ಕಾಮೆಡ್ ಕೆ ಪರೀಕ್ಷಾ ಫಲಿತಾಂಶ ಹೊರಬಿದ್ದಿದ್ದು, ನಗದರ ಅಧೋಕ್ಷಜ ಮಾಧ್ವರಾಜ್ ಅವರು ಮೊದಲ ರ್ಯಾಂಕ್ ಪಡೆದುಕೊಂಡಿದ್ದಾರೆ. 
ರಾಜ್ಯ

1,400 ಸೀಟ್ ಗಳನ್ನು ಸರ್ಕಾರದೊಂದಿದೆ ಹಂಚಿಕೊಳ್ಳುವುದಿಲ್ಲ: ಖಾಸಗಿ ಕಾಲೇಜುಗಳು

1,400 ಪದವಿ ವೈದ್ಯ ಮತ್ತು ದಂತ ವೈದ್ಯಕೀಯ ಸೀಟ್ ಗಳನ್ನು ಸರ್ಕಾರದೊಂದಿಗೆ ಹಂಚಿಕೆ ಮಾಡಿಕೊಳ್ಳುವುದಿಲ್ಲ ಎಂದು ಶುಕ್ರವಾರ ಖಾಸಗಿ ಕಾಲೇಜುಗಳು...

ಬೆಂಗಳೂರು: 1,400 ಪದವಿ ವೈದ್ಯ ಮತ್ತು ದಂತ ವೈದ್ಯಕೀಯ ಸೀಟ್ ಗಳನ್ನು ಸರ್ಕಾರದೊಂದಿಗೆ ಹಂಚಿಕೆ ಮಾಡಿಕೊಳ್ಳುವುದಿಲ್ಲ ಎಂದು ಶುಕ್ರವಾರ ಖಾಸಗಿ ಕಾಲೇಜುಗಳು ಹೇಳಿಕೊಂಡಿವೆ.

ಈ ಕುರಿತಂತೆ ಮಾತನಾಡಿರುವ ಕರ್ನಾಟಕ ವೃತ್ತಿಪರ ಕಾಲೇಜುಗಳು ಸಂಘದ ಅಧ್ಯಕ್ಷ ಎಂ.ಆರ್. ಜಯರಾಮ್ ಅವರು, ದೇಶದಲ್ಲಿ ವೈದ್ಯ ಮತ್ತು ದಂತ ವೈದ್ಯಕೀಯ ಪ್ರವೇಶಕ್ಕೆ ದೇಶದಲ್ಲಿ ಏಕರೂಪದ ಪರೀಕ್ಷೆ ನೀಟ್ ಜಾರಿಯಾದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ನ ಆದೇಶದಂತೆ ನಿಯಮಗಳನ್ನು ಪಾಲಿಸಲಾಗುತ್ತಿದ್ದು, ರಾಜ್ಯ ಸರ್ಕಾರದೊಂದಿಗೆ ಯಾವುದೇ ಸೀಟ್ ಗಳನ್ನು ಹಂಚಿಕೆ ಮಾಡಿಕೊಳ್ಳದಂತೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಇದರಂತೆ 700 ವೈದ್ಯಕೀಯ ಮತ್ತು 700 ದಂತ ವೈದ್ಯಕೀಯ ಸೀಟ್ ಗಳು ರಾಜ್ಯ ಸರ್ಕಾರ ಪಾಲಿಗೆ ಬರುವುದಿಲ್ಲ. ಈ ಸೀಟ್ ಗಳನ್ನು ಸಿಇಟಿ ರ್ಯಾಂಕ್ ಗಳ ಆಧಾರದ ಕರ್ನಾಟಕದ ವಿದ್ಯಾರ್ಥಿಗಳನ್ನು ಭರ್ತಿ ಮಾಡಲಾಗುತ್ತದೆ.

ಶೇ.15ರಷ್ಟು ಸೀಟ್ ಗಳು ಎನ್ಆರ್ ಕೋಟಾಗೆ ಹೋಗಲಿದೆ. ಇನ್ನುಳಿದ ಶೇ.85ರಷ್ಟು ಸೀಟ್ ಗಳು ನೀಟ್ ರ್ಯಾಂಕ್ ನ ಆಧಾರ ಮೇಲೆ ಭರ್ತಿ ಮಾಡಿಕೊಳ್ಳಲಾಗುವುದು. ಸೀಟುಗಳ ಭರ್ತಿಯಲ್ಲಿ ರಾಜ್ಯ ಕೋಟಾ ಅಥವಾ ಸರ್ಕಾರೀ ಕೋಟಾಗಳಾವುದು ನಮ್ಮ ಸಂಸ್ಥೆಗಳಲ್ಲಿ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನು ಮೀಸಲಾತಿ ನೀತಿ ಕುರಿತಂತೆ ಸ್ಪಷ್ಟನೆ ನೀಡಿರುವ ಅವರು, ಕಾನೂನು ರೀತಿಯಲ್ಲಿಯೇ ನಾವು ನಡೆಯಲು ಸಿದ್ಧರಿದ್ದು, ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ ಜನಾಂಗಕ್ಕೆ ಸೀಟ್ ಗಳನ್ನು ನೀಡಲಾಗುತ್ತದೆ. ಇನ್ನು ಉಚಿತ ವ್ಯವಸ್ಥೆಗಳನ್ನು ಸರ್ಕಾರವೇ ನಿರ್ಧಾರ ಕೈಗೊಳ್ಳಲಿದೆ ಎಂದಿದ್ದಾರೆ.

ಇನ್ನು ಖಾಸಗೀ ಕಾಲೇಜುಗಳ ಈ ನಿಲುವಿನ ಬಗ್ಗೆ ರಾಜ್ಯ ಸರ್ಕಾರ ಆಶ್ಚರ್ಯ ವ್ಯಕ್ತಪಡಿಸಿದ್ದು, ಈ ಬಗ್ಗೆ ಕಾನೂನು ಸಲಹೆ ಪಡೆಯುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT