ಮೋಹನ್ ದಾಸ್ ಪೈ 
ರಾಜ್ಯ

ಟಿಪ್ಪು ಸುಲ್ತಾನ್ ಒಬ್ಬ ಕ್ರೂರಿ ಮೂಲಭೂತವಾದಿ: ಮೋಹನ್ ದಾಸ್ ಪೈ

ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಣೆ ಮಾಡಲು ಹೊರಟಿರುವುದು, ಕೇಂದ್ರ ಸರ್ಕಾರ ಔರಂಗಜೇಬ್‌ನ ಜಯಂತಿ ಆಚರಣೆಗೆ ಮುಂದಾದಂತೆ ಎಂದು....

ಬೆಂಗಳೂರು: ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಣೆ ಮಾಡಲು ಹೊರಟಿರುವುದು, ಕೇಂದ್ರ ಸರ್ಕಾರ ಔರಂಗಜೇಬ್‌ನ ಜಯಂತಿ ಆಚರಣೆಗೆ ಮುಂದಾದಂತೆ ಎಂದು  ಮಣಿಪಾಲ್ ಗ್ಲೋಬಲ್ ಎಜುಕೇಷನ್ ಸೊಸೈಟಿ ಅಧ್ಯಕ್ಷ  ಟಿ.ವಿ ಮೋಹನ್ ದಾಸ್ ಪೈ ಅಭಿಪ್ರಾಯ ಪಟ್ಟಿದ್ದಾರೆ.  

ಸರ್ಕಾರ ಈ ವಿಷಯದಲ್ಲಿ ರಾಜಕೀಯ ಮಾಡಲು ಹೋಗಬಾರದು. ಪಕ್ಷದ ವೇದಿಕೆಯಲ್ಲಿ ಯಾವುದೇ ವ್ಯಕ್ತಿಯ ಜಯಂತಿಯನ್ನು ಆಚರಿಸಲಿ. ಆದರೆ, ಸರ್ಕಾರಿ ವ್ಯವಸ್ಥೆಯನ್ನು ಅದಕ್ಕೆ ಬಳಕೆ ಮಾಡುವುದು ಬೇಡ ಎಂದು ಅವರು ಹೇಳಿದ್ದಾರೆ.

ಟಿಪ್ಪು ಸುಲ್ತಾನ್ ಒಬ್ಬ ಕ್ರೂರಿ, ಮೂಲಭೂತವಾದಿ. ಸಾವಿರಾರು ಜನರ ಕಗ್ಗೊಲೆಗೆ ಆತ ಕಾರಣವಾಗಿದ್ದಾನೆ. ಇಂತಹ ವಿವಾದಿತ ವ್ಯಕ್ತಿಯ ಜಯಂತಿಯನ್ನು ಸರ್ಕಾರದಿಂದ ಆಚರಿಸುವುದು ಬೇಡ ಎಂದು ತಿಳಿಸಿದ್ದಾರೆ.

ಕೊಡಗಿನಲ್ಲಿ ಮತಾಂತರ ಮಾಡಿದ ವ್ಯಕ್ತಿ ಟಿಪ್ಪು. ಮಂಗಳೂರಿನ ಕ್ಯಾಥೊಲಿಕ್‌ ಸಮುದಾಯದ 20 ಸಾವಿರ ಜನರನ್ನು ಶ್ರೀರಂಗಪಟ್ಟಣದಲ್ಲಿ ಬಂಧಿಸಿಟ್ಟಿದ್ದ. ಶೃಂಗೇರಿ ಮಠಕ್ಕೆ ಆತ ಕೊಡುಗೆ ನೀಡಿದ ಕುರಿತು ದೊಡ್ಡದಾಗಿ ಬಿಂಬಿಸಲಾಗುತ್ತದೆ ಎಂದು ಹೇಳಿದ್ದಾರೆ.

ಸರ್ಕಾರದಿಂದ ಜಯಂತಿ ಆಚರಿಸಲೇ ಬೇಕು ಎಂದಾದರೆ ಮೈಸೂರು ಒಡೆಯರ್, ಸರ್‌ ಮಿರ್ಜಾ ಇಸ್ಮಾಯಿಲ್‌, ಸರ್‌ ಎಂ.ವಿಶ್ವೇಶ್ವರಯ್ಯ ಅವರಂತಹ ಮಹಾನ್‌ ವ್ಯಕ್ತಿಗಳ ಜಯಂತಿ ಆಚರಿಸಲಿ. ಇವರೆಲ್ಲ ನಾಡಿನ ಪ್ರಗತಿಗಾಗಿ ಕೊಡುಗೆ ನೀಡಿದವರು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT