ಮೃತ ಸಿದ್ದಪ್ಪ 
ರಾಜ್ಯ

ತುಮಕೂರಿನಲ್ಲಿ ನೋಟ್ ಬದಲಾವಣೆಗಾಗಿ ಕ್ಯೂ ನಿಂತಿದ್ದ ಹಿರಿಯ ನಾಗರಿಕ ಸಾವು

ತುಮಕೂರಿನಲ್ಲಿ ಮೈಸೂರು ಬ್ಯಾಂಕಿನ ಮುಂದೆ ಸರತಿ ಸಾಲಿನಲ್ಲಿ ನಿಂತ 70 ವರ್ಷದ ಹಿರಿಯ ನಾಗರಿಕರೊಬ್ಬರು ಕ್ಯೂನಲ್ಲಿಯೇ ಜೀವಕಳೆದುಕೊಂಡಿದ್ದಾರೆ.

ತುಮಕೂರು: ತುಮಕೂರಿನಲ್ಲಿ ಮೈಸೂರು ಬ್ಯಾಂಕಿನ ಮುಂದೆ ಸರತಿ ಸಾಲಿನಲ್ಲಿ ನಿಂತ 70 ವರ್ಷದ ಹಿರಿಯ ನಾಗರಿಕರೊಬ್ಬರು ಕ್ಯೂನಲ್ಲಿಯೇ ಜೀವಕಳೆದುಕೊಂಡಿದ್ದಾರೆ. 
ತುಮಕೂರು ತಾಲ್ಲೂಕು ಚೇಳೂರಿನ ಎಸ್ ಬಿಎಂ ಬ್ಯಾಂಕಿನ ಮುಂದೆ ಇಂದು ಮಧ್ಯಾಹ್ನ 12.30 ಕ್ಕೆ ಸಿದ್ದಪ್ಪ(70) ಎಂಬುವವರು ನೋಟನ್ನು ಬದಲಾಸಿಕೊಳ್ಳಲು ಸರತಿ ಸಾಲಿನಲ್ಲಿ ನಿಂತಿದ್ದರು. ಇದ್ದಕ್ಕಿದ್ದಂತೆ ಹೃದಯಾಘಾತದಿಂದ ಕುಸಿದಿದ್ದಾರೆ. ಸರತಿ ಸಾಲಿನಲ್ಲಿ ನಿಂತಿದ್ದ ಜನರು ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯದರು. ಆದರೂ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ.
ಬ್ಯಾಂಕ್ ಗಳು ಇಂದು ದೇಶಾದ್ಯಂತ ಹಳೆ ನೋಟ್ ಗಳ ಬದಲಾವಣೆ ಸೇವೆಯನ್ನು ಕೇವಲ ಹಿರಿಯ ನಾಗರಿಕರಿಗೆ ಮಾತ್ರ ಮೀಸಲಿಟ್ಟದ್ದವು. ಹೀಗಾಗಿ ಬ್ಯಾಂಕಿನ ಮುಂದೇ ಹಿರಿಯ ನಾಗರಿಕರೇ ತುಂಬಿದ್ದರು.
ಐವತ್ತು ವರ್ಷ ಮೇಲ್ಪಟ್ಟ ವ್ಯಕ್ತಿಗಳಿಗೆ ನೋಟು ಬದಲಾವಣೆ ಮಾಡಲು ಅವಕಾಶ ಕಲ್ಪಿಸಿಕೊಡಬೇಕೆಂದು ಪ್ರತಿಪಕ್ಷಗಳು ಸರ್ಕಾರಕ್ಕೆ ಒತ್ತಾಯಿಸಿದ್ದವು. ಹಾಗಯೇ ನೋಟಿನ ಕಾರಣದಿಂದಾಗಿ ಆದ ಅನೇಕ ಸಾವು ನೋವುಗಳಿಗೆ ಸರ್ಕಾರದ ದಿಢೀರ್ ನಿರ್ಧಾರವೇ ಕಾರಣ ಎಂದು ಆರೋಪಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

‘ನೇಪಾಳಿಗರೇ, ನೀವು ಒಂಟಿಯಲ್ಲ, ನಾನು ನಿಮ್ಮೊಂದಿಗೆ ನಿಲ್ಲುತ್ತೇನೆ’: ಪ್ರವಾಹ ಪೀಡಿತ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಬಾಲಿವುಡ್ ನಟ ಸೋನು ಸೂದ್!

'ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ': ಕಿಚ್ಚ ಸುದೀಪ್ ದಿಢೀರ್ ಪೋಸ್ಟ್; ಇಲ್ಲಿದೆ ಕಾರಣ...

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್‌ ಅಭಿಷೇಕ್​ ಸೇರಿ ಇಬ್ಬರು ಸಾವು; Video