ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರಿನಲ್ಲಿ ಶವಸಂಸ್ಕಾರದ ವೇಳೆ ಕಣ್ಣು ಬಿಟ್ಟ ಮೃತ ಮಹಿಳೆ!

ಕಳೆದ ಮೇ 15ರಂದು ಮೃತಪಟ್ಟಿದ್ದ ಮಹಿಳೆಯೊಬ್ಬರು ಶವಸಂಸ್ಕಾರ ನಡೆಸುತ್ತಿದ್ದ ವೇಳೆಯೇ ಕಣ್ಣು ತೆರೆದ ಅಚ್ಚರಿಯ ಘಟನೆ ಮೈಸೂರು...

ಮೈಸೂರು: ಕಳೆದ ಮೇ 15ರಂದು ಮೃತಪಟ್ಟಿದ್ದ ಮಹಿಳೆಯೊಬ್ಬರು ಶವಸಂಸ್ಕಾರ ನಡೆಸುತ್ತಿದ್ದ ವೇಳೆಯೇ ಕಣ್ಣು ತೆರೆದ ಅಚ್ಚರಿಯ ಘಟನೆ ಮೈಸೂರು ನಗರದ ಅಗ್ರಹಾರದಲ್ಲಿ ನಡೆದಿದೆ.
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮೈಸೂರಿನ ಆಭರಣ ವ್ಯಾಪಾರಿ ಮಹೇಂದ್ರ ಕುಮಾರ್ ಅವರ ಪತ್ನಿ ಪದ್ಮಾ ಲೋಡಾ ಎಂಬ ಮಹಿಳೆಯನ್ನು ಮೇ 16ರಂದು ನಾರಾಯಣಶಾಸ್ತಿ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಪಾಸಣೆ ನಡೆಸಿದ ವೈದ್ಯರು, ಮಹಿಳೆ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದು, ಬದುಕುಳಿಯುವ ಸಾಧ್ಯತೆ ಕಡಿಮೆ ಎಂದು ಹೇಳಿದ್ದರು. 
ನಂತರ ಕುಟುಂಬದ ಒಪ್ಪಿಗೆ ಮೇರೆಗೆ ವೈದ್ಯರು 59 ವರ್ಷದ ಮಹಿಳೆಯನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ಆದರೆ ವೈದ್ಯರ ಮಾತನ್ನು ತಪ್ಪಾಗಿ ಅರ್ಥ ಮಾಡಿಕೊಂಡ ಪದ್ಮಾ ಮನೆಯವರು ಅಂತ್ಯಸಂಸ್ಕಾರಕ್ಕೆ ಮುಂದಾಗಿದ್ದರು.
ಮಂಗಳವಾರ ಪದ್ಮಾ ಲೋಡಾ ಅವರ ಶವಸಂಸ್ಕಾರ ನಡೆಸುತ್ತಿದ್ದ ವೇಳೆ ಕಣ್ಣು ಬಿಟ್ಟಿರುವ ಅಚ್ಚರಿಯ ಘಟನೆ ನಡೆದಿದೆ. ಮರು ಜೀವ ಪಡೆದ ಪದ್ಮಾರನ್ನು ಕೂಡಲೇ ಮತ್ತೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಖಾಸಗಿ ವಾಹಿನಿ ವರದಿ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT