ಮೃತ ಸಿದ್ದಪ್ಪ 
ರಾಜ್ಯ

ತುಮಕೂರಿನಲ್ಲಿ ನೋಟ್ ಬದಲಾವಣೆಗಾಗಿ ಕ್ಯೂ ನಿಂತಿದ್ದ ಹಿರಿಯ ನಾಗರಿಕ ಸಾವು

ತುಮಕೂರಿನಲ್ಲಿ ಮೈಸೂರು ಬ್ಯಾಂಕಿನ ಮುಂದೆ ಸರತಿ ಸಾಲಿನಲ್ಲಿ ನಿಂತ 70 ವರ್ಷದ ಹಿರಿಯ ನಾಗರಿಕರೊಬ್ಬರು ಕ್ಯೂನಲ್ಲಿಯೇ ಜೀವಕಳೆದುಕೊಂಡಿದ್ದಾರೆ.

ತುಮಕೂರು: ತುಮಕೂರಿನಲ್ಲಿ ಮೈಸೂರು ಬ್ಯಾಂಕಿನ ಮುಂದೆ ಸರತಿ ಸಾಲಿನಲ್ಲಿ ನಿಂತ 70 ವರ್ಷದ ಹಿರಿಯ ನಾಗರಿಕರೊಬ್ಬರು ಕ್ಯೂನಲ್ಲಿಯೇ ಜೀವಕಳೆದುಕೊಂಡಿದ್ದಾರೆ. 
ತುಮಕೂರು ತಾಲ್ಲೂಕು ಚೇಳೂರಿನ ಎಸ್ ಬಿಎಂ ಬ್ಯಾಂಕಿನ ಮುಂದೆ ಇಂದು ಮಧ್ಯಾಹ್ನ 12.30 ಕ್ಕೆ ಸಿದ್ದಪ್ಪ(70) ಎಂಬುವವರು ನೋಟನ್ನು ಬದಲಾಸಿಕೊಳ್ಳಲು ಸರತಿ ಸಾಲಿನಲ್ಲಿ ನಿಂತಿದ್ದರು. ಇದ್ದಕ್ಕಿದ್ದಂತೆ ಹೃದಯಾಘಾತದಿಂದ ಕುಸಿದಿದ್ದಾರೆ. ಸರತಿ ಸಾಲಿನಲ್ಲಿ ನಿಂತಿದ್ದ ಜನರು ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯದರು. ಆದರೂ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ.
ಬ್ಯಾಂಕ್ ಗಳು ಇಂದು ದೇಶಾದ್ಯಂತ ಹಳೆ ನೋಟ್ ಗಳ ಬದಲಾವಣೆ ಸೇವೆಯನ್ನು ಕೇವಲ ಹಿರಿಯ ನಾಗರಿಕರಿಗೆ ಮಾತ್ರ ಮೀಸಲಿಟ್ಟದ್ದವು. ಹೀಗಾಗಿ ಬ್ಯಾಂಕಿನ ಮುಂದೇ ಹಿರಿಯ ನಾಗರಿಕರೇ ತುಂಬಿದ್ದರು.
ಐವತ್ತು ವರ್ಷ ಮೇಲ್ಪಟ್ಟ ವ್ಯಕ್ತಿಗಳಿಗೆ ನೋಟು ಬದಲಾವಣೆ ಮಾಡಲು ಅವಕಾಶ ಕಲ್ಪಿಸಿಕೊಡಬೇಕೆಂದು ಪ್ರತಿಪಕ್ಷಗಳು ಸರ್ಕಾರಕ್ಕೆ ಒತ್ತಾಯಿಸಿದ್ದವು. ಹಾಗಯೇ ನೋಟಿನ ಕಾರಣದಿಂದಾಗಿ ಆದ ಅನೇಕ ಸಾವು ನೋವುಗಳಿಗೆ ಸರ್ಕಾರದ ದಿಢೀರ್ ನಿರ್ಧಾರವೇ ಕಾರಣ ಎಂದು ಆರೋಪಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT