ರಾಘವೇಶ್ವರ ಸ್ವಾಮೀಜಿ 
ರಾಜ್ಯ

ರಾಘವೇಶ್ವರ ಶ್ರೀಗಳನ್ನು ಮಠದಿಂದ ತೆಗೆದು ಹಾಕಿ: ಸಿಜೆ ಕೆಂಡಾಮಂಡಲ

ಹೊಸನಗರದ ರಾಮಚಂದ್ರಾಪುರ ಮಠದ ಪೀಠಾಧ್ಯಕ್ಷ ಸ್ಥಾನದಿಂದ ರಾಘವೇಶ್ವರ ಸ್ವಾಮೀಜಿ ಅವರನ್ನು ಕೆಳಗಿಸಿ, ಆಡಳಿತಾಧಿಕಾರಿಯನ್ನು ನೇಮಿಸುವ ಕುರಿತ ...

ಬೆಂಗಳೂರು: ಹೊಸನಗರದ ರಾಮಚಂದ್ರಾಪುರ ಮಠದ ಪೀಠಾಧ್ಯಕ್ಷ ಸ್ಥಾನದಿಂದ ರಾಘವೇಶ್ವರ ಸ್ವಾಮೀಜಿ ಅವರನ್ನು ಕೆಳಗಿಸಿ, ಆಡಳಿತಾಧಿಕಾರಿಯನ್ನು ನೇಮಿಸುವ ಕುರಿತ ಮನವಿ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳದಿರುವ ಸರಕಾರದ ಕ್ರಮವನ್ನು ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ.

ಸರ್ಕಾರ ಎಷ್ಟು ದಿನವಾದರೂ ಮನವಿಯನ್ನು ಏಕೆ ಹಾಗೆಯೇ ಬಾಕಿ ಇಟ್ಟುಕೊಂಡಿದೆ ಎಂದು ಪೀಠ ತರಾಟೆಗೆ ತೆಗೆದುಕೊಂಡಿತು. ಸರ್ಕಾರ ಹಾಗೂ ಮುಖ್ಯ ಕಾರ್ಯದರ್ಶಿ ಆ ಬಗ್ಗೆ ಆದಷ್ಟು ಬೇಗ ನಿರ್ಧಾರ ಕೈಗೊಳ್ಳಲು ಸೂಚನೆ ನೀಡಿದ ನ್ಯಾಯಪೀಠ ವಿಚಾರಣೆಯನ್ನು ನ.21ಕ್ಕೆ ಮುಂದೂಡಿತು.

ಅರ್ಜಿದಾರರು, ರಾಘವೇಶ್ವರ ಸ್ವಾಮೀಜಿ ವಿರುದ್ಧ ಅತ್ಯಾಚಾರ ಆರೋಪವಿರುವ ಹಿನ್ನೆಲೆಯಲ್ಲಿ ಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಿಸುವಂತೆ ಸರಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಪಿಐಎಲ್‌ ಸಲ್ಲಿಸಿದ್ದರು.

ರಾಘ್ವವೇಶ್ವರ ಶ್ರೀಗಳು ಶೀಲಗೆಟ್ಟ ಸಂಬಂಧ ಹೊಂದಿದ್ದರು ಎಂಬ ಸಂಗತಿ ಈಗಾಗಲೇ ಅಧೀನ ನ್ಯಾಯಾಲಯದಲ್ಲಿ ತೀರ್ಮಾನವಾಗಿದ್ದರೇ ದಯಾಮಾಡಿ ಅವರನ್ನು ಪೀಠದಿಂದ ಕೆಳಗಿಳಿಸಿ, ನನ್ನ ಆತ್ಮ ಸಾಕ್ಷಿಗೆ ಆಘಾತವಾಗಿದೆ ಎಂದು ಅವರು ಹೇಳಿದ್ದಾರೆ.

ಕಳೆದ ಏ.28ರಂದು ಮೊದಲ ಬಾರಿಗೆ ಪಿಐಎಲ್‌ ವಿಚಾರಣೆಗೆ ಬಂದಾಗ, ರಾಘವೇಶ್ವರ ಸ್ವಾಮೀಜಿ, ಸರಕಾರ ಸೇರಿದಂತೆ ಎಲ್ಲ ಪ್ರತಿವಾದಿಗಳಿಗೆ ನ್ಯಾಯಪೀಠ ನೋಟಿಸ್‌ ಜಾರಿಗೊಳಿಸಿತ್ತು. ಅಲ್ಲದೆ, ಅರ್ಜಿದಾರರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಬೇಕು, ಅವರು ಎರಡೂ ಕಡೆ ವಾದ-ಪ್ರತಿವಾದ ಆಲಿಸಿ ಆದಷ್ಟು ಬೇಗ ಸೂಕ್ತ ಆದೇಶವನ್ನು ಹೊರಡಿಸಬೇಕು ಎಂದು ಆದೇಶ ನೀಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT