ವಿಧಾನ ಸೌಧದ ಮುಂಭಾಗ ಅಂಬೇಡ್ಕರ್ ವೀದಿಯಲ್ಲಿ ಜೋರಾಗಿ ಮಳೆ ಬಂದಾಗ ರಸ್ತೆ ಮೇಲೆಲ್ಲಾ ನೀರು ತುಂಬಿಕೊಂಡು ಹರಿಯುವುದು. 
ರಾಜ್ಯ

ಮುಂಗಾರಿಗೆ ಮುನ್ನ ನಗರದ 224 ಪ್ರವಾಹ ಪೀಡಿತ ಸ್ಥಳಗಳನ್ನು ರಿಪೇರಿ ಮಾಡಲಿರುವ ಬಿಬಿಎಂಪಿ

ನಗರದಲ್ಲಿ ಜೋರಾಗಿ ಅರ್ಧ ಗಂಟೆ ಮಳೆ ಬಂದರೆ ಸಾಕು ಅನೇಕ ಕಡೆಗಳಲ್ಲಿ ರಸ್ತೆಯಲ್ಲಿ ನೀರು ತುಂಬಿ ಪ್ರವಾಹವೇ ...

ಬೆಂಗಳೂರು: ನಗರದಲ್ಲಿ ಜೋರಾಗಿ ಅರ್ಧ ಗಂಟೆ ಮಳೆ ಬಂದರೆ ಸಾಕು ಅನೇಕ ಕಡೆಗಳಲ್ಲಿ ರಸ್ತೆಯಲ್ಲಿ ನೀರು ತುಂಬಿ ಪ್ರವಾಹವೇ ಉಂಟಾಗುತ್ತದೆ, ಇದ್ಯಾಕೆ ಹೀಗೆ ಎಂದು ನೀವು ಅನೇಕ ಬಾರಿ ಅಂದುಕೊಂಡಿರಬಹುದು.

ಬೆಂಗಳೂರು ನಗರದಲ್ಲಿ 80 ಮಿಲಿ ಮೀಟರ್ ನಷ್ಟು ಮಳೆ ಬಂದರೂ ಕೂಡ ನೀರು ಸರಾಗವಾಗಿ ಹರಿದು ಹೋಗುವಷ್ಟು ಸಾಮರ್ಥ್ಯವಿದೆ. ಆದರೆ ಸರಿಯಾದ ನಿರ್ವಹಣೆಯಿಲ್ಲದೆ ಮತ್ತು ಅಕ್ರಮ ಭೂ ಒತ್ತುವರಿಯಿಂದಾಗಿ 35ರಿಂದ 40 ಮಿಲಿ ಮೀಟರ್ ನಷ್ಟು ನೀರು ಬಿದ್ದರೂ ಕೂಡ ಸರಾಗವಾಗಿ ಚರಂಡಿಗಳಲ್ಲಿ ಹರಿದು ಹೋಗದೆ ರಸ್ತೆಯಲ್ಲೇ ಉಕ್ಕಿ ಹರಿಯುತ್ತದೆ. ಹಾಗಾಗಿ ಬೆಂಗಳೂರಿನಲ್ಲಿ ಒಂದರ್ಧ ಗಂಟೆ ಮಳೆ ಬಂದರೆ ಸಾಕು ರಸ್ತೆ ತುಂಬೆಲ್ಲಾ ನೀರು ತುಂಬಿ ವಾಹನ ಸಂಚಾರರಿಗೆ ಅನನುಕೂಲವಾಗುತ್ತದೆ ಎನ್ನುತ್ತಾರೆ ಹೆಸರು ಹೇಳಲಿಚ್ಛಿಸದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ.

 ಈ ವರ್ಷ ಮುಂಗಾರಿಗೆ ಮುಂಚೆ ಪ್ರವಾಹದಿಂದ ನಗರದ ನಾಗರಿಕರ ಸಮಸ್ಯೆಯನ್ನು ಬಗೆಹರಿಸಲು ಬಿಬಿಎಂಪಿ ಪ್ರಯತ್ನಿಸುತ್ತಿದೆ. ಅದಕ್ಕಾಗಿ ನಗರದ ಸುತ್ತಮುತ್ತ ಪ್ರವಾಹ ಪೀಡಿತ 224 ದುರ್ಲಲ ಜಾಗಗಳನ್ನು ಪಾಲಿಕೆ ಗುರುತಿಸಿದ್ದಾರೆ.

