ಮೈಸೂರಿನಲ್ಲಿ ಆಯೋಜಿಸಲಾಗಿದ್ದ ಮಾವು ಮತ್ತು ಹಲವು ಮೇಳದಲ್ಲಿ ಗ್ರಾಹಕರಿಗೆ ಹಲಸಿನ ಹಣ್ಣನ್ನು ಮಾರಾಟ ಮಾಡುತ್ತಿರುವ ರೈತ 
ರಾಜ್ಯ

ರೈತರ ಪಾಲಿಗೆ ಹುಳಿಯಾಯ್ತು ಮೈಸೂರಿನ ಮಾವು ಮೇಳ

ಮೂರು ದಿನಗಳ ಕಾಲ ಮೈಸೂರಿನಲ್ಲಿ ನಿಯೋಜಿಸಲಾಗಿದ್ದ ಮಾವು ಮತ್ತು ಹಲಸು ಮೇಳ ಇದೀಗ ರೈತರ ಪಾಲಿಗೆ ಹುಳಿಯಾಗಿ ಪರಿಣಮಿಸಿದೆ...

ಮೈಸೂರು: ಮೂರು ದಿನಗಳ ಕಾಲ ಮೈಸೂರಿನಲ್ಲಿ ನಿಯೋಜಿಸಲಾಗಿದ್ದ ಮಾವು ಮತ್ತು ಹಲಸು ಮೇಳ ಇದೀಗ ರೈತರ ಪಾಲಿಗೆ ಹುಳಿಯಾಗಿ ಪರಿಣಮಿಸಿದೆ.

ಮೈಸೂರಿನ ಹಾಪ್ ಕಾಮ್ಸ್ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಮಾವಿನ ಹಣ್ಣಿಗೆ ನಿಗದಿಪಡಿಸಿದ ಬೆಲೆಗೆ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ತುಮಕೂರು, ಚಿಕ್ಕಬಳ್ಳಾಪುರ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ರಾಮನಗರ ಮತ್ತು ಇನ್ನಿತರೆ ಜಿಲ್ಲೆಯ ರೈತರು ವಿರೋಧ ವ್ಯಕ್ತಪಡಿಸಿದ್ದು, ಹಣ್ಣಿಗೆ ಅತ್ಯಂತ ಕಡಿಮೆ ದರವನ್ನು ನಿಗದಿಪಡಿಸಲಾಗಿದೆ ಎಂದು ಹೇಳುತ್ತಿದ್ದಾರೆ.

ಕೊನೆಯ ಸಮಯದಲ್ಲಿ ಮಾವಿನ ಹಣ್ಣಿಗೆ ನಿಗದಿ ಪಡಿಸಿದ ಬೆಲೆ ನಮಗೆ ಸಾಕಷ್ಟು ಆಘಾತವನ್ನುಂಟು ಮಾಡಿತ್ತು. ಇದೊಂದು ಕಹಿ ಅನುಭವವಾಗಿದೆ. ಕಳೆದ ವರ್ಷ 1 ಕೆ.ಜಿ ಮಾವಿನ ಹಣ್ಣಿನ್ನು ರು.80ಕ್ಕೆ ಮಾರಾಟ ಮಾಡಲಾಗಿತ್ತು ಎಂದು ರೈತರೊಬ್ಬರು ಹೇಳಿದ್ದಾರೆ.

ಮಧ್ಯವರ್ತಿಗಳನ್ನು ನಿಯಂತ್ರಿಸುವ ಸಲುವಾಗಿ ಮೇಳಗಳನ್ನು ಆಯೋಜಿಸಲಾಗಿತ್ತು. ಆದರೆ, ಇದೀಗ ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ಆಧಿಕಾರಿಗಳೇ ಏಜೆಂಟ್ ಗಳ ಹಾಗೆ ವರ್ತಿಸುತ್ತಿದ್ದಾರೆ ಎಂದು ಮತ್ತೆ ಕೆಲವು ರೈತರು ಹೇಳಿದ್ದಾರೆ.

ಇನ್ನು ರೈತರ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಧಿಕಾರಿಗಳು ಇದೀಗ ಮಾವು ರೈತರೊಂದಿಗೆ ಸಭೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ರೈತರೊಂದಿಗೆ ಮಾತುಕತೆ ನಂತರ ಬೆಲೆ ನಿಗದಿ ಪಡಿಸುವಂತೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT