ಸಾಂದರ್ಭಿಕ ಚಿತ್ರ 
ರಾಜ್ಯ

ಲಂಚ ಪಡೆಯುತ್ತಿದ್ದ ವಾಣಿಜ್ಯ ತೆರಿಗೆ ಅಧಿಕಾರಿ ಎಸಿಬಿ ಬಲೆಗೆ

ಲಾರಿ ಮಾಲೀಕರಿಂದ 47 ಸಾವಿರ ರುಪಾಯಿ ಲಂಚ ಪಡೆಯುತ್ತಿದ್ದ ಚಾಮರಾಜಪೇಟೆ ವೃತ್ತ ವಾಣಿಜ್ಯ ತೆರಿಗೆ ಅಧಿಕಾರಿ ಓಂಕಾರಪ್ಪ...

ಬೆಂಗಳೂರು: ಲಾರಿ ಮಾಲೀಕರಿಂದ 47 ಸಾವಿರ ರುಪಾಯಿ ಲಂಚ ಪಡೆಯುತ್ತಿದ್ದ ಚಾಮರಾಜಪೇಟೆ ವೃತ್ತ ವಾಣಿಜ್ಯ ತೆರಿಗೆ ಅಧಿಕಾರಿ ಓಂಕಾರಪ್ಪ ಅವರು ಶನಿವಾರ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬಲೆಗೆ ಬಿದ್ದಿದ್ದಾರೆ.
ಸರಕು ಸಾಗಿಸುತ್ತಿದ್ದ ವಾಹನವೊಂದನ್ನು ಅ. 12ರಂದು ಓಂಕಾರಪ್ಪ ಹಿಡಿದಿದ್ದರು. ಈ ವಾಹನವನ್ನು 21ರಂದು ತಪಾಸಣೆ ನಡೆಸಿದಾಗ ಸರಕು ಪಟ್ಟಿ ಮತ್ತು ವಾಹನದಲ್ಲಿದ್ದ ಸರಕುಗಳಿಗೆ ವ್ಯತ್ಯಾಸ ಕಂಡುಬಂದಿತ್ತು. ಹೀಗಾಗಿ 1.17 ಲಕ್ಷ ರುಪಾಯಿ ದಂಡ ವಿಧಿಸಿದ್ದರು.
ನಿಯಮ ಪ್ರಕಾರ ಇಂಥ ಪ್ರಕರಣಗಳಲ್ಲಿ ವಾಹನದ ಮಾಲೀಕರಿಗೆ ನೋಟಿಸ್‌ ನೀಡಿ,  ವಿವರಣೆ ಪಡೆದು ಬಳಿಕ ದಂಡ ವಿಧಿಸಬೇಕು. ನೋಟಿಸ್‌ ನೀಡಲು 20 ಸಾವಿರ ರುಪಾಯಿ ಲಂಚ ನೀಡುವಂತೆ ವಾಹನ ಮಾಲೀಕರಿಗೆ ಓಂಕಾರಪ್ಪ ಒತ್ತಾಯಿಸಿದ್ದರು.
ಆರಂಭದಲ್ಲಿ 3 ಸಾವಿರ ರುಪಾಯಿ ಲಂಚ ಪಡೆದಿದ್ದ ಓಂಕಾರಪ್ಪ, ಬಾಕಿ ಹಣ ನೀಡಲು ವಿಳಂಬ ಮಾಡಿದರು ಎಂಬ ಕಾರಣಕ್ಕೆ ಇದೇ ಮಾಲೀಕರಿಗೆ ಸೇರಿದ ಮತ್ತೊಂದು ಸರಕು ಸಾಗಣೆ ವಾಹನ ತಡೆಹಿಡಿದಿದ್ದರು. 
ಮೊದಲ ಪ್ರಕರಣದ ಬಾಕಿ 17 ಸಾವಿರ ರುಪಾಯಿ ಮತ್ತು ಎರಡನೇ ಪ್ರಕರಣದಲ್ಲಿ 30 ಸಾವಿರ ಸೇರಿ ಒಟ್ಟು 47 ಸಾವಿರ ರುಪಾಯಿ ಲಂಚ ನೀಡುವಂತೆ ವಾಹನದ ಮಾಲೀಕರಿಗೆ ಒತ್ತಾಯಿಸಿದ್ದರು. ಈ ಬಗ್ಗೆ ವಾಹನದ ಮಾಲೀಕರು ಎಸಿಬಿಗೆ ದೂರು ನೀಡಿದ್ದರು. ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಿಸಿ, ಓಂಕಾರಪ್ಪ ಅವರನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT