ಸಾಂದರ್ಭಿಕ ಚಿತ್ರ 
ರಾಜ್ಯ

ಲಂಚ ಪಡೆಯುತ್ತಿದ್ದ ವಾಣಿಜ್ಯ ತೆರಿಗೆ ಅಧಿಕಾರಿ ಎಸಿಬಿ ಬಲೆಗೆ

ಲಾರಿ ಮಾಲೀಕರಿಂದ 47 ಸಾವಿರ ರುಪಾಯಿ ಲಂಚ ಪಡೆಯುತ್ತಿದ್ದ ಚಾಮರಾಜಪೇಟೆ ವೃತ್ತ ವಾಣಿಜ್ಯ ತೆರಿಗೆ ಅಧಿಕಾರಿ ಓಂಕಾರಪ್ಪ...

ಬೆಂಗಳೂರು: ಲಾರಿ ಮಾಲೀಕರಿಂದ 47 ಸಾವಿರ ರುಪಾಯಿ ಲಂಚ ಪಡೆಯುತ್ತಿದ್ದ ಚಾಮರಾಜಪೇಟೆ ವೃತ್ತ ವಾಣಿಜ್ಯ ತೆರಿಗೆ ಅಧಿಕಾರಿ ಓಂಕಾರಪ್ಪ ಅವರು ಶನಿವಾರ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬಲೆಗೆ ಬಿದ್ದಿದ್ದಾರೆ.
ಸರಕು ಸಾಗಿಸುತ್ತಿದ್ದ ವಾಹನವೊಂದನ್ನು ಅ. 12ರಂದು ಓಂಕಾರಪ್ಪ ಹಿಡಿದಿದ್ದರು. ಈ ವಾಹನವನ್ನು 21ರಂದು ತಪಾಸಣೆ ನಡೆಸಿದಾಗ ಸರಕು ಪಟ್ಟಿ ಮತ್ತು ವಾಹನದಲ್ಲಿದ್ದ ಸರಕುಗಳಿಗೆ ವ್ಯತ್ಯಾಸ ಕಂಡುಬಂದಿತ್ತು. ಹೀಗಾಗಿ 1.17 ಲಕ್ಷ ರುಪಾಯಿ ದಂಡ ವಿಧಿಸಿದ್ದರು.
ನಿಯಮ ಪ್ರಕಾರ ಇಂಥ ಪ್ರಕರಣಗಳಲ್ಲಿ ವಾಹನದ ಮಾಲೀಕರಿಗೆ ನೋಟಿಸ್‌ ನೀಡಿ,  ವಿವರಣೆ ಪಡೆದು ಬಳಿಕ ದಂಡ ವಿಧಿಸಬೇಕು. ನೋಟಿಸ್‌ ನೀಡಲು 20 ಸಾವಿರ ರುಪಾಯಿ ಲಂಚ ನೀಡುವಂತೆ ವಾಹನ ಮಾಲೀಕರಿಗೆ ಓಂಕಾರಪ್ಪ ಒತ್ತಾಯಿಸಿದ್ದರು.
ಆರಂಭದಲ್ಲಿ 3 ಸಾವಿರ ರುಪಾಯಿ ಲಂಚ ಪಡೆದಿದ್ದ ಓಂಕಾರಪ್ಪ, ಬಾಕಿ ಹಣ ನೀಡಲು ವಿಳಂಬ ಮಾಡಿದರು ಎಂಬ ಕಾರಣಕ್ಕೆ ಇದೇ ಮಾಲೀಕರಿಗೆ ಸೇರಿದ ಮತ್ತೊಂದು ಸರಕು ಸಾಗಣೆ ವಾಹನ ತಡೆಹಿಡಿದಿದ್ದರು. 
ಮೊದಲ ಪ್ರಕರಣದ ಬಾಕಿ 17 ಸಾವಿರ ರುಪಾಯಿ ಮತ್ತು ಎರಡನೇ ಪ್ರಕರಣದಲ್ಲಿ 30 ಸಾವಿರ ಸೇರಿ ಒಟ್ಟು 47 ಸಾವಿರ ರುಪಾಯಿ ಲಂಚ ನೀಡುವಂತೆ ವಾಹನದ ಮಾಲೀಕರಿಗೆ ಒತ್ತಾಯಿಸಿದ್ದರು. ಈ ಬಗ್ಗೆ ವಾಹನದ ಮಾಲೀಕರು ಎಸಿಬಿಗೆ ದೂರು ನೀಡಿದ್ದರು. ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಿಸಿ, ಓಂಕಾರಪ್ಪ ಅವರನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT