ಸಾಂದರ್ಭಿಕ ಚಿತ್ರ 
ರಾಜ್ಯ

ಸ್ನೇಹಿತನೊಂದಿಗೆ ಸಹಕರಿಸು ಎಂದ ಗಂಡನ ವಿರುದ್ಧ ಪತ್ನಿ ದೂರು, ಗಂಡ ಪರಾರಿ

ಸ್ವಂತ ಗಂಡನೇ ತನ್ನ ಪತ್ನಿಯನ್ನು ಸ್ನೇಹಿತನೊಂದಿಗೆ ಸಹಕರಿಸು ಎಂದು ಒತ್ತಾಯಿಸಿದ ವಿಲಕ್ಷಣ ಘಟನೆ ಕೊಪ್ಪಳದಲ್ಲಿ ನಡೆದಿದ್ದು, ಗಂಡನ ಒತ್ತಾಯದಿಂದ ತೀವ್ರ ನೊಂದ ಪತ್ನಿ ಆತನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾಳೆ..

ಕೊಪ್ಪಳ: ಸ್ವಂತ ಗಂಡನೇ ತನ್ನ ಪತ್ನಿಯನ್ನು ಸ್ನೇಹಿತನೊಂದಿಗೆ ಸಹಕರಿಸು ಎಂದು ಒತ್ತಾಯಿಸಿದ ವಿಲಕ್ಷಣ ಘಟನೆ ಕೊಪ್ಪಳದಲ್ಲಿ ನಡೆದಿದ್ದು, ಗಂಡನ ಒತ್ತಾಯದಿಂದ ತೀವ್ರ ನೊಂದ ಪತ್ನಿ ಆತನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾಳೆ.

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮನಾಳದಲ್ಲಿ ಈ ವಿಲಕ್ಷಣ ಘಟನೆ ನಡೆದಿದ್ದು, ಹೆಂಡತಿಗೆ ಒತ್ತಾಯಿಸುತ್ತಿದ್ದ ವಿಜಯಮಹಾಂತೇಶ ಮೇಟಿ ಎಂಬಾತನ ವಿರುದ್ಧ ಆತನ ಹೆಂಡತಿ ಪೊಲೀಸರಲ್ಲಿ ದೂರು ನೀಡಿದ್ದಾಳೆ. ತನ್ನ ವಿರುದ್ಧ ಹೆಂಡತಿ ಪೊಲೀಸ್ ಠಾಣೆಯ ಮೆಟ್ಟಿಲೇರುತ್ತಿದ್ದಂತೆಯೇ ಪತಿ ವಿಜಯಮಹಾಂತೇಶ ಮೇಟಿ ಪರಾರಿಯಾಗಿದ್ದು, ಪತ್ನಿ ದೂರಿನ ಮೇರೆಗೆ ಆತನ ಬಂಧನಕ್ಕಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಏನಿದು ಪ್ರಕರಣ?
 2014ರ ಜೂನ್ 15ರಂದು ವಿಜಯ ಮಹಾಂತೇಶ ವಿಜಯಪುರದ ಯುವತಿಯೊಂದಿಗೆ ವಿವಾಹವಾಗಿದ್ದ. ವಿವಾಹವಾದ ಒಂದೆರಡು ವರ್ಷ ಪತ್ನಿಯೊಂದಿಗೆ ಅನ್ಯೋನ್ಯವಾಗಿದ್ದ ವಿಜಯಮಹಾಂತೇಶ ಬಳಿಕ ದುಷ್ಟರ ಸಹವಾಸ ಮಾಡಿ ಕುಡಿತ ಮತ್ತು ಜೂಜಿಗೆ ದಾಸನಾಗಿದ್ದ. ಪೊಲೀಸ್ ಮೂಲಗಳು ತಿಳಿಸಿರುವಂತೆ ಯಲಬುರ್ಗಾ ತಾಲೂಕಿನ ತಳಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಫಾರ್ಮಸಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ವಿಜಯಮಹಾಂತೇಶ ಸ್ನೇಹಿತರ ಜತೆ ಸೇರಿ ಮದ್ಯಸೇವನೆ ಶುರು ಮಾಡಿದ. ಕೆಲ ದಿನಗಳ ಬಳಿಕ ಸ್ನೇಹಿತರೊಂದಿಗೆ ಮನೆಯಲ್ಲೇ ಮದ್ಯ ಸೇವನೆ ಶುರುವಿಟ್ಟುಕೊಂಡು, ಪತ್ನಿಗೆ ದೈಹಿಕ-ಮಾನಸಿಕ ಹಿಂಸೆ ನೀಡತೊಡಗಿದ.

ನಂತರ ಕುಡಿದ ಅಮಲಿನಲ್ಲಿ ಸ್ನೇಹಿತನೊಂದಿಗೆ ಸಹಕರಿಸುವಂತೆ ಕೈಹಿಡಿದ ಪತ್ನಿಯನ್ನು ಆಗ್ರಹಿಸಿದ. ಇದಕ್ಕೆ ಪತ್ನಿ ಒಪ್ಪದಿದ್ದಾಗ ಆಕೆ ಮೇಲೆ ತೀವ್ರ ಹಲ್ಲೆ ಮಾಡಿದ್ದಾನೆ. ಇದರಿಂದ ಮನನೊಂದ ಗೃಹಿಣಿ ಕೊಪ್ಪಳ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ ಶಿವಕುಮಾರ್, ಪರಸ್ಪರ ಆಲಿಂಗನ..!

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

SCROLL FOR NEXT