ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರಿನಲ್ಲಿ ಶವಸಂಸ್ಕಾರದ ವೇಳೆ ಕಣ್ಣು ಬಿಟ್ಟ ಮೃತ ಮಹಿಳೆ!

ಕಳೆದ ಮೇ 15ರಂದು ಮೃತಪಟ್ಟಿದ್ದ ಮಹಿಳೆಯೊಬ್ಬರು ಶವಸಂಸ್ಕಾರ ನಡೆಸುತ್ತಿದ್ದ ವೇಳೆಯೇ ಕಣ್ಣು ತೆರೆದ ಅಚ್ಚರಿಯ ಘಟನೆ ಮೈಸೂರು...

ಮೈಸೂರು: ಕಳೆದ ಮೇ 15ರಂದು ಮೃತಪಟ್ಟಿದ್ದ ಮಹಿಳೆಯೊಬ್ಬರು ಶವಸಂಸ್ಕಾರ ನಡೆಸುತ್ತಿದ್ದ ವೇಳೆಯೇ ಕಣ್ಣು ತೆರೆದ ಅಚ್ಚರಿಯ ಘಟನೆ ಮೈಸೂರು ನಗರದ ಅಗ್ರಹಾರದಲ್ಲಿ ನಡೆದಿದೆ.
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮೈಸೂರಿನ ಆಭರಣ ವ್ಯಾಪಾರಿ ಮಹೇಂದ್ರ ಕುಮಾರ್ ಅವರ ಪತ್ನಿ ಪದ್ಮಾ ಲೋಡಾ ಎಂಬ ಮಹಿಳೆಯನ್ನು ಮೇ 16ರಂದು ನಾರಾಯಣಶಾಸ್ತಿ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಪಾಸಣೆ ನಡೆಸಿದ ವೈದ್ಯರು, ಮಹಿಳೆ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದು, ಬದುಕುಳಿಯುವ ಸಾಧ್ಯತೆ ಕಡಿಮೆ ಎಂದು ಹೇಳಿದ್ದರು. 
ನಂತರ ಕುಟುಂಬದ ಒಪ್ಪಿಗೆ ಮೇರೆಗೆ ವೈದ್ಯರು 59 ವರ್ಷದ ಮಹಿಳೆಯನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ಆದರೆ ವೈದ್ಯರ ಮಾತನ್ನು ತಪ್ಪಾಗಿ ಅರ್ಥ ಮಾಡಿಕೊಂಡ ಪದ್ಮಾ ಮನೆಯವರು ಅಂತ್ಯಸಂಸ್ಕಾರಕ್ಕೆ ಮುಂದಾಗಿದ್ದರು.
ಮಂಗಳವಾರ ಪದ್ಮಾ ಲೋಡಾ ಅವರ ಶವಸಂಸ್ಕಾರ ನಡೆಸುತ್ತಿದ್ದ ವೇಳೆ ಕಣ್ಣು ಬಿಟ್ಟಿರುವ ಅಚ್ಚರಿಯ ಘಟನೆ ನಡೆದಿದೆ. ಮರು ಜೀವ ಪಡೆದ ಪದ್ಮಾರನ್ನು ಕೂಡಲೇ ಮತ್ತೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಖಾಸಗಿ ವಾಹಿನಿ ವರದಿ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT