ಮೃತ ಸಿದ್ದಪ್ಪ 
ರಾಜ್ಯ

ತುಮಕೂರಿನಲ್ಲಿ ನೋಟ್ ಬದಲಾವಣೆಗಾಗಿ ಕ್ಯೂ ನಿಂತಿದ್ದ ಹಿರಿಯ ನಾಗರಿಕ ಸಾವು

ತುಮಕೂರಿನಲ್ಲಿ ಮೈಸೂರು ಬ್ಯಾಂಕಿನ ಮುಂದೆ ಸರತಿ ಸಾಲಿನಲ್ಲಿ ನಿಂತ 70 ವರ್ಷದ ಹಿರಿಯ ನಾಗರಿಕರೊಬ್ಬರು ಕ್ಯೂನಲ್ಲಿಯೇ ಜೀವಕಳೆದುಕೊಂಡಿದ್ದಾರೆ.

ತುಮಕೂರು: ತುಮಕೂರಿನಲ್ಲಿ ಮೈಸೂರು ಬ್ಯಾಂಕಿನ ಮುಂದೆ ಸರತಿ ಸಾಲಿನಲ್ಲಿ ನಿಂತ 70 ವರ್ಷದ ಹಿರಿಯ ನಾಗರಿಕರೊಬ್ಬರು ಕ್ಯೂನಲ್ಲಿಯೇ ಜೀವಕಳೆದುಕೊಂಡಿದ್ದಾರೆ. 
ತುಮಕೂರು ತಾಲ್ಲೂಕು ಚೇಳೂರಿನ ಎಸ್ ಬಿಎಂ ಬ್ಯಾಂಕಿನ ಮುಂದೆ ಇಂದು ಮಧ್ಯಾಹ್ನ 12.30 ಕ್ಕೆ ಸಿದ್ದಪ್ಪ(70) ಎಂಬುವವರು ನೋಟನ್ನು ಬದಲಾಸಿಕೊಳ್ಳಲು ಸರತಿ ಸಾಲಿನಲ್ಲಿ ನಿಂತಿದ್ದರು. ಇದ್ದಕ್ಕಿದ್ದಂತೆ ಹೃದಯಾಘಾತದಿಂದ ಕುಸಿದಿದ್ದಾರೆ. ಸರತಿ ಸಾಲಿನಲ್ಲಿ ನಿಂತಿದ್ದ ಜನರು ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯದರು. ಆದರೂ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ.
ಬ್ಯಾಂಕ್ ಗಳು ಇಂದು ದೇಶಾದ್ಯಂತ ಹಳೆ ನೋಟ್ ಗಳ ಬದಲಾವಣೆ ಸೇವೆಯನ್ನು ಕೇವಲ ಹಿರಿಯ ನಾಗರಿಕರಿಗೆ ಮಾತ್ರ ಮೀಸಲಿಟ್ಟದ್ದವು. ಹೀಗಾಗಿ ಬ್ಯಾಂಕಿನ ಮುಂದೇ ಹಿರಿಯ ನಾಗರಿಕರೇ ತುಂಬಿದ್ದರು.
ಐವತ್ತು ವರ್ಷ ಮೇಲ್ಪಟ್ಟ ವ್ಯಕ್ತಿಗಳಿಗೆ ನೋಟು ಬದಲಾವಣೆ ಮಾಡಲು ಅವಕಾಶ ಕಲ್ಪಿಸಿಕೊಡಬೇಕೆಂದು ಪ್ರತಿಪಕ್ಷಗಳು ಸರ್ಕಾರಕ್ಕೆ ಒತ್ತಾಯಿಸಿದ್ದವು. ಹಾಗಯೇ ನೋಟಿನ ಕಾರಣದಿಂದಾಗಿ ಆದ ಅನೇಕ ಸಾವು ನೋವುಗಳಿಗೆ ಸರ್ಕಾರದ ದಿಢೀರ್ ನಿರ್ಧಾರವೇ ಕಾರಣ ಎಂದು ಆರೋಪಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT