ಸಂಗ್ರಹ ಚಿತ್ರ 
ರಾಜ್ಯ

ಮಾಸ್ತಿಗುಡಿ ದುರಂತ: ಮತ್ತೋರ್ವ ನಟ ಅನಿಲ್ ಮೃತ ದೇಹವೂ ಪತ್ತೆ!

ಮಾಸ್ತಿಗುಡಿ ಚಿತ್ರದ ಚಿತ್ರೀಕರಣ ವೇಳೆ ತಿಪ್ಪಗೊಂಡನಹಳ್ಳಿ ಡ್ಯಾಂನ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ ನಟ ಅನಿಲ್ ಮೃತದೇಹ ಪತ್ತೆಯಾಗಿದ್ದು, ಡ್ಯಾಂ ಅವರಣದಲ್ಲಿಯೇ ಅನಿಲ್ ಅವರ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.

ಬೆಂಗಳೂರು: ಮಾಸ್ತಿಗುಡಿ ಚಿತ್ರದ ಚಿತ್ರೀಕರಣ ವೇಳೆ ತಿಪ್ಪಗೊಂಡನಹಳ್ಳಿ ಡ್ಯಾಂನ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ ನಟ ಅನಿಲ್ ಮೃತದೇಹ ಪತ್ತೆಯಾಗಿದ್ದು, ಡ್ಯಾಂ ಅವರಣದಲ್ಲಿಯೇ ಅನಿಲ್ ಅವರ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.

ತಿಪ್ಪಂಗೊಂಡನಹಳ್ಳಿ ಡ್ಯಾಂ ಬಳಿಯಲ್ಲೇ ಅನಿಲ್ ಅವರ ಮೃತದೇಹ ಕೂಡ ಇಂದು ಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿರುವ ಎನ್ ಡಿಆರ್ ಎಫ್ ತಂಡದ ಸಿಬ್ಬಂದಿಗಳು ಅನಿಲ್ ಮೃತದೇಹವನ್ನು ಗುರುತಿಸಿ ಶವವನ್ನು  ದಡಕ್ಕೆ ಸೇರಿಸಿದ್ದಾರೆ. ಕೂಡಲೇ ಶವವನ್ನು ಇಳಿಸಿಕೊಂಡ ಅಧಿಕಾರಿಗಳು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸುವ ಕುರಿತು ಚಿಂತನೆ ನಡೆಸುತ್ತಿದ್ದರಾದರೂ, ಈ ಹಂತದಲ್ಲಿ ಮಧ್ಯ ಪ್ರವೇಶಿಸಿದ ನಟ  ದುನಿಯಾ ವಿಜಯ್ ಅವರು ಸ್ಥಳದಲ್ಲೇ ಮರಣೋತ್ತರ ಪರೀಕ್ಷೆ ನಡೆಸುವಂತೆ ಮನವಿ ಮಾಡಿದರು. ಈಗಾಗಲೇ ದೇಹ ಊದಿಕೊಂಡಿದ್ದು, ದೇಹದಿಂದ ದುರ್ವಾಸನೆ ಬರುತ್ತಿದೆ. ಹೀಗಾಗಿ ಆದಷ್ಟು ಬೇಗ ಮರಣೋತ್ತರ ಪರೀಕ್ಷೆ ನಡೆಸಿ  ಅವರ ಕುಟುಂಬಸ್ಥರಿಗೆ ದೇಹ ರವಾನಿಸುವಂತೆ ಸಲಹೆ ನೀಡಿದರು.

ವಿಜಯ್ ಅವರ ಸಲಹೆ ಮೇರೆಗೆ ಸ್ಥಳದಲ್ಲಿ ಹಾಕಲಾಗಿರುವ ಪೆಂಡಾಲ್ ನಲ್ಲೇ ಅನಿಲ್ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಬಳಿಕ ಅನಿಲ್ ಮೃತ ದೇಹವನ್ನು ಬನಶಂಕರಿ 2ನೇ ಹಂತದಲ್ಲಿರುವ ಅವರ ನಿವಾಸಕ್ಕೆ ರವಾನಿಸಲಾಗುತ್ತದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT