ಸಾಂದರ್ಭಿಕ ಚಿತ್ರ 
ರಾಜ್ಯ

ನೋಟ್ ನಿಷೇಧದ ಎಫೆಕ್ಟ್: ಹುಬ್ಬಳಿಯಲ್ಲಿ 60 ಲಕ್ಷ ರು. ನಗದು ಸಾಗಿಸುತ್ತಿದ್ದ ಇಬ್ಬರ ಬಂಧನ

ಕೇಂದ್ರ ಸರ್ಕಾರ 500 ಹಾಗೂ 1000 ರುಪಾಯಿ ನೋಟ್ ನಿಷೇಧಿಸಿದ ನಂತರ ಕಪ್ಪು ಹಣ ಹೊಂದಿರುವ ಕುಳಗಳಿಗೆ ದೊಡ್ಡ ತಲೆನೋವಾಗಿದ್ದು,...

ಹುಬ್ಬಳ್ಳಿ: ಕೇಂದ್ರ ಸರ್ಕಾರ 500 ಹಾಗೂ 1000 ರುಪಾಯಿ ನೋಟ್ ನಿಷೇಧಿಸಿದ ನಂತರ ಕಪ್ಪು ಹಣ ಹೊಂದಿರುವ ಕುಳಗಳಿಗೆ ದೊಡ್ಡ ತಲೆನೋವಾಗಿದ್ದು, ಸೋಮವಾರ ಕಾರಿನಲ್ಲಿ 60 ಲಕ್ಷ ರುಪಾಯಿ ನಗದು ಸಾಗಿಸುತ್ತಿದ್ದ ಇಬ್ಬರನ್ನು ಹುಬ್ಬಳಿಯ ಕೇಶ್ವಾಪುರ ಪೊಲೀಸರು ಬಂಧಿಸಿದ್ದಾರೆ.
ಇಂದು ಬೆಳಗಿನ ಜಾವ ಕೇಶ್ವಾಪುರದ ಅರಿಹಂತ ನಗರದಿಂದ ಹೊಸಪೇಟೆಗೆ ಹಣ ಸಾಗಿಸುತ್ತಿದ್ದ ಪ್ರವೀಣ್ ಜೈನ್ ಹಾಗೂ ಶ್ರೀನಿವಾಸ್ ಮೂರ್ತಿ ಎಂಬುವವರನ್ನು ಪೊಲೀಸರು ಬಂಧಿಸಿದ್ದು, ಅವರಿಂದ 60 ಲಕ್ಷ ರುಪಾಯಿ ನಗದು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಹಣದಲ್ಲಿ ರದ್ದಾದ 500 ಹಾಗೂ 1000 ರು. ಮುಖಬೆಲೆಯ ನೋಟುಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಇಬ್ಬರು ಆರೋಪಿಗಳು ಹೊಸಪೇಟೆ ನಿವಾಸಿಗಳಾಗಿದ್ದು, ಪ್ರವೀಣ್ ಜೈನ್ ತನ್ನ ಬಳಿ ಇದ್ದ ಸುಮಾರು 60 ಲಕ್ಷ ರೂಪಾಯಿ ಕಪ್ಪುಹಣವನ್ನು ವೈಟ್ ಮನಿ ಮಾಡಿಕೊಳ್ಳಲು ಪರದಾಡುತ್ತಿದ್ದ. ಈ ಸಂದರ್ಭದಲ್ಲಿ ಜೈನ್ ಗೆ ಕಪ್ಪುಹಣವನ್ನು ಹುಬ್ಬಳ್ಳಿಯಲ್ಲಿ 40 ಪರ್ಸೆಂಟ್ ಕಮಿಷನ್ ಪಡೆದು ವಿನಿಮಯ ಮಾಡಿಕೊಡುತ್ತಾರೆ ಎಂದು ಯಾರೋ ಮಾಹಿತಿ ಕೊಟ್ಟಿದ್ದರು.
ಆ ಮಾಹಿತಿ ನಂಬಿದ್ದ ಪ್ರವೀಣ್ ಜೈನ್ ಹಾಗೂ ಶ್ರೀನಿವಾಸ್ ಮೂರ್ತಿ ಕಾರಿನಲ್ಲಿ 60 ಲಕ್ಷ ರೂಪಾಯಿ ಹಣವನ್ನು ಹುಬ್ಬಳ್ಳಿಯ ಅರಿಹಂತ್ ಬಡವಾಣೆಯಲ್ಲಿರುವ ತಮ್ಮ ಸಹೋದರಿ ಇರುವ ಬಡಾವಣೆಗೆ ತಂದಿದ್ದರು. ಆದರೆ ಹುಬ್ಬಳ್ಳಿಗೆ ಬಂದಾಗಲೇ ಅವರಿಗೆ ತಪ್ಪಿನ ಅರಿವಾಗಿದ್ದು, ಯಾರೂ ಕೂಡಾ ಕಪ್ಪು ಹಣ ಪಡೆದು, ವಿನಿಮಯ ಮಾಡಿಕೊಳ್ಳುತ್ತಿಲ್ಲ ಎಂಬುದು!
ಹೀಗೆ ಪರದಾಡುತ್ತಿದ್ದಾಗಲೇ 60 ಲಕ್ಷ ರುಪಾಯಿ ಕಪ್ಪು ಹಣದ ವಿಷಯ ಪೊಲೀಸರ ಕಿವಿಗೂ ತಲುಪಿತ್ತು. ಇದೀಗ ಪ್ರವೀಣ್ ಜೈನ್ ಹಾಗೂ ಶ್ರೀನಿವಾಸ ಮೂರ್ತಿ ಕೇಶ್ವಾಪುರ ಪೊಲೀಸರ ಅತಿಥಿಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT