ಮುಖ್ಯಮಂತ್ರಿ ಸಿದ್ದರಾಮಯ್ಯ (ಸಂಗ್ರಹ ಚಿತ್ರ) 
ರಾಜ್ಯ

ಕನಕ ಜಯಂತಿ: ಬ್ಯಾಂಕುಗಳಿಗೆ ಇಂದು ರಜೆ ಇಲ್ಲ!

ನೋಟು ನಿಷೇಧದಿಂದ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿನ ಬೆನ್ನಲ್ಲೇ ಗುರುವಾರ ಕನಕ ಜಯಂತಿ ನಿಮಿತ್ತ ಇದ್ದ ರಜೆಯನ್ನು ರಾಜ್ಯ ಸರ್ಕಾರ ರದ್ದು ಮಾಡಿದೆ.

ಬೆಂಗಳೂರು: ನೋಟು ನಿಷೇಧದಿಂದ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿನ ಬೆನ್ನಲ್ಲೇ ಗುರುವಾರ ಕನಕ ಜಯಂತಿ ನಿಮಿತ್ತ ಇದ್ದ ರಜೆಯನ್ನು ರಾಜ್ಯ ಸರ್ಕಾರ ರದ್ದು ಮಾಡಿದೆ.

ಇಂದು ಕನಕ ಜಯಂತಿ ಪ್ರಯುಕ್ತ ಸರ್ಕಾರಿ ರಜೆ ಇದೆಯಾದರೂ, ನೋಟು ನಿಷೇಧದ ಬಳಿಕ ದೇಶಾದ್ಯಂತ್ಯ ಆರ್ಥಿಕ ಬಿಕ್ಕಟ್ಟು ವ್ಯಾಪಕವಾಗಿದೆ. ಈ ಹಿನ್ನಲೆಯಲ್ಲಿ ಪರಿಸ್ಥಿತಿ ಹತೋಟಿಗೆ ಬರುವವರೆಗೂ ಬ್ಯಾಂಕುಗಳಿಗೆ ರಜೆ ನೀಡಲು  ಆರ್ ಬಿಐ ಹಿಂದೇಟು ಹಾಕುತ್ತಿದ್ದು, ಬ್ಯಾಂಕುಗಳು ಹಾಗೂ ಅಂಚೆ ಕಚೇರಿಗಳ ಸರ್ಕಾರಿ ರಜೆಯನ್ನು ತಾತ್ಕಾಲಿಕವಾಗಿ ರದ್ದು ಮಾಡಿದೆ. ಇದೇ ರೀತಿಯ ಕ್ರಮವನ್ನು ರಾಜ್ಯ ಸರ್ಕಾರ ಕೂಡ ಕೈಗೊಂಡಿದ್ದು, ಗುರುವಾರ ಕನಕಜಯಂತಿ  ಆಚರಣೆ ಹೊರತಾಗಿಯೂ ರಾಜ್ಯ ಸರ್ಕಾರದ ಆಧೀನದಲ್ಲಿರುವ ಬ್ಯಾಂಕುಗಳ ರಜೆಯನ್ನು ರದ್ದುಗೊಳಿಸಲಾಗಿದೆ. ಹೀಗಾಗಿ ಇಂದೂ ಕೂಡ ಎಂದಿನಂತೆ ಬ್ಯಾಂಕುಗಳ ಕಾರ್ಯ ನಿರ್ವಹಿಸಲಿವೆ.

ಇನ್ನು ಕನಕ ಜಯಂತಿ ರಾಜ್ಯ ಸರ್ಕಾದ ವ್ಯಾಪ್ತಿಯಲ್ಲಿ ಬರುವುದರಿಂದ ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿ ಬರುವ ಬ್ಯಾಂಕುಗಳು ಮತ್ತು ಅಂಚೆಕಚೇರಿಗಳ ಕಾರ್ಯ ಎಂದಿನಂತೆ ಸಾಗಲಿವೆ.

ನವೆಂಬರ್ 8ರಂದು ಪ್ರಧಾನಿ ನರೇಂದ್ರ ಮೋದಿ ಅವರು 500 ಮತ್ತು 1000 ನೋಟುಗಳನ್ನು ನಿಷೇಧ ಮಾಡಿದ ಬಳಿಕ ಉಂಟಾಗಿರುವ ಆರ್ಥಿಕ ಬಿಕ್ಕಟ್ಟು ಮುಂದುವರೆದಿದ್ದು, ಸತತ 9 ದಿನಗಳೇ ಕಳೆದರೂ ಜನರ ಭವಣೆ ಮಾತ್ರ  ನೀಗಿಲ್ಲ. ಇಂದೂ ಕೂಡ ಜನರು ಬ್ಯಾಂಕುಗಳ ಮುಂದೆ ಗಂಟೆಗಟ್ಟಲೆ ಸರತಿ ಸಾಲಲ್ಲಿ ನಿಂತು ಹಣ ಬದಲಾವಣೆ ಮತ್ತು ಹಳೆಯ ನೋಟುಗಳನ್ನು ಠೇವಣಿ ಮಾಡುತ್ತಿದ್ದಾರೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಮಾತನಾಡಿದ್ದು, ಹೊಸ ನೋಟುಗಳಿಗಾಗಿ ಮತ್ತು ಹಳೆಯ ನೋಟುಗಳನ್ನು ಠೇವಣಿ ಮಾಡುವ ಸಲುವಾಗಿ ಜನ ಬ್ಯಾಂಕುಗಳಿಗೆ ಧಾವಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಕನಕಜಯಂತಿ ರಜೆಯನ್ನು ರದ್ದುಗೊಳಿಸಿ ಸರ್ಕಾರ ಸುತ್ತೋಲೆ  ಹೊರಡಿಸಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT