ಎಂ.ವಿ ರಾಜಶೇಖರನ್ 
ರಾಜ್ಯ

ರಾಜ್ಯದ ಜನತೆಗೆ ದಲಿತ ಸಿಎಂ ಭಾಗ್ಯ ನೀಡಿ: ಎಂ.ವಿ ರಾಜಶೇಖರನ್

ಸಿಎಂ ಸಿದ್ದರಾಮಯ್ಯ ಅವರು ದಲಿತರಿಗೆ ‘ಮುಖ್ಯಮಂತ್ರಿ ಭಾಗ್ಯ’ ಕೊಟ್ಟು ಮಾದರಿಯಾಗಬೇಕು. ಡಾ.ಜಿ. ಪರಮೇಶ್ವರ್ ಅವರನ್ನು ಮುಖ್ಯಮಂತ್ರಿಯಾಗಿ ನೇಮಕ ...

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ದಲಿತರಿಗೆ ‘ಮುಖ್ಯಮಂತ್ರಿ ಭಾಗ್ಯ’ ಕೊಟ್ಟು ಮಾದರಿಯಾಗಬೇಕು. ಡಾ.ಜಿ. ಪರಮೇಶ್ವರ್ ಅವರನ್ನು ಮುಖ್ಯಮಂತ್ರಿಯಾಗಿ ನೇಮಕ ಮಾಡಲು ಸಹಕರಿಸುವ ಔದಾರ್ಯ ಪ್ರದರ್ಶಿಸಲಿ ಎಂದು ಕೇಂದ್ರದ ಮಾಜಿ ಸಚಿವ ಎಂ.ವಿ. ರಾಜಶೇಖರನ್ ಒತ್ತಾಯಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯತಿಥಿ ಯಲ್ಲಿ ಮಾತನಾಡಿದ ಅವರು ಈ ಹಿಂದೆ ಬಾಬು ಜಗಜೀವನರಾಂ ಕಾಂಗ್ರೆಸ್ ತೊರೆದಾಗ ರಾಜೀವ್ ಗಾಂಧಿ ಅವರ ಮನೆಗೆ ಹೋಗಿ ಪಕ್ಷಕ್ಕೆ ಕರೆತರಲು ಮುಂದಾಗಿದ್ದರು. ದುರದೃಷ್ಟವಶಾತ್ ಜಗಜೀವನರಾಂ ಬದುಕುಳಿಯಲಿಲ್ಲ. ಬದುಕಿದ್ದರೆ ಖಂಡಿತ ಅವರಿಗೆ ಉನ್ನತ ಸ್ಥಾನ ಸಿಗುತ್ತಿತ್ತು. ರಾಜೀವ್ ಅವರ ಈ ಆದರ್ಶವನ್ನು ಸಿದ್ದರಾಮಯ್ಯ ಮಾದರಿಯಾಗಿಸಿಕೊಳ್ಳಬೇಕೆಂದರು. ರಾಜೀವ್ ಕನಸಿನಂತೆ ದಲಿತರ ಸಬಲೀಕರಣಕ್ಕೆ ಸಿದ್ದರಾಮಯ್ಯ ಬದ್ಧತೆ ಪ್ರದರ್ಶಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಭರವಸೆ ವ್ಯಕ್ತ ಪಡಿಸಿದರು.

ಪಂಚರಾಜ್ಯಗಳ ಫಲಿತಾಂಶವನ್ನು ಟಿ.ವಿ.ಯಲ್ಲಿ ನೋಡಿ ಕಣ್ಣೀರು ಹಾಕಿದೆ. ಸಣ್ಣಪುಟ್ಟ ಜಾತಿ, ಸಮುದಾಯಗಳಿಗೆ ಅಸ್ವಿತ್ವ ನೀಡಿದ ಕಾಂಗ್ರೆಸ್ ಪಕ್ಷ ಇಲ್ಲದ ಭಾರತವನ್ನು ಕಲ್ಪಿಸಿಕೊಳ್ಳುವುದೂ ಕಷ್ಟ. ಎಚ್ಚೆತ್ತುಕೊಂಡು ಪಕ್ಷಕ್ಕೆ ತಮ್ಮನ್ನೇ ಅರ್ಪಿಸಿಕೊಂಡಿರುವ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಕೈ ಬಲಪಡಿಸಬೇಕು ಎಂದ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಕಾಂಗ್ರೆಸ್ಸಿಗರಾದ ನಾವು ಎತ್ತ ಸಾಗಿದ್ದೇವೆ? ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT