ಮೆಟ್ಟಿಲು ಹತ್ತಿ ಪ್ರತಿಭಟಿಸುವ ಕಾರ್ಯಕ್ಕೆ ಸಾಹಿತಿ ಡಾ.ಎಸ್.ಎಲ್ ಭೈರಪ್ಪ, ಪ್ರಮೋದಾದೇವಿ ಹಾಗೂ ಯದುವೀರ್ ಅವರು ಚಾಲನೆ ನೀಡಿದ್ದರು. 
ರಾಜ್ಯ

'ಚಾಮುಂಡಿ ಬೆಟ್ಟ ಉಳಿಸಿ' ಹೋರಾಟಕ್ಕೆ ಹೆಚ್ಚಿದ ಬೆಂಬಲ

ಚಾಮುಂಡಿ ಬೆಟ್ಟದಲ್ಲಿ ಅಭಿವೃದ್ಧಿ ಕಾಮಗಾರಿಗೆ ಸಾಕಷ್ಟು ವಿರೋಧಗಳು ವ್ಯಕ್ತವಾಗುತ್ತಿದ್ದು, 'ಚಾಮುಂಡಿ ಬೆಟ್ಟ ಉಳಿಸಿ' ಹೋರಾಟಕ್ಕೆ ರಾಜ್ಯದಾದ್ಯಂತ ಸಾಕಷ್ಟು ಪ್ರತಿಕ್ರಿಯೆಗಳು...

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಅಭಿವೃದ್ಧಿ ಕಾಮಗಾರಿಗೆ ಸಾಕಷ್ಟು ವಿರೋಧಗಳು ವ್ಯಕ್ತವಾಗುತ್ತಿದ್ದು, 'ಚಾಮುಂಡಿ ಬೆಟ್ಟ ಉಳಿಸಿ' ಹೋರಾಟಕ್ಕೆ ರಾಜ್ಯದಾದ್ಯಂತ ಸಾಕಷ್ಟು ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

ನಿನ್ನೆ ನಡೆದ 'ಚಾಮುಂಡಿ ಬೆಟ್ಟ ಉಳಿಸಿ' ಹೋರಾಟಕ್ಕೆ ಯದುವಂಶದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಪ್ರಮೋದಾ ದೇವಿ ಒಡೆಯರ್ ಅವರು ಬೆಂಬಲ ಸೂಚಿಸಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗಷ್ಟೇ ಚಾಮುಂಡಿ ಬೆಟ್ಟದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದರು. ಇದರಂತೆ ಬೆಟ್ಟದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್, ಬಹು ಹಂತದ ಉದ್ಯಾನ ಕಟ್ಟಡಗಳು, ವಿಐಪಿ ಅತಿಥಿ ಗೃಹ, ವಿಶ್ರಾಂತಿ ನಿಲಯ ಸೇರಿದಂತೆ ಇನ್ನಿತರೆ ಕಾಮಗಾರಿಗಳಿಗೆ ಯೋಜನೆ ರೂಪಿಸಲಾಗಿತ್ತು. ಆದರೆ, ಸರ್ಕಾರದ ಈ ಯೋಜನೆಗೆ ರಾಜ್ಯದ ಹಲವು ಸಂಘ ಸಂಸ್ಥೆಗಳು ವಿರೋಧ ವ್ಯಕ್ತಪಡಿಸಿದ್ದರು.

ಇದರಂತೆ ನಿನ್ನೆ ನಾನಾ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಐನೂರಕ್ಕೂ ಹೆಚ್ಚು ಮಂದಿ ಚಾಮುಂಡಿ ಬೆಟ್ಟದ ಪಾದದಿಂದ ತುದಿಯವರಿಗೆ ಮೆಟ್ಟಿಲು ಏರಿ ಪ್ರತಿಭಟನೆ ನಡೆಸಿದ್ದರು. ಮೆಟ್ಟಿಲು ಹತ್ತಿ ಪ್ರತಿಭಟಿಸುವ ಕಾರ್ಯಕ್ಕೆ ಸಾಹಿತಿ ಡಾ.ಎಸ್.ಎಲ್ ಭೈರಪ್ಪ, ಪ್ರಮೋದಾದೇವಿ ಹಾಗೂ ಯದುವೀರ್ ಅವರು ಚಾಲನೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT