ಸಾಂದರ್ಭಿಕ ಚಿತ್ರ 
ರಾಜ್ಯ

ಶಿರಸಿ: ಕಾಡುಹಂದಿ ಬೇಟೆಗಾರರ ಗುಂಡಿಗೆ ವ್ಯಕ್ತಿ ಬಲಿ

ಕಾಡು ಹಂದಿ ಬೇಟೆಯಾಡಲು ಬಂದಿದ್ದ ತಂಡವೊಂದು ಸಿಡಿಸಿದ ಗುಂಡಿಗೆ ಆಕಸ್ಮಿಕವಾಗಿ ವ್ಯಕ್ತಿ ಬಲಿಯಾಗಿರುವ ಘಟನೆ ಸಿರಸಿ ತಾಲೂಕಿನ ಅರಣ್ಯ ಪ್ರದೇಶದಲ್ಲಿ ...

ಶಿರಸಿ: ಕಾಡು ಹಂದಿ ಬೇಟೆಯಾಡಲು ಬಂದಿದ್ದ ತಂಡವೊಂದು ಸಿಡಿಸಿದ ಗುಂಡಿಗೆ ಆಕಸ್ಮಿಕವಾಗಿ ವ್ಯಕ್ತಿ ಬಲಿಯಾಗಿರುವ ಘಟನೆ ಶಿರಸಿ ತಾಲೂಕಿನ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಸಿದ್ದಾಪುರ ತಾಲೂಕಿನ ದೇವಿಸರೆ ಗ್ರಾಮದ ನಾಗರಾಜ್ ನಾಯ್ಕರ್ ಮೃತ ವ್ಯಕ್ತಿ. ನಾಗರಾಜ್ ಭಾನುವಾರ ಸುಮಾರು 10 ರಿಂದ 15 ಮಂದಿ ತಂಡವಿದ್ದ ಗುಂಪಿನ ಜೊತೆ ಕಾಡು ಹಂದಿ ಭೇಟೆಗೆ ಹೊರಟಿದ್ದ,ಈ ವೇಳೆ ತಂಡದಲ್ಲಿದ್ದ ವ್ಯಕ್ತಿಯ ಕೈಯ್ಯಲ್ಲಿದ್ದ ಬಂದೂಕಿನಿಂದ ನಾಗರಾಜ್ ಗೆ ಗುಂಡು ತಗುಲಿದ್ದು ಆತ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾನೆ.

ಸ್ಥಳಕ್ಕೆ ಶಿರಸಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಲ್ಲಿ ಮತ್ತೊಬ್ಬ ವ್ಯಕ್ತಿ ಕೂಡ ಗಾಯಗೊಂಡಿದ್ದಾನೆ ಎನ್ನಲಾಗಿದೆ,. ಆದರೆ ಪೊಲೀಸರಿಗೆ ಈ ಬಗ್ಗಾ ಯಾವುದೇ ಸುಳಿವು ಸಿಕ್ಕಿಲ್ಲ. ಈ ಸಂಬಂಧ ಎಫ್ ಐ ಆರ್ ದಾಖಲಾಗಿದ್ದು, ಗುಂಡು ಹಾರಿಸಿದ್ದು ಯಾರು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT