ ಯಶಸ್ವಿನಿಯಿಂದ ೧ ಲಕ್ಷ ರುಪಾಯಿ ಸಾಲ ಪಡೆದಿದ್ದರು. ಆದರೆ ಸಾಲ ತೀರಿಸಲು ತಡವಾಗಿದ್ದರಿಂದ ಇಂದು ಬೆಳಿಗ್ಗೆ ತಾಯಮ್ಮ ಅವರ ಮನೆಗೆ ಬಂದ ಯಶಸ್ವಿನಿ ಸಾಲದ ಹಣ ಹಾಗೂ ಬಡ್ಡಿ ಮತ್ತು ಚಕ್ರಬಡ್ಡಿ ನೀಡುವಂತೆ ಧಮಕಿ ಹಾಕಿದ್ದಾರೆ.
ನಿಧಾನವಾಗಿ ಸಾಲ ತೀರಿಸುವುದಾಗಿ ಕೇಳಿಕೊಂಡರೂ ಒಪ್ಪದ ಯಶಸ್ವಿನಿ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಾಯಮ್ಮ ದೂರಿನಲ್ಲಿ ಆರೋಪಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಿಮ್ಮ ಮೇಲೆ ನಮಗೆ ನಂಬಿಕೆ ಇದೆ, ದೇಶಕ್ಕೆ ನಿಮ್ಮ ಅವಶ್ಯಕತೆ ಇದೆ: CJP ಪ್ರತಿಭಟನೆ ನಂತರ ಮೊದಲ ಬಾರಿ Gen Z ಉದ್ದೇಶಿಸಿ ಮೋದಿ ಭಾಷಣ

ಭಾರತೀಯ ಅಭಿಮಾನಿಗಳಿಗೆ ಶಾಕ್: ಭಾರತಕ್ಕೂ ಮೊದಲು ವಿದೇಶದಲ್ಲಿ Ramayana ಚಿತ್ರ ಬಿಡುಗಡೆ; ಕಾರಣ ಬಿಚ್ಚಿಟ್ಟ ನಿರ್ಮಾಪಕ!

ಶ್ರೀಲಂಕಾ ಪ್ರವಾಸ: ಜೈಸ್ವಾಲ್ ಡಕೌಟ್, ಶತಕ ಸಿಡಿಸಿ ಭಾರತಕ್ಕೆ ಆಸರೆಯಾದ ಕನ್ನಡಿಗ ದೇವದತ್ ಪಡಿಕ್ಕಲ್

ಮೈಸೂರು: ʻಡಾಲಿʼ ಕಿರುಕುಳಕ್ಕೆ ಬೇಸತ್ತ ಮಹಿಳೆ ಆತ್ಮಹತ್ಯೆಗೆ ಶರಣು; ಡೆತ್‌ನೋಟ್‌ ಪತ್ತೆ!

ದೆಹಲಿ: ಪೊಲೀಸ್ ಅಧಿಕಾರಿ ಮಗ ಕುಡಿದು ಚಲಾಯಿಸುತ್ತಿದ್ದ ಮರ್ಸಿಡಿಸ್ ಕಾರು, ಮತ್ತೊಂದು ಕಾರಿಗೆ ಡಿಕ್ಕಿ; ವೃದ್ಧೆ ಸಾವು