ಬಿಬಿಎಂಪಿ ಮುಖ್ಯ ಎಂಜಿನಿಯರ್ ಸಿದ್ದೇಗೌಡ, ಕಳೆದ ಐದು ವರ್ಷಗಳಿಂದ 224 ದುರ್ಬಲ ತಾಣಗಳನ್ನು ಗುರುತಿಸಲಾಗಿದೆ. ಇವುಗಳಲ್ಲಿ 65 ಸ್ಥಳಗಳನ್ನು ಸರಿಪಡಿಸಲಾಗಿದ್ದು, 37 ಜಾಗಗಳಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದೆ. ಉಳಿದ 122 ಸ್ಥಳಗಳನ್ನು ದುರಸ್ತಿ ಮಾಡಲು ಟೆಂಡರ್ ಕರೆಯಲಾಗಿದ್ದು ಅದು ಅಂತಿಮಗೊಳ್ಳಲಿದೆ. ಗುತ್ತಿಗೆದಾರರು ಮೇ 18ಕ್ಕೆ ಕೆಲಸ ಆರಂಭಿಸಿ ತಿಂಗಳಾಂತ್ಯಕ್ಕೆ ಮುಗಿಸುವ ನಿರೀಕ್ಷೆಯಿದೆ ಎಂದು ಹೇಳಿದರು.

ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್, ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಜೊತೆ ಮಾತನಾಡಿ, ಗುಂಡಿ ಬಿದ್ದ ರಸ್ತೆಗಳ ರಿಪೇರಿ ಮಾಡಲು ವಲಯ ಕಚೇರಿಗಳಿಗೆ ನಾವು ಹಣ ಬಿಡುಗಡೆ ಮಾಡಿದ್ದೇವೆ. ಬಿಬಿಎಂಪಿ ಹೀಗೆ ಹಾಳಾದ, ಗುಂಡಿ ಬಿದ್ದ 189 ರಸ್ತೆಗಳನ್ನು ಗುರುತಿಸಿದ್ದು, ಪೊಲೀಸರು ಕೂಡ 54 ಸ್ಥಳಗಳನ್ನು ಗುರುತಿಸಿದ್ದಾರೆ. ಕೆಲವು ಅವುಗಳಲ್ಲಿ ರಿಪೇರಿಯಾಗಿವೆ. ಮಳೆ ಬಿದ್ದ ಮೇಲೆ ನೀರು ತುಂಬಿಕೊಂಡ ರಸ್ತೆಗಳಿಂದ ನೀರನ್ನು ಹೊರ ತೆಗೆಯಲು 14 ಪ್ರಹರಿ ತಂಡಗಳನ್ನು ಕೂಡ ನಿಯೋಜಿಸಲಾಗಿದೆ ಎಂದರು.

ಇನ್ನು ಮಳೆಗಾಲದಲ್ಲಿ ಜೋರಾಗಿ ಗಾಳಿ ಬೀಸಿದಾಗ ಮರಗಳು ಬೀಳುವುದು ಬೆಂಗಳೂರಿನಲ್ಲಿ ಸಾಮಾನ್ಯವಾಗಿದೆ. ಅದಕ್ಕಾಗಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ  ಹಳೆಯದಾದ ಮರಗಳನ್ನು ಮತ್ತು  ರೆಂಬೆಗಳನ್ನು ಕತ್ತರಿಸಿ ಹಾಕುವಂತೆ ಸೂಚಿಸಿದ್ದೇವೆ ಎಂದು ಆಯುಕ್ತರು ಹೇಳಿದರು.
ಬಿಬಿಎಂಪಿಯ ಘನ ತ್ಯಾಜ್ಯ ನಿರ್ವಹಣೆಯ ವಿಶೇಷ ಆಯುಕ್ತ ಸುಬೋಧ್ ಯಾದವ್ ಇತ್ತೀಚೆಗೆ ವಲಯ ಆಯುಕ್ತರಿಗೆ ಆದೇಶವೊಂದನ್ನು ಬಿಡುಗಡೆ ಮಾಡಿ, ಅಂಡರ್ ಪಾಸ್ ಗಳ ಸಾಮೂಹಿಕ ಸ್ವಚ್ಛತೆ ನಡೆಸುವಂತೆ ಸೂಚಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT