ಹೈದರ್ ಸೈಯದ್ ನೂರ್ ಇರಾನಿ 
ರಾಜ್ಯ

ಕುಖ್ಯಾತ ಸರಗಳ್ಳ ಹೈದರ್ ಈಗ ಪೊಲೀಸರ ಅತಿಥಿ

25ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಲ್ಲಿ ಬೇಕಾಗಿದ್ದ ಕುಖ್ಯಾತ ಸರಗಳ್ಳನನ್ನು ಬಂಧಿಸುವಲ್ಲಿ ಪೊಲೀಸರು...

ಬೆಂಗಳೂರು: 25ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಲ್ಲಿ ಬೇಕಾಗಿದ್ದ ಕುಖ್ಯಾತ ಸರಗಳ್ಳನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆತನ ಬಳಿಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನದ ಸರಗಳನ್ನು ವಶಪಡಿಸಿಕೊಂಡಿದ್ದಾರೆ.

ಪುಣೆಯ ಹೈದರ್ ಸೈಯದ್ ನೂರ್ ಇರಾನಿ ಎಂಬುವವನು ಬೆಂಗಳೂರಿನ ಜ್ಞಾನಭಾರತಿ, ಬಾಣಸವಾಡಿ, ಚಂದ್ರಾ ಲೇ ಔಟ್, ಪೀಣ್ಯ, ವಿಜಯನಗರ, ಯಶವಂತಪುರ ಮೊದಲಾದ ಕಡೆಗಳಲ್ಲಿ ಮಹಿಳೆಯರ ಕುತ್ತಿಗೆಯಿಂದ ಸರವನ್ನು ಕಿತ್ತು ಸಂಜೆಯ ಹೊತ್ತಿಗೆ ಪುಣೆಯ ರೈಲು ಹತ್ತಿ ಪರಾರಿಯಾಗುತ್ತಿದ್ದ. ಈತ ಇರಾನಿ ಗ್ಯಾಂಗ್ ನ ಸದಸ್ಯನಾಗಿರಬೇಕೆಂದು ಸಂದೇಹ ವ್ಯಕ್ತಪಡಿಸಲಾಗಿದ್ದು, ಮಹಿಳೆಯರನ್ನು ವಂಚಿಸಿ ಚಿನ್ನಾಭರಣಗಳನ್ನು ಕದಿಯುವುದರಲ್ಲಿ ಇರಾನಿ ಗ್ಯಾಂಗ್ ಪ್ರಸಿದ್ಧವಾಗಿದೆ. ಇರಾನಿ ಗ್ಯಾಂಗ್ ನ ಅನೇಕ ಸದಸ್ಯರು ಈಗಾಗಲೇ ಜೈಲಿನಲ್ಲಿದ್ದಾರೆ.

ತನಿಖೆ ಆರಂಭ: ನಿಖರ ಮಾಹಿತಿ ಪಡೆದ ಬೆಂಗಳೂರು ಕೇಂದ್ರ ಅಪರಾಧ ವಿಭಾಗದ ಪೊಲೀಸರು ಹೈದರ್ ನನ್ನು ಪತ್ತೆಹಚ್ಚಲು ವ್ಯಾಪಕ ಬಲೆ ಬೀಸಿದ್ದರು. ಆತನನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ. ಕದ್ದ ಸರಗಳನ್ನು ಎಲ್ಲಿಡುತ್ತಿದ್ದ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ವರ್ಷ ನಡೆದ ಸರಗಳ್ಳತನ ಪ್ರಕರಣಗಳಲ್ಲಿ ಹೈದರ್ ನ ಪಾತ್ರವಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಏನೇ ಆದ್ರೂ, ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT