ನಮ್ಮಲ್ಲೇ ಬರ, ಆದರೂ ಕರ್ನಾಟಕದಿಂದ ನೀರು ಪಡೆಯಲಿದೆ ಮೆಹಬೂಬ್ ನಗರ! 
ರಾಜ್ಯ

ನಮ್ಮಲ್ಲೇ ಬರ, ಆದರೂ ಕರ್ನಾಟಕದಿಂದ ನೀರು ಪಡೆಯಲಿದೆ ಮೆಹಬೂಬ್ ನಗರ!

ಕರ್ನಾಟಕದಂತೆಯೇ ಹೈದರಾಬಾದ್ ನಲ್ಲೂ ಬರ ಪರಿಸ್ಥಿತಿ ಎದುರಾಗಿದ್ದು ಅಲ್ಲಿನ ಮೆಹಬೂಬ್ ನಗರದಲ್ಲಿ ಹನಿ ನೀರಿಗೂ ತತ್ವಾರ ಉಂಟಾಗಿದೆ.

ಹೈದರಾಬಾದ್: ಕರ್ನಾಟಕದಂತೆಯೇ ಹೈದರಾಬಾದ್ ನಲ್ಲೂ ಬರ ಪರಿಸ್ಥಿತಿ ಎದುರಾಗಿದ್ದು ಅಲ್ಲಿನ ಮೆಹಬೂಬ್ ನಗರದಲ್ಲಿ ಹನಿ ನೀರಿಗೂ ತತ್ವಾರ ಉಂಟಾಗಿದೆ. ಮೆಹಬೂಬ್ ನಗರಕ್ಕೆ ನೀರು ಪೂರೈಕೆಯಾಗುವ ಜುರಾಲ ಜಲಾಶಯದಲ್ಲಿ ನೀರಿನ ಕೊರತೆ ಎದುರಾಗಿರುವ ಪರಿಣಾಮ ಜನರಿಗೆ ಕುಡಿಯುವ ನೀರು ಪೂರೈಕೆ ಮಾಡಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ.

ಈ ಹಿನ್ನೆಲೆಯಲ್ಲಿ ತೆಲಂಗಾಣದ ನೀರಾವರಿ ಸಚಿವ ಹರೀಶ್ ರಾವ್, ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್ ಅವರೊಂದಿಗೆ ಚರ್ಚೆ ನಡೆಸಿದ್ದು ನಾರಾಯಣಪುರ ಜಲಾಶಯದ ಮೂಲಕ ನೀರು ನೀಡಬೇಕೆಂದು ಮನವಿ ಮಾಡಿದ್ದಾರೆ. ತೆಲಂಗಾಣದ ಬೇಡಿಕೆಗೆ ಸ್ಪಂದಿಸಿರುವ ಕರ್ನಾಟಕ ಒಂದು ಟಿಎಂಸಿ ನೀರನ್ನು ಪೂರೈಕೆ ಮಾಡಲು ಒಪ್ಪಿಗೆ ಸೂಚಿಸಿದೆ. ತೆಲಂಗಾಣ ಸಚಿವ ಟಿ ಹರೀಶ್ ರಾವ್ ಅವರು ನಾಲ್ಕು ಟಿಎಂಸಿ ನೀರಿಗಾಗಿ ಒತ್ತಾಯಿಸಿದ್ದರಾದರೂ ಕರ್ನಾಟಕ ಸರ್ಕಾರ ಒಂದು ಟಿಎಂಸಿ ನೀರನ್ನು ಮಾತ್ರ ಪೂರೈಕೆ ಮಾಡುವುದಾಗಿ ತಿಳಿಸಿದೆ.

ಕಳೆದ ವರ್ಷದ ಮುಂಗಾರಿನಲ್ಲಿ ಜುರಾಲ ಜಲಾಶಯ ಹೆಚ್ಚಿನ ನೀರಿನ ಒಳಹರಿವು ಪಡೆದಿರಲಿಲ್ಲ. ಈ ಹಿನ್ನೆಲೆಯಲ್ಲಿ ನೀರಿಗಾಗಿ ತತ್ವಾರ ಉಂಟಾಗಿದೆ. ತೆಲಂಗಾಣ ಬೇಡಿಕೆಗೆ ಸ್ಪಂದಿಸಿರುವ ರಾಜ್ಯ ಸರ್ಕಾರ ಪ್ರಸ್ತುತ 80 ಕ್ಯುಸೆಕ್ಸ್ ನಷ್ಟು ನೀರನ್ನು ಮೇ.14 ರಂದು ಬಿಡುಗಡೆ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT