ಸಾಂದರ್ಭಿಕ ಚಿತ್ರ 
ರಾಜ್ಯ

ಬರಪೀಡಿತ ಕರ್ನಾಟಕದಲ್ಲಿ ಮತ್ತಷ್ಟು ಹರಿಯಲಿದೆ ಮದ್ಯದ ಹೊಳೆ

ಮುಂಬರುವ ಹೊಸ ವರ್ಷ ಮದ್ಯಪ್ರಿಯರಿಗೆ ಮತ್ತಷ್ಟು ಖುಷಿ ತರಲಿದೆ. ರಾಜ್ಯದ 224 ವಿಧಾನ ಸಭೆ ಕ್ಷೇತ್ರಗಳಲ್ಲಿ ಪ್ರತಿ ಕ್ಷೇತ್ರಕ್ಕೆ 4 ಅಂಗಡಿಗಳಂತೆ, ಮೈಸೂರು ಸೇಲ್ಸ್ ...

ಬೆಳಗಾವಿ: ಮುಂಬರುವ ಹೊಸ ವರ್ಷ ಮದ್ಯಪ್ರಿಯರಿಗೆ ಮತ್ತಷ್ಟು ಖುಷಿ ತರಲಿದೆ. ರಾಜ್ಯದ 224 ವಿಧಾನ ಸಭೆ ಕ್ಷೇತ್ರಗಳಲ್ಲಿ ಪ್ರತಿ ಕ್ಷೇತ್ರಕ್ಕೆ 4 ಅಂಗಡಿಗಳಂತೆ, ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ ಮೂಲಕ 900 ಮದ್ಯದ ಅಂಗಡಿಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದೆ.

ತಮ್ಮ ತವರು ಜಿಲ್ಲೆ ಹಾಸನದಲ್ಲಿ ಎಂಎಸ್ ಐಎಲ್ ಮಳಿಗೆ ಆರಂಭಿಸಲು ವಿಳಂಭವಾಗುತ್ತಿರುವ ಬಗ್ಗೆ ಚರ್ಚೆ ನಡೆಸಿದರು. ಎಂಎಸ್ ಐಎಲ್ ಮಳಿಗೆ ತೆರೆಯದ ಕಾರಣ ಅನಧಿಕೃತ ಸಾರಾಯಿ ಅಂಗಡಿಗಳಲ್ಲಿ ಹೆಚ್ಚಿನ ದರ ವಿಧಿಸಲಾಗುತ್ತಿದೆ ಎಂದು ಆರೋಪಿಸಿದರು. ಇದಕ್ಕೆ ಉತ್ತರಿಸಿದ ಅಬಕಾರಿ ಸಚಿವ ಎಚ್ ವೈ ಮೇಟಿ  2014-15ನೇ ಸಾಲಿನಲ್ಲಿ 16, 2015-16ನೇ ಸಾಲಿನಲ್ಲಿ 6 ಮಾರಾಟ ಮಳಿಗೆ ತೆರೆಯಲಾಗಿತ್ತು. ಜಿಲ್ಲಾಧಿಕಾರಿಗಳು ಮತ್ತು ಅಬಕಾರಿ ಇಲಾಖೆ ಮೂಲಕ ಸರ್ವೆ ಮಾಡಿಸಿ ಅಗತ್ಯವೆಂದು ಕಂಡು ಬಂದ ಜಾಗಗಳನ್ನು ಗುರುತಿಸಿ ಹೊಸದಾಗಿ 900 ಸಗಟು ಮಾರಾಟ ಮಳಿಗೆಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ಕಳೆದ ವರ್ಷ 464 ಮಾರಾಟ ಮಳಿಗೆಗಳನ್ನು ಮಂಜೂರು ಮಾಡಲಾಗಿತ್ತು ಆದರೆ 40 ಸಹ ಪ್ರಾರಂಭವಾಗಿಲ್ಲ ಎಂದರು.

ರಾಜ್ಯದಲ್ಲಿ ಗಂಭೀರ ಬರ ಪರಿಸ್ಥಿತಿ ಇದೆ. ಜನರಿಗೆ ಕುಡಿಯಲು ನೀರಿಲ್ಲ. ಆದರೆ, ಸರ್ಕಾರ ಮದ್ಯ ಕುಡಿಸಿ ವ್ಯಾಪಾರ ಹೆಚ್ಚು ಮಾಡಿಕೊಳ್ಳಲು ಯತ್ನಿಸುತ್ತಿದೆ ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ತರಾಟೆಗೆ ತೆಗೆದುಕೊಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT