ಬಿಎಂಸಿಆರ್ ಐ 
ರಾಜ್ಯ

ಬೆಂಗಳೂರಿನಲ್ಲಿ ವೈದ್ಯಕೀಯ ಕಾಲೇಜ್ ಉಪನ್ಯಾಸಕಿ ಆತ್ಮಹತ್ಯೆಗೆ ಯತ್ನ

ಹಿರಿಯ ಪ್ರಾಧ್ಯಾಪಕರೊಬ್ಬರು ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ ಮುಂದೆಯೇ ತಮ್ಮನ್ನು ನಿಂದಿಸಿದರು ಎಂದು ಆರೋಪಿಸಿ ಬೆಂಗಳೂರು...

ಬೆಂಗಳೂರು: ಹಿರಿಯ ಪ್ರಾಧ್ಯಾಪಕರೊಬ್ಬರು ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ ಮುಂದೆಯೇ ತಮ್ಮನ್ನು ನಿಂದಿಸಿದರು ಎಂದು ಆರೋಪಿಸಿ ಬೆಂಗಳೂರು ವೈದ್ಯಕೀಯ ಕಾಲೇಜ್ ಮತ್ತು ಸಂಶೋಧನಾ ಸಂಸ್ಥೆ(ಬಿಎಂಸಿಆರ್ ಐ)ಯ ಉಪನ್ಯಾಸಕಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶನಿವಾರ ಬೆಳಕಿಗೆ ಬಂದಿದೆ.
ಪೊಲೀಸರ ಪ್ರಕಾರ, ಬಿಎಂಸಿಆರ್ ಐಯಲ್ಲಿ ಉಪನ್ಯಾಸಕಿಯಾಗಿದ್ದ 40 ವರ್ಷದ ಡಾ.ಮಮತಾ ಅವರು ನವೆಂಬರ್ 17ರಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಆದರೆ ವಿದ್ಯಾರ್ಥಿಗಳು ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಆತ್ಮಹತ್ಯೆಗೆ ಯತ್ನಿಸುವ ಮುನ್ನ ಡಾ. ಮಮತಾ ಅವರು ಬಿಎಂಆರ್ ಸಿಐ ನಿರ್ದೇಶಕ ಪಿ.ಕೆ.ದೇವದಾಸ್ ಅವರಿಗೆ ಪತ್ರ ಬರೆದಿದ್ದು, ಅದರಲ್ಲಿ ಹಿರಿಯ ಪ್ರಾಧ್ಯಾಪಕಿ ಡಾ.ಹೇಮಾವತಿ ಅವರು ತಮ್ಮನ್ನು ನಿಂದಿಸಿರುವುದಾಗಿ ದೂರಿದ್ದಾರೆ. ಅಲ್ಲದೆ ಈ ಬಗ್ಗೆ ಪದೇಪದೆ ದೂರು ನೀಡಿದರು ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಸಹ ಹೇಳಿದ್ದಾರೆ.
ಇನ್ನು ಈ ಬಗ್ಗೆ ಇಂಡಿಯನ್ ಎಕ್ಸ್ ಪ್ರೆಸ್ ಗೆ ಪ್ರತಿಕ್ರಿಯಿಸಿದ ಡಾ.ಪಿ.ಕೆ.ದೇವದಾಸ್ ಅವರು, ಹೇಮಾವತಿ ಮತ್ತು ಮಮತಾ ಇಬ್ಬರು ಉಪನ್ಯಾಸಕರಾಗಿದ್ದು, ಬಹಳ ದಿನಗಳಿಂದ ವೈಯಕ್ತಿಕ ಕಾರಣಗಳಿಗಾಗಿ ಅವರಿಬ್ಬರ ಮಧ್ಯ ಜಗಳ ನಡೆಯುತ್ತಿತ್ತು. ಮಮತಾ ಅವರು ಆತ್ಮಹತ್ಯೆಗೆ ಯತ್ನಿಸುವ ಕಠಿಣ ನಿರ್ಧಾರ ತೆಗೆದುಕೊಂಡಿದ್ದಾರೆ. ಇಬ್ಬರಿಗೂ ನಾವು ಆಪ್ತ ಸಮಾಲೋಚನೆ ನಡೆಸಿದ್ದೇವೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT