ಮೈಸೂರಿನಲ್ಲಿ ಆಯೋಜಿಸಲಾಗಿದ್ದ ಮಾವು ಮತ್ತು ಹಲವು ಮೇಳದಲ್ಲಿ ಗ್ರಾಹಕರಿಗೆ ಹಲಸಿನ ಹಣ್ಣನ್ನು ಮಾರಾಟ ಮಾಡುತ್ತಿರುವ ರೈತ 
ರಾಜ್ಯ

ರೈತರ ಪಾಲಿಗೆ ಹುಳಿಯಾಯ್ತು ಮೈಸೂರಿನ ಮಾವು ಮೇಳ

ಮೂರು ದಿನಗಳ ಕಾಲ ಮೈಸೂರಿನಲ್ಲಿ ನಿಯೋಜಿಸಲಾಗಿದ್ದ ಮಾವು ಮತ್ತು ಹಲಸು ಮೇಳ ಇದೀಗ ರೈತರ ಪಾಲಿಗೆ ಹುಳಿಯಾಗಿ ಪರಿಣಮಿಸಿದೆ...

ಮೈಸೂರು: ಮೂರು ದಿನಗಳ ಕಾಲ ಮೈಸೂರಿನಲ್ಲಿ ನಿಯೋಜಿಸಲಾಗಿದ್ದ ಮಾವು ಮತ್ತು ಹಲಸು ಮೇಳ ಇದೀಗ ರೈತರ ಪಾಲಿಗೆ ಹುಳಿಯಾಗಿ ಪರಿಣಮಿಸಿದೆ.

ಮೈಸೂರಿನ ಹಾಪ್ ಕಾಮ್ಸ್ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಮಾವಿನ ಹಣ್ಣಿಗೆ ನಿಗದಿಪಡಿಸಿದ ಬೆಲೆಗೆ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ತುಮಕೂರು, ಚಿಕ್ಕಬಳ್ಳಾಪುರ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ರಾಮನಗರ ಮತ್ತು ಇನ್ನಿತರೆ ಜಿಲ್ಲೆಯ ರೈತರು ವಿರೋಧ ವ್ಯಕ್ತಪಡಿಸಿದ್ದು, ಹಣ್ಣಿಗೆ ಅತ್ಯಂತ ಕಡಿಮೆ ದರವನ್ನು ನಿಗದಿಪಡಿಸಲಾಗಿದೆ ಎಂದು ಹೇಳುತ್ತಿದ್ದಾರೆ.

ಕೊನೆಯ ಸಮಯದಲ್ಲಿ ಮಾವಿನ ಹಣ್ಣಿಗೆ ನಿಗದಿ ಪಡಿಸಿದ ಬೆಲೆ ನಮಗೆ ಸಾಕಷ್ಟು ಆಘಾತವನ್ನುಂಟು ಮಾಡಿತ್ತು. ಇದೊಂದು ಕಹಿ ಅನುಭವವಾಗಿದೆ. ಕಳೆದ ವರ್ಷ 1 ಕೆ.ಜಿ ಮಾವಿನ ಹಣ್ಣಿನ್ನು ರು.80ಕ್ಕೆ ಮಾರಾಟ ಮಾಡಲಾಗಿತ್ತು ಎಂದು ರೈತರೊಬ್ಬರು ಹೇಳಿದ್ದಾರೆ.

ಮಧ್ಯವರ್ತಿಗಳನ್ನು ನಿಯಂತ್ರಿಸುವ ಸಲುವಾಗಿ ಮೇಳಗಳನ್ನು ಆಯೋಜಿಸಲಾಗಿತ್ತು. ಆದರೆ, ಇದೀಗ ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ಆಧಿಕಾರಿಗಳೇ ಏಜೆಂಟ್ ಗಳ ಹಾಗೆ ವರ್ತಿಸುತ್ತಿದ್ದಾರೆ ಎಂದು ಮತ್ತೆ ಕೆಲವು ರೈತರು ಹೇಳಿದ್ದಾರೆ.

ಇನ್ನು ರೈತರ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಧಿಕಾರಿಗಳು ಇದೀಗ ಮಾವು ರೈತರೊಂದಿಗೆ ಸಭೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ರೈತರೊಂದಿಗೆ ಮಾತುಕತೆ ನಂತರ ಬೆಲೆ ನಿಗದಿ ಪಡಿಸುವಂತೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅನ್ಯ ಉದ್ದೇಶಕ್ಕೆ ಕುಡಿಯುವ ನೀರು ಬಳಕೆ ನಿಷೇಧ; ಬೇಸಿಗೆಯಲ್ಲಿ ತೆಗೆದುಕೊಳ್ಳುವ ಕ್ರಮಗಳನ್ನು ಮಳೆಗಾಲದಲ್ಲೇ ಜಾರಿಗೊಳಿಸಿದ BWSSB!

1 ಓವರ್‌ನಲ್ಲಿ 29 ರನ್ ಹೊಡೆಸಿಕೊಂಡ ಬಿಷ್ಣೋಯ್: ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯ ಕೈಚೆಲ್ಲಿದ ಭಾರತ

ನಾನು ಸೋತಿದ್ದೇನೆ, ಸತ್ತಿಲ್ಲ: TMC ಕೇಂದ್ರ ಕಚೇರಿಗೆ ಬಿಗ... ಬಂಡಾಯ ನಾಯಕರ ವಿರುದ್ಧ ಮಮತಾ ಬ್ಯಾನರ್ಜಿ ಗರಂ

E20 Petrol: ವೈಜ್ಞಾನಿಕ ಪರೀಕ್ಷೆಗಳಲ್ಲಿ ಸುರಕ್ಷಿತ, ವಾಹನಗಳಿಗೆ ಅತ್ಯುತ್ತಮ; ತಜ್ಞರ ಸಮರ್ಥನೆ

ಮೆಲ್ಬೋರ್ನ್ ಭೇಟಿಗೂ ಮುನ್ನ ಪ್ರಧಾನಿ ಮೋದಿಗೆ ಕೊಲೆ ಬೆದರಿಕೆ; ಆಸ್ಟ್ರೇಲಿಯಾದಿಂದ ತನಿಖೆ