ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ಯಾವುದೇ ಕಾರಣಕ್ಕೂ ನಾರಿಮನ್ ಬದಲಾವಣೆ ಇಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

ತಮ್ಮ ಪ್ರತಿಷ್ಠೆಗಾಗಿ ಸುಪ್ರೀಂಕೋರ್ಟ್ ಎದುರು ರಾಜ್ಯವನ್ನು ಬಲಿಪಶು ಮಾಡಿದ ಕರ್ನಾಟಕ ರಾಜ್ಯ ಪರ ವಕೀಲ ಫಾಲಿ ನಾರಿಮನ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮರ್ಥಿಸಿಕೊಂಡಿದ್ದಾರೆ...

ಬೆಂಗಳೂರು: ತಮ್ಮ ಪ್ರತಿಷ್ಠೆಗಾಗಿ ಸುಪ್ರೀಂಕೋರ್ಟ್ ಎದುರು ರಾಜ್ಯವನ್ನು ಬಲಿಪಶು ಮಾಡಿದ ಕರ್ನಾಟಕ ರಾಜ್ಯ ಪರ ವಕೀಲ ಫಾಲಿ ನಾರಿಮನ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮರ್ಥಿಸಿಕೊಂಡಿದ್ದಾರೆ.

ಕಾವೇರಿ ವಿವಾದ ಸಂಬಂಧ ರಾಜ್ಯದ ಪರ ವಕೀಲರನ್ನು ಬದಲಿಸುವಂತೆ ಮಾತುಗಳು ಹಾಗೂ ಆಗ್ರಹಗಳು ಕೇಳಿಬಂದ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ ಅವರು, ಯಾವುದೇ ಕಾರಣಕ್ಕೂ ನಾರಿಮನ್ ಬದಲಾವಣೆ ಇಲ್ಲ ಎಂದು ಹೇಳಿದ್ದಾರೆ.

ರಾಜ್ಯ ಪರ ವಕೀಲ ತಂಡದ ಮುಖ್ಯಸ್ಥ ನಾರಿಮನ್ ಅವರನ್ನು ಬದಲಾವಣೆ ಮಾಡುವುದಿಲ್ಲ. ನಾರಿಮನ್ ಅವರ ಸಾಮರ್ಥ್ಯ ಮತ್ತು ಬದ್ಧತೆಯನ್ನು ಯಾರೊಬ್ಬರೂ ಪ್ರಶ್ನಿಸಲಾಗದು. ರಾಜ್ಯದ ಪರ ವಕೀಲರಾಗಿ 32 ವರ್ಷಗಳ ಕಾಲ ಸುಧೀರ್ಘಾವಾಗಿ ಕೆಲಸ ಮಾಡಿದ್ದಾರೆ.

ಕಾವೇರಿ ವಿವಾದದ ಆಳ ಅಗಲದ ಬಗ್ಗೆ ಅವರಿಗೆ ಸಂಪೂರ್ಣ ಮಾಹಿತಿ ತಿಳಿದಿದೆ. ಹೀಗಾಗಿ ನಾರಿಮನ್ ಅವರ ಬದಲಾವಣೆ ಸಾಧ್ಯವಿಲ್ಲ. ಅ.18ರಂದು ನಡೆಯಲಿರುವ ವಿಚಾರಣೆಯಲ್ಲೂ ನಾರಿಮನ್ ಅವರೇ ರಾಜ್ಯದ ಪರವಾಗಿ ವಾದ ಮಂಡಿಸಲಿದ್ದಾರೆ. ತಂಡಕ್ಕೆ ಹೊಸಬರನ್ನು ಸೇರ್ಪಡೆ ಮಾಡುತ್ತೇವೆಯೇ ವಿನಃ ಯಾವುದೇ ಕಾರಣಕ್ಕೂ ತಂಡದ ಮುಖ್ಯಸ್ಥರ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

19 ವರ್ಷಗಳ ಹಳೆಯ ದಾಖಲೆ ಉಡೀಸ್: ಅಭಿಷೇಕ್, ಪಾಂಡೆ ಅಬ್ಬರ; ಜಿಂಬಾಬ್ವೆಗೆ 257 ರನ್‌ಗಳ ಬೃಹತ್ ಮೊತ್ತದ ಗುರಿ ನೀಡಿದ ಭಾರತ!

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

SCROLL FOR NEXT