ಬಿಬಿಎಂಪಿ ಕಚೇರಿ 
ರಾಜ್ಯ

ಬಾಡಿಗೆ ಪಾವತಿಸದ ಸರ್ಕಾರಿ ಕಟ್ಟಡಗಳಿಗೆ ಬಿಬಿಎಂಪಿಯಿಂದ ಬೀಗ

ಬಾಡಿಗೆ ಕೊಡದ ಹಲವು ಸರ್ಕಾರಿ ಕಟ್ಟಡಗಳಿಗೆ ಇಂದು ಬೆಳ್ಳಂ ಬೆಳಗ್ಗೆ ಬಿಬಿಎಂಪಿ ಅಧಿಕಾರಿಗಳು ಬೀಗ ಜಡಿದಿದ್ದಾರೆ....

ಬೆಂಗಳೂರು: ಬಾಡಿಗೆ ಕೊಡದ ಹಲವು ಸರ್ಕಾರಿ ಕಟ್ಟಡಗಳಿಗೆ ಇಂದು ಬೆಳ್ಳಂ ಬೆಳಗ್ಗೆ ಬಿಬಿಎಂಪಿ ಅಧಿಕಾರಿಗಳು ಬೀಗ ಜಡಿದಿದ್ದಾರೆ.

ಹಲವು ವರ್ಷಗಳಿಂದ ಪಶ್ಚಿಮ ಮತ್ತು ದಕ್ಷಿಣ ವಲಯದ ಸರ್ಕಾರಿ ಕಚೇರಿಗಳು ಸುಮಾರು 6.ಕೋಟಿ ರು. ಬಾಡಿಗೆ ಹಣ ಬಾಕಿ ಉಳಿಸಿಕೊಂಡಿದ್ದವು. ಜಯನಗರ 4ನೇ ಬ್ಲಾಕ್ ಶಾಪಿಂಗ್ ಕಾಂಪ್ಲೆಕ್ಸ್ ಕಟ್ಟಡವೊಂದರಿಂದಲೇ ಸುಮಾರು 4.51 ಕೋಟಿ ರು ಬಾಡಿಗೆ ಹಣ ಬರಬೇಕಾಗಿದೆ. ಅದರಲ್ಲಿ  11 ಸರ್ಕಾರಿ ಸ್ವಾಮ್ಯದ ಅಂಗಡಿಗಳಿವೆ ಎಂದು ಬಿಬಿಎಂಪಿ ಕಂದಾಯ ಅಧಿಕಾರಿ ಲೀಲಾವತಿ ಹೇಳಿದ್ದಾರೆ.

ಕಳೆದ 2007 ರಿಂದ ಇದುವರೆಗೂ ಒಂದು ನಯಾಪೈಸೆ ಬಾಡಿಗೆ ಹಣ ಪಾವತಿಸಿಲ್ಲ,. ಹಲವು ಬಾರಿ ನೋಟಿಸ್ ನೀಡಿದ್ದರೂ ಹಣ ಪಾವತಿ ಮಾಡಿಲ್ಲ. ಸಣ್ಣ ನೀರಾವರಿ ಕಚೇರಿ ಸಿಬ್ಬಂದಿ ಹಣ ಪಾವತಿಸುವುದಾಗಿ ಲಿಖಿತವಾಗಿ ಬರೆದು ಕೊಟ್ಟಿರುವುದರಿಂದ ಅದೊಂದದು ಕಟ್ಟಡ ಬಿಟ್ಟು ಉಳಿದ ಎಲ್ಲ  ಕಚೇರಿಗಳಿಗೂ ಬೀಗ ಜಡಿದಿರುವುದಾಗಿ ಅವರು ತಿಳಿಸಿದ್ದಾರೆ.

ಪಶ್ಚಿಮ ವಲಯದ ಯಶವಂತಪುರ ಕಾಂಪ್ಲೆಕ್ಸ್ ನಲ್ಲಿರುವ ಆರ್ ಟಿಓ ಕಚೇರಿ, ತೂಕ ಮತ್ತು ಮಾಪನ ಇಲಾಖೆ ಸೇರಿಹಲವು ಭಾಗಗಳಲ್ಲಿಬಾಡಿಗೆ ಪಾವತಿಸದ ಕಟ್ಟಡಗಳಿಗೆ ಬೀಗ ಹಾಕಲಾಗಿದೆ. ಕಳೆದ ಎರಡು ವರ್ಷಗಳಿಂದ ಸುಮಾರು 1 ಕೋಟಿ ರು. ಹಣ ಪಾವತಿಸಬೇಕಿದೆ ಎಂದು ಹೇಳಿದ್ದಾರೆ.

ಸುಮಾರು 25 ಸದಸ್ಯರಿಂದ ಬಿಬಿಎಂಪಿ ಅಧಿಕಾರಿಗಳ ತಂಡ ಬೆಳಗ್ಗೆಯಿಂದಲೇ ಕಾರ್ಯಾಚರಣೆ ನಡೆಸಿತು. ಉಪ್ಪಾರ ಪೇಟೆ ಪೊಲೀಸ್ ಠಾಣೆಯ ಸುಭಾಷ್ ನಗರದಲ್ಲಿದ್ದ ಲಿಡ್ಕರ್, ಬಿಎಸ್ ಎನ್ ಎಲ್, ಕಾವೇರಿ ಹ್ಯಾಂಡಿಕ್ರಾಪ್ಟ್ ಮತ್ತು ಪ್ರಿಯದರ್ಶಿನಿ ಕಚೇರಿಗಳಿಂದ ಸುಮಾರು 40 ಲಕ್ಷ ಹಣ ಬಾಕಿ ನೀಡದ ಹಿನ್ನೆಲೆಯಲ್ಲಿ ಈ ಎಲ್ಲಾ ಕಚೇರಿಗಳಿಗೆ ಬೀಗ ಹಾಕಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಪುಟ ಸಲಹೆ ಮೇರೆಗೆ KPSC ಅಧ್ಯಕ್ಷ ಸಾಹುಕಾರ್ ರನ್ನು ಮತ್ತೆ ಅಮಾನತು ಮಾಡಿದ ರಾಜ್ಯಪಾಲ ಗೆಹ್ಲೋಟ್!

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!

ಕನಸು ಕೊನೆಗೂ ನನಸು: ಲಿಂಗ ಬದಲಿಸಿಕೊಂಡಿದ್ದ Anaya Bangarಗೆ ಕ್ರಿಕೆಟ್‌ಗೆ ಮರಳಲು ಗ್ರೀನ್ ಸಿಗ್ನಲ್!

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!