ಅಂಕಿತ್ ಚೌಧರಿ ಹಾಗೂ ಬೈಕ್ ಸವಾರ 
ರಾಜ್ಯ

ನಿಯಮ ಉಲ್ಲಂಘಿಸಿದ ಬೈಕ್ ಸವಾರನಿಗೆ ಬುದ್ಧಿ ಕಲಿಸಲು ಹೋಗಿ ಪೆಟ್ಟು ತಿಂದ ಟೆಕ್ಕಿ

ಪಾದಚಾರಿ ಮಾರ್ಗದಲ್ಲಿ ದ್ವಿಚಕ್ರ ವಾಹನ ಚಲಾಯಿಸಿ ತೊಂದರೆಯನ್ನುಂಟುಮಾಡುವ ಬಗ್ಗೆ ಜಾಗೃತಿ ಮೂಡಿಸಲು ವಿಡಿಯೋ ಮಾಡುತ್ತಿದ್ದ ...

ಬೆಂಗಳೂರು: ಪಾದಚಾರಿ ಮಾರ್ಗದಲ್ಲಿ ದ್ವಿಚಕ್ರ ವಾಹನ ಚಲಾಯಿಸಿ ತೊಂದರೆಯನ್ನುಂಟುಮಾಡುವ ಬಗ್ಗೆ ಜಾಗೃತಿ ಮೂಡಿಸಲು ವಿಡಿಯೋ ಮಾಡುತ್ತಿದ್ದ ಟೆಕ್ಕಿಗೆ ವ್ಯಕ್ತಿಯೊಬ್ಬ ಥಳಿಸಿರುವ ಘಟನೆ ನಿನ್ನೆ(ಸೋಮವಾರ) ಕೋರಮಂಗಲದಲ್ಲಿ ನಡೆದಿದೆ.

26 ವರ್ಷದ ಅಂಕಿತ್ ಚೌಧರಿ ಹಲ್ಲೆಗೊಳಗಾದ ಟೆಕ್ಕಿ. ವಿಪ್ರೊ ಪಾರ್ಕ್ ವೃತ್ತದ ಫ್ಲಿಪ್ ಕಾರ್ಟ್ ಕಚೇರಿ ಸಮೀಪ ನಿನ್ನೆ ಬೆಳಗಿನ ಹೊತ್ತು ಅಂಕಿತ್ ವಿಡಿಯೋ ಮಾಡುವ ಹೊತ್ತಿಗೆ ಈ ಘಟನೆ ನಡೆದಿದೆ. ಈ ಸಂಪೂರ್ಣ ಘಟನೆಯ ವಿಡಿಯೋವನ್ನು ಅಂಕಿತ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಅಪ್ ಲೋಡ್ ಮಾಡಿದ್ದು, 600ಕ್ಕೂ ಹೆಚ್ಚು ಜನರು ಅದನ್ನು ಶೇರ್ ಮಾಡಿದ್ದಾರೆ.

ರಸ್ತೆಯಲ್ಲಿ ದ್ವಿಚಕ್ರ ವಾಹನ ಚಲಾಯಿಸುವ ಬದಲು ಕೆಲವರು ಪಾದಚಾರಿ ಮಾರ್ಗದಲ್ಲಿ ಚಲಾಯಿಸಿ ಜನರಿಗೆ ತೊಂದರೆ ಕೊಡುತ್ತಾರೆ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಟ್ರಾಫಿಕ್ ನಿಯಮವನ್ನು ಮುರಿಯಬಾರದು ಎಂದು ಮನದಟ್ಟು ಮಾಡಲು ವಿಡಿಯೋ ಮಾಡಿ ಟ್ರಾಫಿಕ್ ಪೊಲೀಸ್ ವೆಬ್ ಸೈಟ್ ನಲ್ಲಿ ಹಾಕಲು ಉದ್ದೇಶಿಸಿದ್ದೆ. ಇದರ ಹಿಂದೆ ಯಾರನ್ನೂ ಅವಮಾನ ಮಾಡುವ ಉದ್ದೇಶ ನನಗಿರಲಿಲ್ಲ ಎಂದು ಅಂಕಿತ್ ತಿಳಿಸಿದ್ದಾರೆ.

ಅಂಕಿತ್ ಅವರು ಈ ರೀತಿ ಫೋಟೋ, ವಿಡಿಯೋ ತೆಗೆದು ಕಳುಹಿಸುವುದು ಇದೇ ಮೊದಲಲ್ಲ. ತಮಗೆ ಸಮಯ ಸಿಕ್ಕಾಗಲೆಲ್ಲ ಮಾಡುತ್ತಿದ್ದರು. ಆದರೆ ನಿನ್ನೆ ಹೀಗೆ ಪಾದಚಾರಿ ಮಾರ್ಗದಲ್ಲಿ ಹೋಗುತ್ತಿದ್ದ ವ್ಯಕ್ತಿಯ ವಿಡಿಯೋ ಮಾಡುವಾಗ ಆತ ವಾಹನದಿಂದ ಕೆಳಗಿಳಿದು ಹಲ್ಲೆ ಮಾಡತೊಡಗಿದ. ಘಟನೆಯೆಲ್ಲವೂ ಅಂಕಿತ್ ರ ಮೊಬೈಲ್ ನಲ್ಲಿ ರೆಕಾರ್ಡ್ ಆಗಿದೆ.

'' ಚಿತ್ರಗಳು ಹಾಗೂ ವಿಡಿಯೋಗಳನ್ನು ನಾಶ ಮಾಡುವ ಉದ್ದೇಶದಿಂದ ನನ್ನ ಫೋನನ್ನು ಧ್ವಂಸ ಮಾಡಲೆತ್ನಿಸಿದ. ಇದೊಂದು ಅನಿರೀಕ್ಷಿತ, ಪುಂಡಾಟಿಕೆಯ ನಡವಳಿಕೆ ಎಂದು ಅಂಕಿತ್ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

ವ್ಯಕ್ತಿ ಹಲ್ಲೆ ಮಾಡಿರುವ ದೃಶ್ಯ ಫೇಸ್ ಬುಕ್ ನಲ್ಲಿ ವೈರಲ್ ಆಗಿದ್ದು, ಬೆಂಗಳೂರು ಟ್ರಾಫಿಕ್ ಪೊಲೀಸರು ಸೇರಿದಂತೆ ನೂರಾರು ಜನರು ಹಂಚಿಕೊಂಡಿದ್ದಾರೆ. ಇದು ಹಲ್ಲೆ ಘಟನೆ ಆಗಿರುವುದರಿಂದ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ದೂರು ನೀಡುವಂತೆ ಟ್ರಾಫಿಕ್ ಪೊಲೀಸರು ಸೂಚಿಸಿದ್ದಾರೆ.

ಅಂಕಿತ್ ಅವರ ದೂರು ಆಧರಿಸಿ ಪ್ರಕರಣ ದಾಖಲಿಸಲಾಗಿದೆ. ದ್ವಿಚಕ್ರ ವಾಹನವು ಹನುಮೇಗೌಡ ಎಂಬುವವರ ಹೆಸರಿನಲ್ಲಿ ನೋಂದಣೆಯಾಗಿದೆ. ಆರೋಪಿಗಾಗಿ ಶೋಧ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT