ನಟ ಶಿವರಾಜ್ ಕುಮಾರ್ (ಸಂಗ್ರಹ ಚಿತ್ರ) 
ರಾಜ್ಯ

ದುರಂತ ಇಡೀ ಚಿತ್ರರಂಗಕ್ಕೆ ದೊಡ್ಡ ಎಚ್ಚರಿಕೆ: ನಟ ಶಿವರಾಜ್ ಕುಮಾರ್

ತಿಪ್ಪಗೊಂಡನಹಳ್ಳಿ ಜಲಾಯಶದಲ್ಲಿ ಸೋಮವಾರ ನಡೆದ ದುರಂತ ಇಡೀ ಚಿತ್ರರಂಗಕ್ಕೆ ದೊಡ್ಡ ಎಚ್ಚರಿಕೆ ಎಂದು ನಟ ಶಿವರಾಜ್ ಕುಮಾರ್ ಹೇಳಿದ್ದಾರೆ.

ರಾಮನಗರ: ತಿಪ್ಪಗೊಂಡನಹಳ್ಳಿ ಜಲಾಯಶದಲ್ಲಿ ಸೋಮವಾರ ನಡೆದ ದುರಂತ ಇಡೀ ಚಿತ್ರರಂಗಕ್ಕೆ ದೊಡ್ಡ ಎಚ್ಚರಿಕೆ ಎಂದು ನಟ  ಶಿವರಾಜ್ ಕುಮಾರ್ ಹೇಳಿದ್ದಾರೆ.

ದುರಂತ ನಡೆದ ತಿಪ್ಪಗೊಂಡನಹಳ್ಳಿ ಜಲಾಶಯಕ್ಕೆ ಇಂದು ಭೇಟಿ ನೀಡಿದ್ದ ನಟ ಶಿವರಾಜ್ ಕುಮಾರ್ ಅವರು ರಕ್ಷಣಾ ಕಾರ್ಯಾಚರಣೆಯನ್ನು ವೀಕ್ಷಿಸಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ನಡೆದ ದುರಂತ ಇಡೀ ಚಿತ್ರರಂಗಕ್ಕೆ ದೊಡ್ಡ ಎಚ್ಚರಿಕೆಯ ಕರೆಘಂಟೆಯಾಗಬೇಕು. ಸಾಹಸ ಮಾಡುವಾಗ ಅನಿರೀಕ್ಷಿತ ದುರಂತ ನಡೆದು ಹೋಗಿದೆ. ಆದರೆ ನಾನು ಹೇಳುವುದೇನು ಎಂದರೆ ನಮಗೆ ಸಾಧ್ಯವಾಗದ ಕೆಲಸವನ್ನು ನಾವು ಎಂದಿಗೂ ಮಾಡಲೇಬಾರದು. ಹೀರೋಗಳಾಗಲಿ ಅಥವಾ ಸಹನಟರಾಗಲಿ ಎಲ್ಲರೂ ಒಂದೇ ಎಂದು ಹೇಳಿದರು.

ನಾನೂ ಕೂಡ ಈ ಹಿಂದೆ ಮೇಲಿನಿಂದ ನೀರಿಗೆ ಜಂಪ್ ಮಾಡಿದ್ದೆ. ಆದರೆ ಆಗ ಸೂಕ್ತ ಮುಂಜಾಗ್ರತೆಗಳನ್ನು ಕೈಗೊಳ್ಳಲಾಗಿತ್ತು. ಇಲ್ಲೂ ಕೂಡ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದರೂ ಎಲ್ಲೋ ಒಂದು ಲೋಪಸಂಭವಿಸಿ ದುರಂತ ನಡೆದಿದೆ. ಇದಕ್ಕೆ ಯಾರನ್ನೂ ದೂಷಿಸಲು ಸಾಧ್ಯವಿಲ್ಲ ಎಂದು ಶಿವರಾಜ್ ಕುಮಾರ್ ಹೇಳಿದರು.

ಅಂತೆಯೇ ಮೃತ ಉದಯ್ ಮತ್ತು ಅನಿಲ್ ಅವರ ಕುಟುಂಬದ ಕುರಿತು ಮಾತನಾಡಿದ ಶಿವರಾಜ್ ಕುಮಾರ್ ಅವರು, ನಾವೀಗ ಎರಡು ಅಮೂಲ್ಯ ರತ್ನಗಳನ್ನು ಕಳೆದುಕೊಂಡಿದ್ದೇವೆ. ಅವರ ಕುಟುಂಬವನ್ನು ನೆನೆಸಿಕೊಂಡರೆ ಹೊಟ್ಟೆ ಉರಿಯುತ್ತದೆ. ದುಡಿಯುವ ಕೈಗಳನ್ನು ಕಳೆದುಕೊಂಡು ಅನಾಥವಾಗಿದ್ದಾರೆ. ಚಿತ್ರರಂಗದ ಗಣ್ಯರೊಂದಿಗೆ ಮಾತನಾಡಿ ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸುತ್ತೇವೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT