ಸಂಗ್ರಹ ಚಿತ್ರ 
ರಾಜ್ಯ

ನ.24ರವೆರಗೂ ಹಳೆಯ ನೋಟುಗಳ ಚಲಾವಣೆ ವಿಸ್ತರಿಸಿದ ಕೇಂದ್ರ ಸರ್ಕಾರ!

ಪ್ರಮುಖ ಬೆಳವಣಿಗೆಯೊಂದರಲ್ಲಿ ನಿಷೇಧಕ್ಕೆ ಒಳಗಾಗಿರುವ ಹಳೆಯ 500 ಮತ್ತು 1000 ರು.ಮುಖಬೆಲೆಯ ನೋಟುಗಳ ಚಲಾವಣೆ ಕಾಲಾವಧಿಯನ್ನು ಕೇಂದ್ರ ಸರ್ಕಾರ ಮತ್ತೆ 10 ದಿನಕ್ಕೆ ವಿಸ್ತರಿಸಿದೆ ಎಂದು ತಿಳಿದುಬಂದಿದೆ.

ನವದೆಹಲಿ: ಪ್ರಮುಖ ಬೆಳವಣಿಗೆಯೊಂದರಲ್ಲಿ ನಿಷೇಧಕ್ಕೆ ಒಳಗಾಗಿರುವ ಹಳೆಯ 500 ಮತ್ತು 1000 ರು.ಮುಖಬೆಲೆಯ ನೋಟುಗಳ ಚಲಾವಣೆ ಕಾಲಾವಧಿಯನ್ನು ಕೇಂದ್ರ ಸರ್ಕಾರ ಮತ್ತೆ 10 ದಿನಕ್ಕೆ ವಿಸ್ತರಿಸಿದೆ ಎಂದು ತಿಳಿದುಬಂದಿದೆ.

ಸರ್ಕಾರಿ ಕಚೇರಿ, ಸರ್ಕಾರಿ ಸಾರಿಗೆ ಸಂಸ್ಥೆ, ಪೆಟ್ರೋಲ್ ಬಂಕ್ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಹಳೆಯ ನೋಟುಗಳ ಚಲಾವಣೆ ಕಾಲಾವಧಿಯನ್ನು ಮತ್ತೆ 10 ದಿನಗಳ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ  ನೋಟು ರದ್ಧತಿ ಘೋಷಣೆ ಮಾಡುವಾಗ ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 14ರ ವರೆಗೂ ಹಳೆಯ ನೋಟುಗಳನ್ನು ಸರ್ಕಾರಿ ಸಂಸ್ಥೆಗಳಸಲ್ಲಿ ಬಳಕೆ ಮಾಡಬಹುದು ಎಂದು ಹೇಳಿದ್ದರು. ಅದರಂತೆ ಇಂದಿಗೆ ಹಳೆಯ  ನೋಟುಗಳ ಚಲಾವಣೆ ಅಂತ್ಯವಾಗಬೇಕಿತ್ತು. ಆದರೆ ಹಳೆಯ ನೋಟುಗಳ ಚಲಾವಣೆಯನ್ನು ಮತ್ತಷ್ಟು ದಿನಗಳ ಕಾಲ ಮುಂದುವರೆಸುವಂತೆ ದೇಶಾದ್ಯಂತ ವ್ಯಾಪಕ ಮನವಿಗಳ ಕೇಳಿಬಂದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ಮತ್ತೆ  ಈ ಕಾಲಾವಧಿಯನ್ನು ನವೆಂಬರ್ 24ರವರೆಗೂ ವಿಸ್ತರಿಸಿದೆ.

ಆ ಮೂಲಕ ಮತ್ತೆ 10 ದಿನಗಳ ಕಾಲ ಹಳೆಯ ನೋಟುಗಳನ್ನು ಸರ್ಕಾರಿ ಕಚೇರಿ, ಸರ್ಕಾರಿ ಸಾರಿಗೆ ಸಂಸ್ಥೆ, ಪೆಟ್ರೋಲ್ ಬಂಕ್ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಬಳಕೆ ಮಾಡಲು ಕೇಂದ್ರ ಸರ್ಕಾರ ಅವಕಾಶ ನೀಡಿದೆ. ನೋಟು  ನಿಷೇಧ ಘೋಷಣೆ ಹೊರಬಿದ್ದ ಬೆನ್ನಲ್ಲೇ ಬ್ಯಾಂಕ್ ಗಳತ್ತ ಹರಿಯುತ್ತಿರುವ ಜನಸ್ತೋಮ ದಿನೇ ದಿನೇ ಹೆಚ್ಚಾಗುತ್ತಿದ್ದು, ಇಂದು ಗುರುನಾನಕ್ ಜಯಂತಿ ಹೊರತಾಗಿಯೂ ಕೇಂದ್ರ ಸರ್ಕಾರದ ಆದೇಶದ ಹಿನ್ನಲೆಯಲ್ಲಿ ಬಹುತೇಕ  ಬ್ಯಾಂಕ್ ಗಳು ಕಾರ್ಯ ನಿರ್ವಹಿಸುತ್ತಿವೆ. ಹೀಗಾಗಿ ಜನರು ಠೇವಣಿ ಹಾಗೂ ಹಣ ಬದಲಾವಣೆಗಾಗಿ ಬ್ಯಾಂಕ್ ಗಳ ಮುಂದೆ ಸರತಿ ಸಾಲಲ್ಲಿ ನಿಂತಿರುವುದು ಮುಂದುವರೆದಿದೆ.=

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT