ಮೈಸೂರಿನಲ್ಲಿ ಆಯೋಜಿಸಲಾಗಿದ್ದ ಮಾವು ಮತ್ತು ಹಲವು ಮೇಳದಲ್ಲಿ ಗ್ರಾಹಕರಿಗೆ ಹಲಸಿನ ಹಣ್ಣನ್ನು ಮಾರಾಟ ಮಾಡುತ್ತಿರುವ ರೈತ 
ರಾಜ್ಯ

ರೈತರ ಪಾಲಿಗೆ ಹುಳಿಯಾಯ್ತು ಮೈಸೂರಿನ ಮಾವು ಮೇಳ

ಮೂರು ದಿನಗಳ ಕಾಲ ಮೈಸೂರಿನಲ್ಲಿ ನಿಯೋಜಿಸಲಾಗಿದ್ದ ಮಾವು ಮತ್ತು ಹಲಸು ಮೇಳ ಇದೀಗ ರೈತರ ಪಾಲಿಗೆ ಹುಳಿಯಾಗಿ ಪರಿಣಮಿಸಿದೆ...

ಮೈಸೂರು: ಮೂರು ದಿನಗಳ ಕಾಲ ಮೈಸೂರಿನಲ್ಲಿ ನಿಯೋಜಿಸಲಾಗಿದ್ದ ಮಾವು ಮತ್ತು ಹಲಸು ಮೇಳ ಇದೀಗ ರೈತರ ಪಾಲಿಗೆ ಹುಳಿಯಾಗಿ ಪರಿಣಮಿಸಿದೆ.

ಮೈಸೂರಿನ ಹಾಪ್ ಕಾಮ್ಸ್ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಮಾವಿನ ಹಣ್ಣಿಗೆ ನಿಗದಿಪಡಿಸಿದ ಬೆಲೆಗೆ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ತುಮಕೂರು, ಚಿಕ್ಕಬಳ್ಳಾಪುರ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ರಾಮನಗರ ಮತ್ತು ಇನ್ನಿತರೆ ಜಿಲ್ಲೆಯ ರೈತರು ವಿರೋಧ ವ್ಯಕ್ತಪಡಿಸಿದ್ದು, ಹಣ್ಣಿಗೆ ಅತ್ಯಂತ ಕಡಿಮೆ ದರವನ್ನು ನಿಗದಿಪಡಿಸಲಾಗಿದೆ ಎಂದು ಹೇಳುತ್ತಿದ್ದಾರೆ.

ಕೊನೆಯ ಸಮಯದಲ್ಲಿ ಮಾವಿನ ಹಣ್ಣಿಗೆ ನಿಗದಿ ಪಡಿಸಿದ ಬೆಲೆ ನಮಗೆ ಸಾಕಷ್ಟು ಆಘಾತವನ್ನುಂಟು ಮಾಡಿತ್ತು. ಇದೊಂದು ಕಹಿ ಅನುಭವವಾಗಿದೆ. ಕಳೆದ ವರ್ಷ 1 ಕೆ.ಜಿ ಮಾವಿನ ಹಣ್ಣಿನ್ನು ರು.80ಕ್ಕೆ ಮಾರಾಟ ಮಾಡಲಾಗಿತ್ತು ಎಂದು ರೈತರೊಬ್ಬರು ಹೇಳಿದ್ದಾರೆ.

ಮಧ್ಯವರ್ತಿಗಳನ್ನು ನಿಯಂತ್ರಿಸುವ ಸಲುವಾಗಿ ಮೇಳಗಳನ್ನು ಆಯೋಜಿಸಲಾಗಿತ್ತು. ಆದರೆ, ಇದೀಗ ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ಆಧಿಕಾರಿಗಳೇ ಏಜೆಂಟ್ ಗಳ ಹಾಗೆ ವರ್ತಿಸುತ್ತಿದ್ದಾರೆ ಎಂದು ಮತ್ತೆ ಕೆಲವು ರೈತರು ಹೇಳಿದ್ದಾರೆ.

ಇನ್ನು ರೈತರ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಧಿಕಾರಿಗಳು ಇದೀಗ ಮಾವು ರೈತರೊಂದಿಗೆ ಸಭೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ರೈತರೊಂದಿಗೆ ಮಾತುಕತೆ ನಂತರ ಬೆಲೆ ನಿಗದಿ ಪಡಿಸುವಂತೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT