ಮೆಟ್ಟಿಲು ಹತ್ತಿ ಪ್ರತಿಭಟಿಸುವ ಕಾರ್ಯಕ್ಕೆ ಸಾಹಿತಿ ಡಾ.ಎಸ್.ಎಲ್ ಭೈರಪ್ಪ, ಪ್ರಮೋದಾದೇವಿ ಹಾಗೂ ಯದುವೀರ್ ಅವರು ಚಾಲನೆ ನೀಡಿದ್ದರು. 
ರಾಜ್ಯ

'ಚಾಮುಂಡಿ ಬೆಟ್ಟ ಉಳಿಸಿ' ಹೋರಾಟಕ್ಕೆ ಹೆಚ್ಚಿದ ಬೆಂಬಲ

ಚಾಮುಂಡಿ ಬೆಟ್ಟದಲ್ಲಿ ಅಭಿವೃದ್ಧಿ ಕಾಮಗಾರಿಗೆ ಸಾಕಷ್ಟು ವಿರೋಧಗಳು ವ್ಯಕ್ತವಾಗುತ್ತಿದ್ದು, 'ಚಾಮುಂಡಿ ಬೆಟ್ಟ ಉಳಿಸಿ' ಹೋರಾಟಕ್ಕೆ ರಾಜ್ಯದಾದ್ಯಂತ ಸಾಕಷ್ಟು ಪ್ರತಿಕ್ರಿಯೆಗಳು...

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಅಭಿವೃದ್ಧಿ ಕಾಮಗಾರಿಗೆ ಸಾಕಷ್ಟು ವಿರೋಧಗಳು ವ್ಯಕ್ತವಾಗುತ್ತಿದ್ದು, 'ಚಾಮುಂಡಿ ಬೆಟ್ಟ ಉಳಿಸಿ' ಹೋರಾಟಕ್ಕೆ ರಾಜ್ಯದಾದ್ಯಂತ ಸಾಕಷ್ಟು ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

ನಿನ್ನೆ ನಡೆದ 'ಚಾಮುಂಡಿ ಬೆಟ್ಟ ಉಳಿಸಿ' ಹೋರಾಟಕ್ಕೆ ಯದುವಂಶದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಪ್ರಮೋದಾ ದೇವಿ ಒಡೆಯರ್ ಅವರು ಬೆಂಬಲ ಸೂಚಿಸಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗಷ್ಟೇ ಚಾಮುಂಡಿ ಬೆಟ್ಟದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದರು. ಇದರಂತೆ ಬೆಟ್ಟದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್, ಬಹು ಹಂತದ ಉದ್ಯಾನ ಕಟ್ಟಡಗಳು, ವಿಐಪಿ ಅತಿಥಿ ಗೃಹ, ವಿಶ್ರಾಂತಿ ನಿಲಯ ಸೇರಿದಂತೆ ಇನ್ನಿತರೆ ಕಾಮಗಾರಿಗಳಿಗೆ ಯೋಜನೆ ರೂಪಿಸಲಾಗಿತ್ತು. ಆದರೆ, ಸರ್ಕಾರದ ಈ ಯೋಜನೆಗೆ ರಾಜ್ಯದ ಹಲವು ಸಂಘ ಸಂಸ್ಥೆಗಳು ವಿರೋಧ ವ್ಯಕ್ತಪಡಿಸಿದ್ದರು.

ಇದರಂತೆ ನಿನ್ನೆ ನಾನಾ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಐನೂರಕ್ಕೂ ಹೆಚ್ಚು ಮಂದಿ ಚಾಮುಂಡಿ ಬೆಟ್ಟದ ಪಾದದಿಂದ ತುದಿಯವರಿಗೆ ಮೆಟ್ಟಿಲು ಏರಿ ಪ್ರತಿಭಟನೆ ನಡೆಸಿದ್ದರು. ಮೆಟ್ಟಿಲು ಹತ್ತಿ ಪ್ರತಿಭಟಿಸುವ ಕಾರ್ಯಕ್ಕೆ ಸಾಹಿತಿ ಡಾ.ಎಸ್.ಎಲ್ ಭೈರಪ್ಪ, ಪ್ರಮೋದಾದೇವಿ ಹಾಗೂ ಯದುವೀರ್ ಅವರು ಚಾಲನೆ ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran conflict: ರಿಯಾದ್‌ ಅಮೆರಿಕಾ ರಾಯಭಾರಿ ಕಚೇರಿ ಮೇಲೆ ಡ್ರೋನ್ ದಾಳಿ: ಸ್ಫೋಟದ ಶಬ್ಧಕ್ಕೆ ಬೆಚ್ಚಿಬಿದ್ದ ಸೌದಿ; ಶೀಘ್ರದಲ್ಲೇ ತಕ್ಕ ಪ್ರತಿಕ್ರಿಯೆ- ಟ್ರಂಪ್ ಎಚ್ಚರಿಕೆ

ಇರಾನ್ ಮೇಲೆ ಅಮೆರಿಕ ದಾಳಿ ಮಾಡಿದ್ದೇಕೆ?: ಕಾರಣ ನೀಡಿದ Donald Trump

US-Israel-Iran War: ಕನ್ನಡಿಗರ ಸುರಕ್ಷಿತ ವಾಪಸಾತಿಗೆ ಕ್ರಮ; ಕೇಂದ್ರ ಸರ್ಕಾರ ಭರವಸೆ

West Asia conflict: ಇರಾನ್ ಮೇಲಿನ ಯುದ್ಧ ಇನ್ನು 4-5 ವಾರಗಳ ಕಾಲ ನಡೆಯಲಿದೆ- ಡೊನಾಲ್ಡ್ ಟ್ರಂಪ್

ಇದು ಅಂತ್ಯವಿಲ್ಲದ ಯುದ್ಧವಲ್ಲ; ಯುದ್ಧ ಶುರು ಮಾಡಿದ್ದು ಇರಾನ್, ನಾವು ಮುಗಿಸುತ್ತೇವೆ: ಅಮೆರಿಕ ರಕ್ಷಣಾ ಕಾರ್ಯದರ್ಶಿ!

SCROLL FOR NEXT