ಕೊಡಗು: ದುಷ್ಕರ್ಮಿಗಳು ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ ಎಸ್ ಎಸ್)ದ ಕಾರ್ಯಕರ್ತರೊಬ್ಬರ ಕಾರಿಗೆ ಬೆಂಕಿ ಹಂಚಿಸಿದ ಘಟನೆ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಐಗೂರು ಗ್ರಾಮದಲ್ಲಿ ನಡೆದಿದೆ.
ಸೋಮವಾರಪೇಟೆಯ ವಕೀಲ ಹಾಗೂ ಆರ್ ಎಸ್ ಎಸ್ ಕಾರ್ಯಕರ್ತರೂ ಆಗಿರುವ ಕೆ.ಎಸ್ ಪದ್ಮನಾಭ ಅವರ ಕಾರಿಗೆ ಭಾನುವಾರ ರಾತ್ರಿ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಮನೆಯ ಬಳಿ ನಿಲ್ಲಿಸಿದ್ದ ಮಿನಿ ವ್ಯಾನ್ ಗೆ ಬೆಂಕಿ ಹಚ್ಚಿ ಸ್ಫೋಟಿಸಲಾಗಿದೆ ಎಂದು ಪದ್ಮನಾಭ್ ಅವರು ಇಂಡಿಯನ್ ಎಕ್ಸಪ್ರೆಸ್ ಗೆ ತಿಳಿಸಿದ್ದಾರೆ.
ಕಾರು ಭಾಗಶಃ ಸುಟ್ಟು ಹೋಗಿದ್ದು, ಸುಟ್ಟ ಕಾರನ್ನು ಸೋಮವಾರಪೇಟೆ ಪೊಲೀಸರು ಠಾಣೆಗೆ ತೆಗೆದುಕೊಂಡು ಹೋಗಿದ್ದಾರೆ.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಐಗೂರಿನಲ್ಲಿ ಜಮಾಯಿಸಿದ ಆರ್ ಎಸ್ ಎಸ್ ಕಾರ್ಯಕರ್ತರು, ಬೆಂಕಿ ಹಚ್ಚಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಸ್ಥಳಕ್ಕೆ ಉಪ ಪೊಲೀಸ್ ವರಿಷ್ಠಾಧಿಕಾರಿ ಸಂಪತ್ ಕುಮಾರ್ ಹಾಗೂ ಆರ್ ಎಎಫ್ ಸಿಬ್ಬಂದಿ ಆಗಮಿಸಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos