ಉಗ್ರ ಇಮ್ರಾನ್ ಬಿಲಾಲ್ (ಸಂಗ್ರಹ ಚಿತ್ರ) 
ರಾಜ್ಯ

ಬಂಧಿತ ಲಷ್ಕರ್ ಉಗ್ರ ಇಮ್ರಾನ್ ಬಿಲಾಲ್ ಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ

ಸಿಸಿಬಿ ಪೊಲೀಸರಿಂದ ಬಂಧಿತನಾಗಿದ್ದ ಇಮ್ರಾನ್ ಬಿಲಾಲ್ ಉಗ್ರಗಾಮಿ ಎಂದು ನ್ಯಾಯಾಲಯದಲ್ಲಿ ತೀರ್ಪು ನೀಡಲಾಗಿದ್ದು, ಬುಧವಾರ ಆತನ ಶಿಕ್ಷೆ ಪ್ರಮಾಣವನ್ನು ಘೋಷಣೆ ಮಾಡುವುದಾಗಿ ತಿಳಿದುಬಂದಿದೆ..

ಬೆಂಗಳೂರು: ಸಿಸಿಬಿ ಪೊಲೀಸರಿಂದ ಬಂಧಿತನಾಗಿದ್ದ ಇಮ್ರಾನ್ ಬಿಲಾಲ್ ಉಗ್ರಗಾಮಿ ಎಂದು ನ್ಯಾಯಾಲಯದಲ್ಲಿ ತೀರ್ಪು ನೀಡಲಾಗಿದ್ದು, ಬುಧವಾರ ಆತನ ಶಿಕ್ಷೆ ಪ್ರಮಾಣವನ್ನು ಘೋಷಣೆ ಮಾಡುವುದಾಗಿ ತಿಳಿದುಬಂದಿದೆ.

ಇಮ್ರಾನ್ ಬಿಲಾಲ್ ಬಂಧನ ಸಂಬಂಧ ನಡೆದ ಸುಧೀರ್ಘ ವಿಚಾರಣೆ ಬಳಿಕ ಇಂದು ತೀರ್ಪು ನೀಡಿರುವ 56ನೇ ಸೆಷನ್ಸ್ ನ್ಯಾಯಾಲಯ ಆತನನ್ನು ಅಪರಾಧಿ ಎಂದು ತೀರ್ಪು ನೀಡಿದೆ.  ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೋಟ್ರಯ್ಯ ಎಂ ಹಿರೇಮಠ ಅವರು ಇಮ್ರಾನ್ ಬಿಲಾಲ್ ಅಪರಾಧಿಯಾಗಿದ್ದು, ನಾಳೆ ಆತನ ಶಿಕ್ಷೆ ಪ್ರಮಾಣವನ್ನು ಘೋಷಣೆ ಮಾಡುವುದಾಗಿ  ಹೇಳಿದ್ದಾರೆ.

ಕರ್ನಾಟಕದ ಖ್ಯಾತ ಮಾಹಿತಿ ಮತ್ತು ತಂತ್ರಜ್ಞಾನ ಸಂಸ್ಥೆಗಳಾದ ಇನ್ ಫೋಸಿಸ್ ಹಾಗೂ ವಿಪ್ರೋ ಕಚೇರಿಗಳ ಮೇಲೆ ದಾಳಿ ಮಾಡುವ ಉದ್ದೇಶದಿಂದ ಆಗಮಿಸಿದ್ದ ಇಮ್ರಾನ್ ಬಿಲಾಲ್ ನನ್ನು  2007ರಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದರು. ಹೊಸಪೇಟೆಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಇಮ್ರಾನ್ ಬಿಲಾಲ್ ನನ್ನು ಬಂಧಿಸಿದ್ದ ಪೊಲೀಸರು ಆತನಿಂದ ಎಕೆ 56 ಗನ್, 300 ಸುತ್ತು  ಜೀವಂತ ಗುಂಡುಗಳು, ಸ್ಯಾಟಲೈಟ್ ಫೋನ್ ಹಾಗೂ 5 ಗ್ರೆನೇಡ್ ಗಳನ್ನು ವಶಪಡಿಸಿಕೊಂಡಿದ್ದರು.

2007ರ ಜನವರಿ 5ರ ಮುಂಜಾನೆ ತಮಗೆ ಬಂದಿದ್ದ ಖಚಿತ ಮಾಹಿತಿಯಾಧಾರದ ಮೇಲೆ ದಾಳಿ ಮಾಡಿದ್ದ ಸಿಸಿಬಿ ಪೊಲೀಸರು ಗೊರಗುಂಟೆ ಪಾಳ್ಯದ ಕೈಗಾರಿಕಾ ಪ್ರದೇಶದಲ್ಲಿ ಖಾಸಗಿ ಬಸ್ ನಲ್ಲಿ  ಪ್ರಯಾಣ ಮಾಡುತ್ತಿದ್ದ ಇಮ್ರಾನ್ ಬಿಲಾಲ್ ನನ್ನು ಬಂಧಿಸಿದ್ದರು. 32 ವರ್ಷದ ಇಮ್ರಾನ್ ಬಿಲಾಲ್ ಮೂಲತಃ ಜಮ್ಮು ಮತ್ತು ಕಾಶ್ಮೀರದವನಾಗಿದ್ದು, ಪಾಕಿಸ್ತಾನದಲ್ಲಿ ಈತ ಉಗ್ರ ತರಬೇತಿ  ಪಡೆದಿದ್ದ ಎಂದು ಹೇಳಲಾಗುತ್ತಿದೆ. ಬಂಧನದ ಸಂದರ್ಭದಲ್ಲಿ ಆತನಿಂದ ವಿವಿಧ ಮೊಬೈಲ್ ಗಳು, ಹಲವು ಸಿಮ್ ಕಾರ್ಡ್ ಗಳು, ಬೆಂಗಳೂರು ನಗರದ ಮ್ಯಾಪ್ ಅನ್ನು ಕೂಡ ಪೊಲೀಸರು  ವಶಪಡಿಸಿಕೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT