ರಂಜನ್ 
ರಾಜ್ಯ

ಎಸ್‌ಎಸ್ಎಲ್‌ಸಿ ಟಾಪರ್ ಉತ್ತರ ಪತ್ರಿಕೆ ಪ್ರಕಟಿಸಿ: ಸಚಿವರಿಗೆ ವಿದ್ಯಾರ್ಥಿ ಮನವಿ

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಭದ್ರಾವತಿಯ ಬಿ ಎಸ್ ರಂಜನ್ ಅವರ ಉತ್ತರ ಪತ್ರಿಕೆಯನ್ನು...

ಬೆಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಭದ್ರಾವತಿಯ ಬಿ ಎಸ್ ರಂಜನ್ ಅವರ ಉತ್ತರ ಪತ್ರಿಕೆಯನ್ನು ನೋಡಲು ವಿದ್ಯಾರ್ಥಿಗಳು, ಪೋಷಕರು ಉತ್ಸಾಹಿಗಳಾಗಿದ್ದಾರೆ. 
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಭದ್ರಾವತಿಯಲ್ಲಿರುವ ಪೂರ್ಣಪ್ರಜ್ಞಾ ಶಾಲೆಯ ವಿದ್ಯಾರ್ಥಿ ರಂಜನ್ 625ಕ್ಕೆ 625 ಅಂಕಗಳನ್ನು ಗಳಿಸಿ ಟಾಪರ್ ಎಂದೆನಿಸಿಕೊಂಡು ದಾಖಲೆ ಬರೆದಿದ್ದಾರೆ. ರಂಜನ್ ಉತ್ತರ ಪ್ರತ್ರಿಕೆಯನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಿ ಎಂದು ಎಂಇಎಸ್ ಕಾಲೇಜಿನ ಬಿಕಾಂ ಮೊದಲ ವರ್ಷದ ವಿದ್ಯಾರ್ಥಿ ಅಜಿತ್ ನಾಡಿಗ್ ಪ್ರಾಥಮಿಕ ಶಿಕ್ಷಣ ಸಚಿವರಿಗೆ ವಾಟ್ಸಾಪ್ ನಲ್ಲಿ ಮನವಿ ಮಾಡಿಕೊಂಡಿದ್ದಾರೆ. 
ಭವಿಷ್ಯದಲ್ಲಿ ವಿದ್ಯಾರ್ಥಿಗಳಿಗೆ ರಂಜನ್ ಉತ್ತರ ಪತ್ರಿಕೆ ಮಾದರಿಯಾಗಲಿದೆ. ಹಾಗಾಗಿ, ಪಾಥಮಿಕ ಶಿಕ್ಷಣ ಇಲಾಖೆಯ ವೆಬ್ ಸೈಟ್ ನಲ್ಲಿ ಆತನ ಉತ್ತರ ಪತ್ರಿಕೆ ಪ್ರಕಟಿಸಿ ಎಂದು ಮನವಿ ಮಾಡಿದ್ದಾರೆ. 
ಉತ್ತರ ಪತ್ರಿಕೆಯ ಪ್ರತಿಯನ್ನು ಎಲ್ಲಾ ಪ್ರೌಢಶಾಲೆಗಳಿಗೆ ಕಳುಹಿಸಿ ಎಂದು ಕೋರಿದ್ದಾನೆ. ವಿದ್ಯಾರ್ಥಿಯ ಮನವಿಯನ್ನು ನೋಡಿದ ಸಚಿವ ಕಿಮ್ಮನೆ ರತ್ನಾಕರ್ ವಿದ್ಯಾರ್ಥಿಗೆ ಕರೆ ಮಾಡಿ, ಸಂದೇಶದ ಮೂಲಕ ಬಂದ ಮನವಿಯನ್ನು ನಾನು ನೋಡಿದ್ದೇನೆ. ಈ ಕುರಿತು ಮುಂದಿನ ದಿನಗಳಲ್ಲಿ ಚರ್ಚಿಸಿ ನಿರ್ಧರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT