ಸಾಂದರ್ಭಿಕ ಚಿತ್ರ 
ರಾಜ್ಯ

ಉಲ್ಟಾ ಹೊಡೆದ ಲೆಕ್ಕಾಚಾರ: ದೀಪಾವಳಿಯಂದು ಬೆಂಗಳೂರಲ್ಲಿ ಹೆಚ್ಚಿದ ಮಾಲಿನ್ಯ

ಪರಿಸರ ಸ್ನೇಹಿ ದೀಪಾವಳಿ ಆಚರಿಸುವಂತೆ ಪಟಾಕಿ ವಿರೋಧಿ ಶಿಬಿರಗಳ ಮೂಲಕ ಜನರಿಗೆ ಈ ವರ್ಷ ಜಾಗೃತಿ ಮೂಡಿಸಿದ ಹಿನ್ನೆಲೆಯಲ್ಲಿ ಈ ಬಾರಿ ಮಾಲಿನ್ಯ...

ಬೆಂಗಳೂರು: ಪರಿಸರ ಸ್ನೇಹಿ ದೀಪಾವಳಿ ಆಚರಿಸುವಂತೆ ಪಟಾಕಿ ವಿರೋಧಿ ಶಿಬಿರಗಳ ಮೂಲಕ ಜನರಿಗೆ ಈ ವರ್ಷ ಜಾಗೃತಿ ಮೂಡಿಸಿದ ಹಿನ್ನೆಲೆಯಲ್ಲಿ ಈ ಬಾರಿ ಮಾಲಿನ್ಯ ಕಡಿಮೆಯಾಗಬಹುದೆಂಬ ಲೆಕ್ಕಾಚಾರ ಉಲ್ಟಾ ಹೊಡೆದಿದೆ. ಪ್ರತಿ ವರ್ಷಕ್ಕಿಂತ ಈ ವರ್ಷ ಮಾಲಿನ್ಯದ ಪ್ರಮಾಣ ಹೆಚ್ಚಿದೆ.ಆದರೆ ಟ್ರಾಫಿಕ್ ಪ್ರಮಾಣ ಕಡಿಮೆಯಾಗಿದೆ.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಎರಡು ದಿನಗಳ ಕಾಲ ನಿರಂತರ ವಾಯು ಗುಣಮಟ್ಟದ ಪರಿಸ್ಥಿತಿ ಅವಲೋಕನದಿಂದ ಈ ಮಾಹಿತಿ ತಿಳಿದು ಬಂದಿದೆ.

ಈ ವರ್ಷದ ದೀಪಾವಳಿಯಲ್ಲಿ ಹೆಚ್ಚಿರುವ ಮಾಲಿನ್ಯದಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಅಲರ್ಜಿ ಮತ್ತು ಉಸಿರಾಟದ ಸಮಸ್ಯೆಗಳು ಹೆಚ್ಚಾಗಿವೆ. ರಾಜ್ಯ ವಾಯಮಾಲಿನ್ಯ ನಿಯಂತ್ರಣ ಮಂಡಳಿ ಬೆಂಗಳೂರಿನ 13 ಕೇಂದ್ರಗಳ ಮಾಲಿನ್ಯ ಮಟ್ಟವನ್ನು ಪರಿಶೀಲಿಸಿದಾಗ ಮಾಲಿನ್ಯ ಪ್ರಮಾದ ಹೆಚ್ಚಿರುವುದು ಕಂಡು ಬಂದಿದೆ. ಕಳೆದ ಬಾರಿಗೆ ಹೋಲಿಸಿದರೇ ಈ ವರ್ಷದ ದೀಪಾವಳಿಯಲ್ಲಿ ವಾಯು ಮಾಲಿನ್ಯದ ಪ್ರಮಾಣ ಹೆಚ್ಚಿರುವುದು ಕಂಡು ಬಂದಿದೆ.

ಸಹಜ ದಿನಗಳಲ್ಲಿ ರಜಾದಿನಗಳಲ್ಲಿ ವಾಹನಗಳ ಓಡಾಟ ಕಡಿಮೆ ಇರುತ್ತಿದ್ದ ಕಾರಣ ಮಾಲಿನ್ಯದ ಪ್ರಮಾಣ ತಗ್ಗುತ್ತಿತ್ತು. ಆದರೆ ದೀಪಾವಳಿ ಕಾರಣವಾಹನಗಳ ಓಡಾಟ ಕಡಿಮೆಯಾಗಿದ್ದರೂ ಮಾಲಿನ್ಯದ ಪ್ರಮಾಣದಲ್ಲಿ ಇಳಿಕೆಯಾಗಿಲ್ಲ. ಜೊತೆಗೆ ವಾಯು ಮಾಲಿನ್ಯದ ಜೊತೆಗೆ ಶಬ್ದ ಮಾಲಿನ್ಯದಲ್ಲೂ ಹೆಚ್ಚಳವಾಗಿದೆ ಎಂದು ಅಂಕಿ ಅಂಶಗಳಿಂದ ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