ಸಾಂದರ್ಭಿಕ ಚಿತ್ರ 
ರಾಜ್ಯ

ಉಲ್ಟಾ ಹೊಡೆದ ಲೆಕ್ಕಾಚಾರ: ದೀಪಾವಳಿಯಂದು ಬೆಂಗಳೂರಲ್ಲಿ ಹೆಚ್ಚಿದ ಮಾಲಿನ್ಯ

ಪರಿಸರ ಸ್ನೇಹಿ ದೀಪಾವಳಿ ಆಚರಿಸುವಂತೆ ಪಟಾಕಿ ವಿರೋಧಿ ಶಿಬಿರಗಳ ಮೂಲಕ ಜನರಿಗೆ ಈ ವರ್ಷ ಜಾಗೃತಿ ಮೂಡಿಸಿದ ಹಿನ್ನೆಲೆಯಲ್ಲಿ ಈ ಬಾರಿ ಮಾಲಿನ್ಯ...

ಬೆಂಗಳೂರು: ಪರಿಸರ ಸ್ನೇಹಿ ದೀಪಾವಳಿ ಆಚರಿಸುವಂತೆ ಪಟಾಕಿ ವಿರೋಧಿ ಶಿಬಿರಗಳ ಮೂಲಕ ಜನರಿಗೆ ಈ ವರ್ಷ ಜಾಗೃತಿ ಮೂಡಿಸಿದ ಹಿನ್ನೆಲೆಯಲ್ಲಿ ಈ ಬಾರಿ ಮಾಲಿನ್ಯ ಕಡಿಮೆಯಾಗಬಹುದೆಂಬ ಲೆಕ್ಕಾಚಾರ ಉಲ್ಟಾ ಹೊಡೆದಿದೆ. ಪ್ರತಿ ವರ್ಷಕ್ಕಿಂತ ಈ ವರ್ಷ ಮಾಲಿನ್ಯದ ಪ್ರಮಾಣ ಹೆಚ್ಚಿದೆ.ಆದರೆ ಟ್ರಾಫಿಕ್ ಪ್ರಮಾಣ ಕಡಿಮೆಯಾಗಿದೆ.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಎರಡು ದಿನಗಳ ಕಾಲ ನಿರಂತರ ವಾಯು ಗುಣಮಟ್ಟದ ಪರಿಸ್ಥಿತಿ ಅವಲೋಕನದಿಂದ ಈ ಮಾಹಿತಿ ತಿಳಿದು ಬಂದಿದೆ.

ಈ ವರ್ಷದ ದೀಪಾವಳಿಯಲ್ಲಿ ಹೆಚ್ಚಿರುವ ಮಾಲಿನ್ಯದಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಅಲರ್ಜಿ ಮತ್ತು ಉಸಿರಾಟದ ಸಮಸ್ಯೆಗಳು ಹೆಚ್ಚಾಗಿವೆ. ರಾಜ್ಯ ವಾಯಮಾಲಿನ್ಯ ನಿಯಂತ್ರಣ ಮಂಡಳಿ ಬೆಂಗಳೂರಿನ 13 ಕೇಂದ್ರಗಳ ಮಾಲಿನ್ಯ ಮಟ್ಟವನ್ನು ಪರಿಶೀಲಿಸಿದಾಗ ಮಾಲಿನ್ಯ ಪ್ರಮಾದ ಹೆಚ್ಚಿರುವುದು ಕಂಡು ಬಂದಿದೆ. ಕಳೆದ ಬಾರಿಗೆ ಹೋಲಿಸಿದರೇ ಈ ವರ್ಷದ ದೀಪಾವಳಿಯಲ್ಲಿ ವಾಯು ಮಾಲಿನ್ಯದ ಪ್ರಮಾಣ ಹೆಚ್ಚಿರುವುದು ಕಂಡು ಬಂದಿದೆ.

ಸಹಜ ದಿನಗಳಲ್ಲಿ ರಜಾದಿನಗಳಲ್ಲಿ ವಾಹನಗಳ ಓಡಾಟ ಕಡಿಮೆ ಇರುತ್ತಿದ್ದ ಕಾರಣ ಮಾಲಿನ್ಯದ ಪ್ರಮಾಣ ತಗ್ಗುತ್ತಿತ್ತು. ಆದರೆ ದೀಪಾವಳಿ ಕಾರಣವಾಹನಗಳ ಓಡಾಟ ಕಡಿಮೆಯಾಗಿದ್ದರೂ ಮಾಲಿನ್ಯದ ಪ್ರಮಾಣದಲ್ಲಿ ಇಳಿಕೆಯಾಗಿಲ್ಲ. ಜೊತೆಗೆ ವಾಯು ಮಾಲಿನ್ಯದ ಜೊತೆಗೆ ಶಬ್ದ ಮಾಲಿನ್ಯದಲ್ಲೂ ಹೆಚ್ಚಳವಾಗಿದೆ ಎಂದು ಅಂಕಿ ಅಂಶಗಳಿಂದ ತಿಳಿದು ಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT