ಸಿದ್ದರಾಮಯ್ಯ 
ರಾಜ್ಯ

ನೀವೂ,ನಿಮ್ಮ ಕುಟುಂಬ ನೂರ್ಕಾಲ ಬಾಳಿ: ಪಾನಮತ್ತ ವ್ಯಕ್ತಿಯಿಂದ ಸಿಎಂ ಸಿದ್ದರಾಮಯ್ಯಗೆ ಪತ್ರ

ನೀವು ಮತ್ತು ನಿಮ್ಮ ಕುಟುಂಬದವರು ಚೆನ್ನಾಗಿರಬೇಕು, ನಿಮಗೆ ದೇವರು ಹೆಚ್ಚಿನ ಆರೋಗ್ಯ ಕಲ್ಪಿಸಬೇಕು ಎಂದು ಪಾನಮತ್ತ ವ್ಯಕ್ತಿಯೊಬ್ಬ ಸಿಎಂ ಸಿದ್ದರಾಮಯ್ಯ ...

ಬೆಂಗಳೂರು: ನೀವು ಮತ್ತು ನಿಮ್ಮ ಕುಟುಂಬದವರು ಚೆನ್ನಾಗಿರಬೇಕು, ನಿಮಗೆ ದೇವರು ಹೆಚ್ಚಿನ ಆರೋಗ್ಯ ಕಲ್ಪಿಸಬೇಕು ಎಂದು ಪಾನಮತ್ತ ವ್ಯಕ್ತಿಯೊಬ್ಬ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾನೆ.

ಬೆಂಗಳೂರಿನಲ್ಲಿ ನಡೆದ ಬುದ್ಧ ಜಯಂತಿ ಕಾರ್ಯಕ್ರಮದಲ್ಲಿ ಪಾನಮತ್ತ ವ್ಯಕ್ತಿಯೊಬ್ಬ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ನೀಡಲು ಮುಂದಾದ ಘಟನೆ ವರದಿಯಾಗಿದೆ.

ಮಾಗಡಿ ರಸ್ತೆಯ ಅಂಜನಾ ನಗರದ ಸ್ಫೂರ್ತಿಧಾಮದಲ್ಲಿ ನಡೆದ ಬುದ್ಧ ಜಯಂತಿ ಕಾರ್ಯಕ್ರಮದಲ್ಲಿ , ಪಾನಮತ್ತ ವ್ಯಕ್ತಿಯೊಬ್ಬ ಪದೇ ಪದೇ ವೇದಿಕೆಯ ಮುಂಬಾಗಕ್ಕೆ ತೆರಳಿ ಸಚಿವರಿಗೆ ಕೈಮುಗಿಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ನೀಡಲು ಮಂದಾಗಿದ್ದಾನೆ. ಪಾನಮತ್ತ ವ್ಯಕ್ತಿಯ ಕಾಟ ತಾಳಲಾರದೇ ವೇದಿಕೆಯಲ್ಲಿದ್ದ ಮುಖಂಡರು ಪತ್ರವನ್ನು ತೆಗೆದುಕೊಂಡು ಮುಖ್ಯಮಂತ್ರಿಯವರಿಗೆ ನೀಡಿದ್ದಾರೆ.

ಪತ್ರ ನೀಡಿದ ಬಳಿಕವು ಸುಮ್ಮನಾಗದ  ವ್ಯಕ್ತಿ, ಮತ್ತೆ ಮತ್ತೆ ವೇದಿಕೆಯ ಬಳಿ ತೆರಳಿ ಸಚಿವರುಗಳಿಗೆ ಕೈಮುಗಿಯಲು ಮುಂದಾಗಿದ್ದಾನೆ. ಕುಡುಕ ಮಹಾಶಯನ ವರ್ತನೆಗೆ ಬೇಸತ್ತ ಪೊಲೀಸರು, ಇತನನ್ನು ಹೊರಗೆಳೆದು ತಂದಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ಚನ್ನಾಗಿರಬೇಕು ಎಂದು ಆಶಿಸುತ್ತೇನೆ. ಇವರಿಗೆ ದೇವರು ಆರೋಗ್ಯ ಆಯುಷ್ಯ ಕಲ್ಪಿಸಲಿ. ಮುಖ್ಯಮಂತ್ರಿಯವರು ನೂರು ವರ್ಷಗಳ ಕಾಲ ಚನ್ನಾಗಿರಬೇಕೆಂದು ಬೇಡಿಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಅವರನ್ನು ಹಾಡಿ ಹೊಗಳಿ ಪತ್ರ ಬರೆದಿದ್ದ ಎಂದು ಮುಖಂಡರು ತಿಳಿಸಿದ್ದಾರೆ.


Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT