ರಾಜ್ಯ

ಬೆಂಗಳೂರು: ಕೌಟುಂಬಿಕ ಕಲಹದಿಂದ ನೊಂದ ವಿವಾಹಿತ ಮಹಿಳೆ ಆತ್ಮಹತ್ಯೆ

Shilpa D

ಬೆಂಗಳೂರು: ಕೌಟುಂಬಿಕ ಕಲಹದಿಂದಾಗಿ 25 ವರ್ಷದ ವಿವಾಹಿತ ಮಹಿಳೆಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ಬಸವೇಶ್ವರ ನಗರದ ಮಂಜುನಾಥ ನಗರದಲ್ಲಿ ನಡೆದಿದೆ.

ಮಂಜುನಾಥ ನಗರದ ಸುಜಿತಾ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಸುಜಿತಾ ವಿನೋದ್ ಎಂಬುವವರನ್ನು ವಿವಾಹವಾಗಿದ್ದರು, ಇವರಿಗೆ 8 ತಿಂಗಳಿನ ಹೆಣ್ಣು ಮಗುವಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಸಾರ ವಿಷಯ ಸಂಬಂಧ ಸುಜಿತಾ ಮತ್ತು ವಿನೋದ ಜಗಳ ವಾಡಿದ್ದಾರೆ, ನಂತರ ಪತಿ ನಿದ್ರಿಸಿದ ನಂತರ ರಾತ್ರಿ 12.30 ರ ಸುಮಾರಿಗೆ ತನ್ನ ಸೀರೆಯಲ್ಲಿ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಬೆಳಗ್ಗೆ ವಿನೋದ್ ಎದ್ದಾಗ ಪ್ರಕರಣ ಬೆಳಕಿಗೆ ಬಂದಿದೆ. ನಂತರ ವಿನೋದ್ ಕುಟುಂಬಸ್ಥರಿಗೆ ವಿಷಯ ತಿಳಿಸಿದ್ದಾನೆ. ವಿಚಾರಣೆಗಾಗಿ  ವಿನೋದ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

SCROLL FOR NEXT