ಉತ್ತರಾಖಾಂಡ್ ನ ತೆಹ್ರೀ ಜಿಲ್ಲೆಯಲ್ಲಿ ಸಿಲುಕಿಕೊಂಡಿರುವ ಧಾರವಾಡದ 12 ಮಂದಿ 
ರಾಜ್ಯ

ಮೇಘ ಸ್ಫೋಟ: ಉತ್ತರಾಖಾಂಡ್'ನಲ್ಲಿ ಸಿಲುಕಿರುವ ಕರ್ನಾಟಕದ 100 ಮಂದಿ

ಕಳೆದೆರಡು ದಿನಗಳ ಹಿಂದೆ ಉತ್ತರಾಖಾಂಡ್ ನಲ್ಲಿ ಸಂಭವಿಸಿದ ಮೇಘ ಸ್ಫೋಟದ ಪರಿಣಾಮ ಈಗಾಗಲೇ ಅಲ್ಲಿನ ಸಾಕಷ್ಟು ಪ್ರದೇಶಗಳು ಜಲಾವೃತ್ತವಾಗಿದ್ದು, ಇದೀಗ ಕರ್ನಾಟಕದ 100 ಮಂದಿ....

ಬೆಂಗಳೂರು: ಕಳೆದೆರಡು ದಿನಗಳ ಹಿಂದೆ ಉತ್ತರಾಖಾಂಡ್ ನಲ್ಲಿ ಸಂಭವಿಸಿದ ಮೇಘ ಸ್ಫೋಟದ ಪರಿಣಾಮ ಈಗಾಗಲೇ ಅಲ್ಲಿನ ಸಾಕಷ್ಟು ಪ್ರದೇಶಗಳು ಜಲಾವೃತ್ತವಾಗಿದ್ದು, ಇದೀಗ ಕರ್ನಾಟಕದ 100 ಮಂದಿ ಉತ್ತರಾಖಾಂಡ್ ನಲ್ಲಿ ಸಿಲುಕಿಕೊಂಡಿರುವುದಾಗಿ ತಿಳಿದುಬಂದಿದೆ.

ಈ ಬಗ್ಗೆ ನವದೆಹಲಿಯಲ್ಲಿರುವ ಕರ್ನಾಟಕ ಭವನದ ಅಧಿಕಾರಿಗಳು ಮಾಹಿತಿ ನೀಡಿದ್ದು, ಕರ್ನಾಟಕದ 100 ಮಂದಿ ಉತ್ತರಾಖಾಂಡ್ ನಲ್ಲಿ ಸಿಲುಕಿಕೊಂಡಿದ್ದು, ಎಲ್ಲರೂ ಸುರಕ್ಷಿತರಾಗಿದ್ದಾರೆ, ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಉತ್ತರಾಖಾಂಡ್ ನಲ್ಲಿ ಭಾರೀ ಮಳೆ ಸಂಭವಿಸುತ್ತಿದ್ದಂತೆ ಯಾತ್ರಾರ್ಥಿಗಳ ವಾಹನ ತೆಹ್ರಿ ಜಿಲ್ಲೆಯಲ್ಲಿದ್ದ ಸೇತುವೆ ಮೂಲಕ ಕುಗ್ರಾಮವೊಂದಕ್ಕೆ ಹೋಗಿದ್ದಾರೆ. ಭಾರೀ ಮಳೆಯಾಗುತ್ತಿದ್ದ ಕಾರಣ ಅಲ್ಲಿನ ಮುಖ್ಯರಸ್ತೆ ಹಾನಿಗೊಳಗಾಗಿದೆ. ಹೀಗಾಗಿ ವಾಹನಗಳು ಚಲಿಸಲು ಸಾಧ್ಯವಾಗದೆ ಯಾತ್ರಾರ್ಥಿಗಳು ಅಲ್ಲಿಯೇ ಸಿಲುಕಿಕೊಂಡಿದ್ದಾರೆನ್ನಲಾಗಿದೆ.

3 ಗುಂಪಿನ ಎರಡು ಬಸ್ ಜನರು ಕುಗ್ರಾಮಕ್ಕೆ ಹೋಗಿದ್ದಾರೆ. ಇದರಲ್ಲಿ 1 ಗುಂಪಿನ ಜನ ಬೆಂಗಳೂರಿನವರಾಗಿದ್ದು, ಮತ್ತೊಂದು ಗುಂಪು ತುಮಕೂರು ಜಿಲ್ಲೆಯವರಾಗಿದ್ದಾರೆ. ಇದರಲ್ಲಿ 12 ಮಂದಿ ಧಾರವಾಡದವರಾಗಿದ್ದಾರೆ. ಪ್ರಸ್ತುತ ಜಿಲ್ಲೆಯ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಸಂಪರ್ಕಿಸಿದ್ದು, ಯಾತ್ರಾರ್ಥಿಗಳನ್ನು ಸುರಕ್ಷಿತವಾಗಿ ಕರೆತರುವ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಧಾರವಾಡ ಮೂಲದ ಯಾತ್ರಾರ್ಥಿಯೊಬ್ಬರ ಸಂಬಂಧಿಕ ಗಿರೀಶ್ ಎಂಬುವವರು ಮಾತನಾಡಿದ್ದು, ಭಾನುವಾರ ಬೆಳಗಿನ ಜಾವ 3.30ರ ಸುಮಾರಿಗೆ ನನ್ನ ತಾಯಿಯೊಂದಿಗೆ ಮಾತನಾಡಿದ್ದೆ. ನಂತರ ಅವರನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ.

ಗಿರೀಶ್ ಅವರ ತಾಯಿ ಸುಧಾಭಾಯಿ ರಾಮ್ ತೀರ್ತಾ (71) ಹಾಗೂ ಕುಟುಂಬ 11 ಮಂದಿ ಮೇ. 21 ರಂದು ಧಾರವಾಡದಿಂದ ದೆಹಲಿಗೆ ರೈಲಿನಲ್ಲಿ ತೆರಳಿದ್ದರು. ಇದರಂತೆ ದೆಹಲಿಯಿಂದ ವಾಹನವೊಂದರಲ್ಲಿ ಉತ್ತರಾಖಾಂಡ್ ಗೆ ತೆರಳಿದ್ದರು.

ಇನ್ನು ಯಾತ್ರಾರ್ಥಿಗಳ ರಕ್ಷಣೆಗೆ ದೆಹಲಿ ಅಧಿಕಾರಿಗಳು ಮುಂದಾಗಿದ್ದು, ದೆಹಲಿ ನಿವಾಸ ಆಯುಕ್ತರಾಗಿರುವ  ಅತುಲ್ ಕುಮಾರ್ ತಿವಾರಿ ತಂಡ ಉತ್ತರಾಖಾಂಡ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತಿದೆ. ಇದರಂತೆ ಯಾತ್ರಾರ್ಥಿಗಳ ರಕ್ಷಣೆಗೆ ವಿಪತ್ತು ನಿರ್ವಹಣಾ ಇಲಾಖೆ ಮುಂದಾಗಿದ್ದು, ಎ 24/7 ಕಂಟ್ರೋಲ್ ರೂಂನ್ನು ನಿಯೋಜಿಸಿ ನಗರ ಜನತೆ ಸಂರಕ್ಷಣೆಗಾಗಿ (080-22340676) ಸಹಾಯವಾಣಿಯನ್ನು ತೆರಿದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಯಾತ್ರಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

SCROLL FOR NEXT