ಪೇಜಾವರ ಶ್ರೀ 
ರಾಜ್ಯ

ಎಂಆರ್ ಪಿಎಲ್ ಗೆ ಕೃಷಿ ಭೂಮಿ ಮಂಜೂರು: ಪೇಜಾವರ ಶ್ರೀಗಳಿಂದ ತೀವ್ರ ವಿರೋಧ

ಎಂ ಆರ್ ಪಿಎಲ್ ನ ನಾಲ್ಕನೇ ಹಂತದ ವಿಸ್ತರಣೆಗಾಗಿ ರಾಜ್ಯ ಸರ್ಕಾರ 3 ,000 ಎಕರೆಯಷ್ಟು ಭೂಮಿ ನೀಡುವುದಲು ಮುಂದಾಗಿರುವುದನ್ನು ವಿಶ್ವೇಶ ತೀರ್ಥ ಸ್ವಾಮಿಗಳು ವಿರೋಧಿಸಿದ್ದಾರೆ.

ಉಡುಪಿ: ಮಂಗಳೂರಿನಲ್ಲಿ ಎಂ ಆರ್ ಪಿಎಲ್ ನ ನಾಲ್ಕನೇ ಹಂತದ ವಿಸ್ತರಣೆಗಾಗಿ ರಾಜ್ಯ ಸರ್ಕಾರ 3 ,000 ಎಕರೆಯಷ್ಟು ಭೂಮಿ ನೀಡುವುದಲು ಮುಂದಾಗಿರುವುದನ್ನು ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮಿಗಳು ವಿರೋಧಿಸಿದ್ದಾರೆ.
ಪೇಜಾವರದ ಶ್ರೀ ಕೃಷ್ಣಾ ಮಠದ ಆವರಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಪೇಜಾವರ ಸ್ವಾಮೀಜಿ, " ಇತ್ತೀಚೆಗೆ ಮಂಗಳೂರಿಗೆ ಭೇಟಿ ನೀಡಿದ್ದ ಕೈಗಾರಿಕಾ ಸಚಿವ ಆರ್ ವಿ ದೇಶಪಾಂಡೆ ಎಂಆರ್ ಪಿಎಲ್ ( ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್) ನ ವಿಸ್ತರಣೆಗಾಗಿ  3 ಸಾವಿರ ಎಕರೆಯಷ್ಟು ಕೃಷಿ ಭೂಮಿಯನ್ನು ಮಂಜೂರು ಮಾಡುವುದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಇದಕ್ಕೆ ತಮ್ಮ ವಿರೋಧವಿದೆ ಎಂದು ತಿಳಿಸಿದ್ದಾರೆ. 
ರಾಜ್ಯ ಸರ್ಕಾರ ತಕ್ಷಣವೇ ತನ್ನ ನಿರ್ಧಾರವನ್ನು ವಾಪಸ್ ಪಡೆಯಬೇಕು. ಕಳೆದ ಎರಡು ವರ್ಷಗಳ ಹಿಂದೆಯೂ ಎಂಆರ್ ಪಿಎಲ್ ನ ವಿಸ್ತರಣೆಗಾಗಿ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲಾಗಿತ್ತು. ಆಗಲೂ ವಿರೋಧ ವ್ಯಕ್ತಪಡಿಸಿದ್ದಾಗಿ ಪೇಜಾವರ ಶ್ರೀಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

SCROLL FOR NEXT