ಬೆಂಕಿಗೆ ಆಹುತಿಯಾಗಿರುವ ದಾಖಲೆಗಳು 
ರಾಜ್ಯ

ಬೆಳಗಾವಿ: ಕಿಡಿಗೇಡಿಗಳಿಂದ ಕನ್ನಡ ಶಾಲೆಗೆ ಬೆಂಕಿ, ದಾಖಲೆಗಳು ಭಸ್ಮ

ಕನ್ನಡ ಪ್ರಾಥಮಿಕ ಸರ್ಕಾರಿ ಶಾಲೆ ನಂ.17ರ ಕೊಠಡಿಯೊಂದಕ್ಕೆ ಕಿಡಿಗೇಡಿಗಳು ಭಾನುವಾರ ಮಧ್ಯರಾತ್ರಿ ಬೆಂಕಿ ಹಚ್ಚಿದ ಘಟನೆ ಬೆಳಗಾವಿಯ ಶಹಾಪುರದಲ್ಲಿ ..

ಬೆಳಗಾವಿ:  ಕನ್ನಡ ಪ್ರಾಥಮಿಕ ಸರ್ಕಾರಿ ಶಾಲೆ ನಂ.17ರ ಕೊಠಡಿಯೊಂದಕ್ಕೆ ಕಿಡಿಗೇಡಿಗಳು ಭಾನುವಾರ ಮಧ್ಯರಾತ್ರಿ ಬೆಂಕಿ ಹಚ್ಚಿದ ಘಟನೆ ಬೆಳಗಾವಿಯ ಶಹಾಪುರದಲ್ಲಿ ನಡೆದಿದೆ.

ಶಹಾಪುರ ಪೊಲೀಸ್‌ ಠಾಣೆಯ ಆವರಣದ ಗೋಡೆಗೆ ಹೊಂದಿಕೊಂಡಂತೆ ಶಾಲೆ ಇದ್ದರೂ ಈ ಘಟನೆ ಪೊಲೀಸರ ಗಮನಕ್ಕೆ ಬಂದಿರಲಿಲ್ಲ. ಸೋಮವಾರ ಬೆಳಿಗ್ಗೆ ಶಿಕ್ಷಕರು ಶಾಲೆಗೆ ಬಂದ ನಂತರವಷ್ಟೇ ಪ್ರಕರಣ ಬೆಳಕಿಗೆ ಬಂದಿದೆ. ನಗರ ವಲಯ ಬಿಇಓ ಬಸವರಾಜ ನಾಲತವಾಡ, ಶಹಾಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶಾಲೆಯ 7ನೇ ತರಗತಿಯ ಕೊಠಡಿಯೊಳಗೆ ರಾತ್ರಿ ನುಗ್ಗಿದ ಕಿಡಿಗೇಡಿಗಳು ಅಲ್ಲಿದ್ದ ಪಠ್ಯಪುಸ್ತಕಗಳು, ವಿದ್ಯಾರ್ಥಿಗಳ ಹಾಜರಾತಿ ಪುಸ್ತಕ, ಆರೋಗ್ಯ ತಪಾಸಣೆ ಕಾರ್ಡ್‌, ಪ್ರಾಜೆಕ್ಟ್‌ ವರದಿಗಳಿಗೆ ಬೆಂಕಿ ಹಚ್ಚಿ, ಆದಾರ್ ಕಾರ್ಡ್, ಪಡಿತರ ಕಾರ್ಡ್, ವಿಟಮಿನ್ ಮಾತ್ರೆ  ಸೇರಿದಂತೆ ಹಲವು ವಸ್ತುಗಳನ್ನು ಸುಟ್ಟುಹಾಕಿದ್ದಾರೆ. ಇನ್ನು ಕಿಡಿಗೇಡಿಗಳು ಶಾಲಾ ಆವರಣದಲ್ಲಿ ಮಧ್ಯಪಾನ ಸೇವಿಸಿದ್ದಾರೆ ಎಂಬುದು ತಿಳಿದು ಬಂದಿದೆ.

ಇದಕ್ಕೂ ಮೊದಲು ಹಲವು ಬಾರಿ ಇದೇ ರೀತಿ ಕೆಲ ಕಿಡಿಗೇಡಿಗಳು ಶಾಲೆಯ ಹಲವು ವಸ್ತುಗಳನ್ನು ಹಾನಿ ಮಾಡಿದ್ದರು, ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿತ್ತು. ರಾತ್ರಿ ವೇಳೆ ಶಾಲೆ ಆವರಣದೊಳಗೆ ಪ್ರವೇಶಿಸುತ್ತಿದ್ದ ಇಬ್ಬರು ಯುವಕರನ್ನು ಕರೆದು ಪೊಲೀಸರು ಎಚ್ಚರಿಕೆ  ನೀಡಿದ್ದರು.


Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT